ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಅಂದರೆ 25 ವರ್ಷಗಳ ಬಳಿಕ ಭಾರತ ಸೇಡು ತೀರಿಸಿಕೊಂಡಿದೆ.
1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು.
ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.
ದಾಖಲೆಯ ಶತಕದ ಜೊತೆಯಾಟ: ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು.
ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್ಗೆ ಮರಳಿದರು.
Related

You Might Also Like
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...