NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ

ನನ್ನ ತಂದೆ ಅಗಲಿ ಏ.28ಕ್ಕೆ ಮೂರು ತಿಂಗಳುಗಳಾದವು ಆದರೂ ನಮ್ಮ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮತ್ತು 38 ತಿಂಗಳ ವೇತನ ಹಿಂಬಾಕಿ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ ಎಂದು ಅನಂತಸುಬ್ಬರಾವ್ ಅವರ ಪುತ್ರಿ ಹಾಗೂ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ಫೆಡರೇಷನ್ ನೂತನ ಅಧ್ಯಕ್ಷರೂ ಆದ ಜ್ಯೋತಿ ಅನಂತಸುಬ್ಬರಾವ್   ಅಸಮಾಧಾನ ವ್ಯಕ್ತಪಡಿಸಿದ್ದಾರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ತಂದೆ ಕಾಮ್ರೇಡ್ ಎಚ್.ವಿ. ಅನಂತಸುಬ್ಬರಾವ್ ನಮ್ಮನ್ನಗಲಿ ಇಂದಿಗೆ ಮೂರು ತಿಂಗಳುಗಳಾದವು. ಜನವರಿ 29ರಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಬೃಹತ್ ಹೋರಾಟದ ತಯಾರಿಯಲ್ಲಿದ್ದ ಅವರು ದಿಢೀರನೆ ಹೃದಯ ಸ್ತಂಭನಕ್ಕೆ ಒಳಗಾಗಿ ನಮ್ಮಿಂದ ಭೌತಿಕವಾಗಿ ದೂರವಾಗಿದ್ದಾರೆ.

ಅವರನ್ನು ತೀವ್ರವಾಗಿ ಕೊರೆಯುತ್ತಿದ್ದ ನಮ್ಮ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮತ್ತು 38 ತಿಂಗಳ ವೇತನ ಹಿಂಬಾಕಿ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ ಎಂದು ಅನಂತಸುಬ್ಬರಾವ್ ಅವರ ಪುತ್ರಿ ಹಾಗೂ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ಫೆಡರೇಷನ್ ನೂತನ ಅಧ್ಯಕ್ಷರೂ ಆದ ಜ್ಯೋತಿ ಅನಂತಸುಬ್ಬರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಏ.29ರಂದು ಸಂಧಾನ ಮಾತುಕತೆಗೆ ಕೆಎಸ್‌ಆರ್‌ಟಿಸಿ ಆಡಳಿತ ವರ್ಗ ಸಚಿವರ ಅಧ್ಯಕ್ಷತೆಯಲ್ಲಿ ಜಂಟಿ ಕ್ರಿಯಾ ಸಮಿತಿಯನ್ನು ಕರೆದಿದೆ. ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ಫೆಡರೇಷನ್ ಅಧ್ಯಕ್ಷರಾಗಿದ್ದ ಮತ್ತು ತಮ್ಮ ಬದುಕಿನ ಪ್ರತಿ ಕ್ಷಣವೂ ಸಾರಿಗೆ ಸಂಸ್ಥೆಯನ್ನೇ ಉಸಿರಾಡುತ್ತಿದ್ದ ನನ್ನೊಲವಿನ ತಂದೆಯೂ ಆಗಿದ್ದ ಕಾಮ್ರೇಡ್ ಎಚ್.ವಿ. ಅನಂತಸುಬ್ಬರಾವ್ ಅವರನ್ನು ಯಾವ ಗಳಿಗೆಯೂ ನಾವೂ ಮರೆಯಲಾಗದು ಎಂದಿದ್ದಾರೆ.

ಯಾರು ಏನೇ ಹೇಳಲಿ, ಅವರು ಸಾರಿಗೆ ನೌಕರರ ಹೋರಾಟದ ಇತಿಹಾಸದಲ್ಲಿ ಮಾತ್ರವಲ್ಲ, ಸಂಸ್ಥೆಯ ಸುದೀರ್ಘ ಚರಿತ್ರೆಯ ಪುಟಗಳಲ್ಲೂ ದಂತಕತೆಯಾಗಿ ಅಚ್ಚಳಿಯದೆ ಉಳಿಯಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ನನಗೆ ಪ್ರತಿ ತಿಂಗಳ 28ರ ಸಂಜೆ ಒಂದು ಕರಾಳ ರಾತ್ರಿಯಾಗಿ ಭಾಸವಾಗುತ್ತದೆ. ನನ್ನ ತಂದೆಯ ಪ್ರಾಮಾಣಿಕತೆ, ಸರಳತೆ, ಸಜ್ಜನಿಕೆ, ನಿರ್ಮಲ ಮತ್ತು ನಿಷ್ಕಲ್ಮಶ ಮನಸ್ಸು, ಸೈದ್ಧಾಂತಿಕ ಬದ್ಧತೆ, ನುಡಿದಂತೆ ನಡೆಯುವ ವ್ಯಕ್ತಿತ್ವ, ನಿಷ್ಠುರತೆ, ಶಿಸ್ತಿನ ಹಾಗೂ ಎಲ್ಲರನ್ನೂ ಪ್ರೀತಿಸುವ ಮಾನವೀಯ ಗುಣಗಳು ನಮ್ಮನ್ನು ರೂಪಿಸಿವೆ.

ಕಾಮ್ರೇಡ್ ಅನಂತಸುಬ್ಬರಾವ್, ಅಣ್ಣಾ, ನಿನ್ನನ್ನು ತುಂಬಾ… ತುಂಬಾ… ಮಿಸ್ ಮಾಡಿಕೊಳ್ಳುತ್ತಿದ್ದೇನೆ… ಪ್ರತಿ ಕ್ಷಣವೂ… ನಿನ್ನ ಕಾಯಕವೇ ನನ್ನದೂ… ಅದನ್ನು ಶ್ರದ್ಧೆಯಿಂದ ಮುಂದುವರೆಸುತ್ತೇನೆ ಎಂದು ಜ್ಯೋತಿ ಅನಂತಸುಬ್ಬರಾವ್ ಸಾಮಾಜಿಕ ಜಾಲತಾಣದ ಮೂಲಕ ಭರವಸೆಯ ಸ್ಫೂರ್ತಿದಾಯಕ ಆಶಯ ವ್ಯಕ್ತಪಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಸೌಲಭ್ಯ ಜಾರಿಗೆ ಮುಂದಾದ ಸಾರಿಗೆ ಇಲಾಖೆ