NEWSನಮ್ಮಜಿಲ್ಲೆನಮ್ಮರಾಜ್ಯ

ಸಾಧ್ಯವಾದಷ್ಟು ಬೇಗ ಸರ್ಕಾರ ನಮ್ಮೊಡನೆ ಮಾತುಕತೆ ಪುನರಾರಂಭಿಸಿ ಬೇಡಿಕೆ ಇತ್ಯರ್ಥ ಪಡಿಸಲಿ: ಎಂಡಿಗೆ ಮನವಿ ಸಲ್ಲಿಸಿದ ಸಮಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾಧ್ಯವಾದಷ್ಟು ಬೇಗ ಸರ್ಕಾರವು ನಮ್ಮೊಡನೆ ಮಾತುಕತೆಗಳನ್ನು ಪುನರಾರಂಭಿಸಿ ನಮ್ಮ ಬೇಡಿಕೆಗಳನ್ನು ಇತ್ಯರ್ಥ ಪಡಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರನ್ನು ಭೇಟಿ ಮನವಿ ಸಲ್ಲಿಸಿತು.

ಸೋಮವಾರ ಶಾಂತಿನಗರದ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಕ್ರಿಯಾ ಸಮಿತಿ ಪದಾಧಿಕಾರಿಗಳು ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿ, ಅವರಿಗೆ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಬೇಡಿಕೆಗಳು ಏನು? 1)ಸಾಧ್ಯವಾದಷ್ಟು ಬೇಗ ಸರ್ಕಾರವು ನಮ್ಮೊಡನೆ ಮಾತುಕತೆಗಳನ್ನು ಪುನರಾರಂಭಿಸಿ ನಮ್ಮ ಬೇಡಿಕೆಗಳನ್ನು ಇತ್ಯರ್ಥ ಪಡಿಸಬೇಕು. 2) ಚಾರ್ಜ್ ಶೀಟ್, ಶೋಕಾಸ್ ನೋಟೀಸ್ ಹಾಗೂ ಇತರೆ ಎಲ್ಲ ಶಿಸ್ತಿನ ಕ್ರಮಗಳನ್ನು ಬೇಷರತ್ತಾಗಿ ರದ್ದು ಮಾಡಬೇಕು.

3) ಉಚ್ಚ ನ್ಯಾಯಲಯದ ನಿರ್ದೇಶನದಂತೆ ಮುಷ್ಕರವನ್ನು ಕೈ ಬಿಟ್ಟಿದ್ದೇವೆಯೇ ವಿನಃ ಮುಷ್ಕರ ವಿಫಲವಾಗಿದೆ ಎಂಬ ಭಾವನೆಯಿಂದ ಅಧಿಕಾರಿಗಳು ಯಾವುದೇ ಹಂತದಲ್ಲೂ ನೌಕರರನ್ನು ಅಗೌರವದಿಂದ ನಡೆಸಿಕೊಳ್ಳಬಾರದು.

4) ಮುಷ್ಕರಕ್ಕೂ ಮುಂಚೆ ಅಥವಾ ಮುಷ್ಕರದ ಸಂದರ್ಭದಲ್ಲಿ ಯಾವುದಾದರೂ ನೌಕರನನ್ನು ಅಥವಾ ಅಧಿಕಾರಿಯನ್ನು ಅವರ ಇಷ್ಟದ ವಿರುದ್ಧ ವರ್ಗಾವಣೆ ಮಾಡಿದ್ದಲ್ಲಿ ಅಂತಹ ವರ್ಗಾವಣೆಯನ್ನು ರದ್ದು ಮಾಡಬೇಕು ಎಂಬ ಈ ನಾಲ್ಕೂ ಬೇಡಿಕೆಗಳನ್ನು ಸಲ್ಲಿಸಲಾಯಿತು.

ಈ ವೇಳೆ ಸಾವಧಾನದಿಂದ ಮನವಿಯನ್ನು ಆಲಿಸಿದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರು, ಸರ್ಕಾರದೊಡನೆ ಮಾತುಕತೆ ನಡೆಸುವುದಾಗಿಯೂ ಹಾಗೂ ಉಳಿದಂತೆ ಯಾವುದೇ ಸೇಡಿನ ಕ್ರಮವನ್ನು ತೆಗೆದುಕೊಳ್ಳುವ ಉದ್ದೇಶವಿಲ್ಲವೆಂದು ಭರವಸೆ ನೀಡಿದ್ದಾರೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ ಈಗ ಕೊಟ್ಟಿರುವ ಎಲ್ಲ ಆಪಾದನಾ ಪತ್ರ / ಶೋಕಾಸ್ ನೋಟೀಸ್‌ಗಳನ್ನು ರದ್ದು ಮಾಡಿ ಒಳ್ಳೆಯ ವಾತಾವರಣ ಸೃಷ್ಟಿಸಬೇಕೆಂದು ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಎಂಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಕಾರ್ಮಿಕರು ಯಾರು ಆತಂಕ ಪಡುವ ಅವಶ್ಯಕತೆ ಇಲ್ಲವೆಂದು ಪದಾಧಿಕಾರಿಗಳು ತಿಳಿಸಿದ್ದಾರೆ.

ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ಎಚ್.ವಿ.ಅನಂತ ಸುಬ್ಬರಾವ್, ಬಿ.ಜಯದೇವರಾಜೇ ಅರಸು, ಎಚ್.ಡಿ. ರೇವಪ್ಪ, ವೆಂಕಟರವಣಪ್ಪ, ಸೋಮಣ್ಣ ಹಾಗೂ ಎಚ್.ಆರ್. ಜಗದೀಶ ಮತ್ತಿತರರು ಇದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ