ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಅಂದರೆ 25 ವರ್ಷಗಳ ಬಳಿಕ ಭಾರತ ಸೇಡು ತೀರಿಸಿಕೊಂಡಿದೆ.
1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು.
ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.
ದಾಖಲೆಯ ಶತಕದ ಜೊತೆಯಾಟ: ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು.
ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್ಗೆ ಮರಳಿದರು.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...