NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರ ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕುತ್ತಿದೆ: ಡಾ.ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಗಳು ಉದಯವಾಗಿರುವುದೇ ಭಾಷೆಯ ಆಧಾರದ ಮೇಲೆ. ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಅದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕು ಎಂಬ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಹಾಗೂ ಕರ್ನಾಟಕ ಜಲಸಂರಕ್ಷಣಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಅಲ್ಲದೆ ರಾಜ್ಯ ಸರ್ಕಾರವು ಅಕ್ರಮವಾಗಿ ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಕನ್ನಡಪರ ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲ ಕೇಸುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ಡಾ. ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮುಖ್ಯಮಂತ್ರಿ ಚಂದ್ರು, ಕನ್ನಡ ಪರ ಹೋರಾಟಗಾರರು ಯಾರ ಮೇಲಾದ್ರೂ ಹಲ್ಲೆ ಮಾಡಿದ್ದಾರ? ಕಾನೂನಿಗೆ ವಿರುದ್ಧವಾಗಿ ಹಾಕಿರುವ ನಾಮಫಲಕ ಕಿತ್ತುಹಾಕಿದ್ದಾರೆ. ನಿಯಮ ಪಾಲನೆಯಾಗಿಲ್ಲ ಎನ್ನುವುದನ್ನು ಎತ್ತಿ ತೋರಿಸಿದ್ದಾರೆ ಅಷ್ಟಕ್ಕೆ ಬಂಧಿಸಲಾಗಿದೆ. ಕೋಟಿ ಕೋಟಿ ಲೂಟಿ ಮಾಡಿದವರು, ಭ್ರಷ್ಟಾಚಾರ ಮಾಡಿದವರನ್ನು ಸುಮ್ಮನೆ ಬಿಡುವ ಸರ್ಕಾರ, ನಾಡು ನುಡಿಗಾಗಿ ಧ್ವನಿ ಎತ್ತಿದವರನ್ನು ಬಂಧಿಸುತ್ತಿದೆ. ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದರು.

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎನ್ನುವ ನಿಯಮ ಇದ್ದರೂ ಯಾಕೆ ಪಾಲನೆಯಾಗುತ್ತಿಲ್ಲ, ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಹೋರಾಟ ಮಾಡುವ ಮುನ್ನವೇ ಎಚ್ಚೆತ್ತು ಕನ್ನಡ ನಾಮಫಲಕ ಹಾಕದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಪ್ರತಿಭಟನೆ ಯಾಕೆ ನಡೆಯುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕಾನೂನು ಪಾಲನೆಯಾಗಿಲ್ಲ ಅಂದಾಗ ಬಿಬಿಎಂಪಿ ಅಧಿಕಾರಿಗಳು ಆ ನಾಮಫಲಕಗಳನ್ನು ತೆರವು ಮಾಡಬೇಕಿತ್ತು, ಅವರ ನಿರ್ಲಕ್ಷ್ಯ ಇದಕ್ಕೆಲ್ಲ ಕಾರಣ. ಹೋರಾಟ ಮಾಡುವವರೆಗೂ ಸುಮ್ಮನೆ ಇದ್ದು, ಈಗ ಫೆಬ್ರುವರಿ 28ರವರೆಗೆ ಗಡುವು ನೀಡಲಾಗಿದೆ. ರಾಜ್ಯಾದ್ಯಂತ ಎಲ್ಲ ಕಡೆ ನಾಮಫಲಕಗಳಲ್ಲಿ ನಿಯಮದಂತೆ ಕನ್ನಡ ಕಡ್ಡಾಯ ಆಗಬೇಕು ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರೇ ನೀವು ಯಾರ ಪರವಾಗಿ ಇದ್ದೀರಾ?. ನಾಡದ್ರೋಹಿಗಳು, ಶ್ರೀಮಂತರು, ನೆಲದ ಕಾನೂನು ಪಾಲಿಸದವರ ಪರವಾಗಿ ನಿಲ್ಲಬೇಡಿ. ಹೀಗೆ ಮಾಡಿದ್ರೆ ಬಂಡವಾಳ ಹೂಡಲ್ಲ ಅನ್ನುವ ಸಬೂಬು ಹೇಳುವುದು ಬಿಡಿ. ನಿಮಗೆ ಕಿಕ್ ಬ್ಯಾಕ್ ಬರುತ್ತೆ ಎಂದು ರಾಜ್ಯವನ್ನು ಬಲಿ ಕೊಡಬೇಡಿ, ಭಾಷೆಗೆ ಧಕ್ಕೆ ತರಬೇಡಿ ಎಂದು ಎಚ್ಚರಿಕೆ ನೀಡಿದರು.

ಕನ್ನಡ, ಕನ್ನಡಿಗರು, ಕರ್ನಾಟಕ ಹಾಳಾಗಿ ಹೋದರೂ ಚಿಂತೆಯಿಲ್ಲ ನನಗೆ ಬರಬೇಕಾದ ಕಿಕ್‌ ಬ್ಯಾಕ್ ಬರಲಿ ಎನ್ನುವಂತೆ ಸಚಿವ ಎಂ.ಬಿ. ಪಾಟೀಲ್ ಮಾತನಾಡಿದ್ದಾರೆ. ಇಂತಹ ಸರ್ಕಾರ ನಮಗೆ ಬೇಕಾ ಎಂದು ಪ್ರಶ್ನಿಸಿದರು.

ರಾಜ್ಯದಾದ್ಯಂತ ಹೋರಾಟವನ್ನು ವಿಸ್ತರಿಸಲಾಗುವುದು. ಕಾನೂನು ಪ್ರಕಾರವೇ ನಮ್ಮ ಹೋರಾಟ ನಡೆಯಲಿದೆ. ನಾಮಫಲಕ ಮಾತ್ರವೇ ಅಲ್ಲ, ಕನ್ನಡಿಗರಿಗೆ ಉದ್ಯೋಗ ಬೇಕು. ಶಿಕ್ಷಣದಲ್ಲಿ ಕನ್ನಡ ಬೇಕು, ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಆದ್ಯತೆ ಸಿಗಬೇಕು ಅಲ್ಲಿವರೆಗೂ ಹೋರಾಟ ಮುಂದುವರೆಯಲಿದೆ ಎಂದು ಮೋಹನ್ ದಾಸರಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಡಾ. ರಮೇಶ್ ಬೆಲ್ಲಂಕೊಂಡ, ಜಗದೀಶ್ ವಿ ಸದಂ, ಜಗದೀಶ್ ಚಂದ್ರ, ಸುಷ್ಮಾ ವೀರ, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಸೇರಿದಂತೆ ಪಕ್ಷದ ಇತರ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಹಲವು ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದವು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...