NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೂತನ ಎಂಡಿಗೆ ಸ್ವಾಗತ ಕೋರಿದ ನಿಗಮದ ನಿಕಟಪೂರ್ವ ಎಂಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್‌ ಅಧಿಕಾರಿ ಸದ್ಯ ಬಿಬಿಎಂಪಿಯಲ್ಲಿ ವಿಶೇಷ ಆರ್ಥಿಕ ಆಯುಕ್ತರಾಗಿರುವ ಆರ್.ರಾಮಚಂದ್ರನ್‌ ಮಂಗಳವಾರ ಅಧಿಕಾರಿ ವಹಿಸಿಕೊಂಡಿದ್ದಾರೆ.

ನಿಗಮದ ನಿಕಟಪೂರ್ವ ಎಂಡಿ, ಹಿರಿಯ ಐಎಎಸ್‌ ಅಧಿಕಾರಿ ಜಿ.ಸತ್ಯವತಿ ಅವರು ಗೂಗುಚ್ಛ ನೀಡುವ ಮೂಲಕ ನೂತನ ಎಂಡಿ ಅವರನ್ನು ಸ್ವಾಗತಿಸಿ ತಮ್ಮ ಅಧಿಕಾರಿರನ್ನು ಹಸ್ತಾಂತರಿಸಿದರು.

ಕಳೆದ ಒಂದೂವರೆ ವರ್ಷದಿಂದ ನಿಗಮದ ಎಂಡಿಯಾಗಿದ್ದ ಸತ್ಯವತಿ ಅವರಿಗೆ ಸದ್ಯ ಯಾವುದೇ ಹುದ್ದೆ ತೋರಿಸದೇ ವರ್ಗ ಮಾಡಲಾಗಿದೆ. ಆದರೆ, ನಿಗಮದಲ್ಲಿ ಕಳಹಂತತ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿದ ಇವರ ವಿರುದ್ಧ ಕೆಲ ಸಂಘಟನೆಗಳ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳುವುದಕ್ಕೆ ವರ್ಗಾವಣೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಒಬ್ಬ ನೌಕರರ ಪರವಾಗಿ ನಿಲ್ಲುವ ಅಧಿಕಾರಿಯನ್ನು ನೌಕರರ ಪರವಾದ ಸಂಘಟನೆಗಳೇ ವರ್ಗಾವಣೆ ಮಾಡಿಸುವ ಕುತಂತ್ರ ಬುದ್ಧಿ ತೋರಿಸುತ್ತವೆ ಎಂದರೆ ಇವುಗಳು ನೌಕರರ ಸಮಸ್ಯೆಗೆ ಎಷ್ಟರ ಮಟ್ಟಿಗೆ ಸ್ಪಂದಿಸುತ್ತವೆ ಎಂಬುದನ್ನು ನೌಕರರೇ ತಿಳಿದುಕೊಳ್ಳಬೇಕಿದೆ.

ಇನ್ನು ಮತ್ತೊಂದು ಸಂಘಟನೆ ನೌಕರರಿಗೆ ಸರ್ಕಾರ ಏನು ಮಾಡದಿದ್ದರೂ ಸಾರಿಗೆ ಸಂಭ್ರಮ ಮಾಡಲು ಹೊರಟಿದೆ. 38 ತಿಂಗಳ ವೇತನ ಅರಿಯರ್ಸ್‌ ಬಗ್ಗೆ ಈವರೆಗೂ ತುಟಿ ಬಿಚ್ಚದ ಸರ್ಕಾರದ ಯಾವ ಸಾಧನೆ ನೋಡಿ ಈ ಸಂಭ್ರಮವನ್ನು ಆಚರಿಸಲು ಹೊರಟಿದೆಯೋ ಕಾಣೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಎಲ್ಲವನ್ನು ನೋಡಿದರೆ ನೌಕರರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಹೇಳಿಕೊಂಡು ನಾಯಿಕೊಡೆಯಂತೆ ಹುಟ್ಟಿಕೊಂಡಿರುವ ಈ ಸಂಘಟನೆಗಳಿಂದ ಕಳೆದ 4 ದಶಕಗಳಿಂದ ನೌಕರರಿಗೆ ಒಳ್ಳೆಯದಕ್ಕಿಂತ ಕೆಟ್ಟ ಅನುಭವವೇ ಹೆಚ್ಚಾಗಿ ಆಗಿದೆ ಎಂದು ಹಿರಿಯ ನೌಕರರೊಬ್ಬರು ಕಿಡಿಕಾರಿದ್ದಾರೆ.

ಇನ್ನು ನಿಷ್ಠಾವಂತ ಅಧಿಕಾರಿಗಳನ್ನು ಎತ್ತಂಗಡಿ ಮಾಡಿಸುವ ಕೆಲಸ, ಹಣ ಮಾಡುವುದನ್ನೇ ದಂದೆ ಮಾಡಿಕೊಂಡು ಕೆಲ ಸಂಘಟನೆಗಳು ನೌಕರರನ್ನು ಯಾಮಾರಿಸಿಕೊಂಡು ಬರುವುದರಲ್ಲೇ ಕಾಲ ಕಳೆಯುತ್ತಿದ್ದು, ಇದಕ್ಕೆ ಅಧಿಕಾರಿ ವರ್ಗವೂ ಕಾರಣವಾಗಿದೆ. ಏಕೆಂದರೆ ಈ ಎಲ್ಲ ಸಂಘಟನೆಗಳನ್ನು ಬದಿಗೊತ್ತಿ ನಮ್ಮ ನಿಗಮದಲ್ಲಿನ ಸಮಸ್ಯೆಗಳನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಟೊಂಕಕಟ್ಟಿ ನಿಂತಿದ್ದರೆ ಈ ಸಮಸ್ಯೆಗಳು ಆಗುತ್ತಿರಲಿಲ್ಲ.

ಆದರೆ, ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ನಿಗಮದವನ್ನು ಬೇರೆಯವರು ಆಳುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ