ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಇದೇ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ ಮುಂದೂಡಿದೆ.
ಈ ಬಗ್ಗೆ ಅಧಿಕೃತವಾಗಿ ತಿಳಿಸಿರುವ ಜಂಟಿ ಕ್ರಿಯಾ ಸಮಿತಿ, 09.12.2024 ರಂದು ಜಂಟಿ ಕ್ರಿಯಾ ಸಮಿತಿಯು ಸಾರಿಗೆ ನಿಗಮಗಳ ಕಾರ್ಮಿಕರು ಡಿ.31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ನೋಟಿಸ್ ಅನ್ನು ಮುಖ್ಯಮಂತ್ರಿಯವರಿಗೆ ನೀಡಿತ್ತು. ಈ ಮಧ್ಯೆ ಆಡಳಿತ ವರ್ಗ ಕಾರ್ಮಿಕ ಇಲಾಖೆಯ ಮೂಲಕ ಡಿ.27ರಂದು ಕಾರ್ಮಿಕ ಆಯುಕ್ತರೊಂದಿಗೆ ರಾಜೀಸಂಧಾನ ಸಭೆಯನ್ನು ಏರ್ಪಡಿಸಿತ್ತು.
ಮಾಜಿ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರು ನಿಧನರಾದ ಕಾರಣ ರಾಜ್ಯ ಸರ್ಕಾರವು ಅಂದು ಶೋಕಾಚರಣೆಯ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಿದ ಪರಿಣಾಮ ಸಂಧಾನ ಸಭೆ ಡಿ.30 ಕ್ಕೆ ಮುಂದೂಡಿಕೆಯಾಗಿದೆ.
ಈ ನಡುವೆ ಇಂದು (ಡಿ.29) ಸಂಜೆ ಮುಖ್ಯಮಂತ್ರಿಗಳ ಜತೆ ಸಾರಿಗೆ ಸಚಿವರು, ಸಾರಿಗೆ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು, ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳು ನಡೆಸಿದ ಸಭೆಯ ಫಲಶೃತಿಯಾಗಿ, ಸಾರಿಗೆ ಸಚಿವರು ಜಂಟಿ ಕ್ರಿಯಾ ಸಮಿತಿಗೆ ಉದ್ದೇಶಿತ ಸಾರಿಗೆ ಮುಷ್ಕರವನ್ನು ಹಿಂಪಡೆಯಬೇಕೆಂದು ಲಿಖಿತವಾಗಿ ಮನವಿ ಮಾಡಿದ್ದಾರೆ.
ಅಲ್ಲದೆ ಸಂಕ್ರಾಂತಿ ಹಬ್ಬದ ನಂತರ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯ ಮಂತ್ರಿಗಳ ಜತೆ ಸಭೆ ಏರ್ಪಡಿಸುವುದಾಗಿ ಕೋರಿರುವ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಲಾಗಿದ್ದ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿಯು ಒಮ್ಮತದಿಂದ ಮುಂದೂಡಿದೆ.
ಗಾಗಿ ಜಂಟಿ ಕ್ರಿಯಾ ಸಮಿತಿಯ ಮುಷ್ಕರದ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕರಿಗೂ, ಜಂಟಿ ಕ್ರಿಯಾ ಸಮಿತಿಯ ಸಹಭಾಗಿ ಸಂಘಟನೆಗಳ ಎಲ್ಲ ಕಾರ್ಯಕರ್ತರಿಗೂ ನಾವು ಅಭಿನಂದನೆಗಳನ್ನು ತಿಳಿಸುತ್ತೇವೆ. ಈ ಸಂದರ್ಭದಲ್ಲಿ ಸಾಧಿಸಲಾದ ಕಾರ್ಮಿಕರ ಐಕ್ಯತೆಯನ್ನು ಮುಂದೆಯೂ ಕಾಪಾಡಿಕೊಳ್ಳಬೇಕೆಂದು ಎಲ್ಲ ನೌಕರರಲ್ಲಿ ಮನವಿ ಮಾಡುತ್ತೇವೆ.
ನಮ್ಮೊಡನೆ, ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಒಪ್ಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ, ಸಾರಿಗೆ ಸಚಿವರಾದ ಸ ರಾಮಲಿಂಗಾರೆಡ್ಡಿಯವರಿಗೂ, ಸಾರಿಗೆ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳಿಗೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲ ಸಂಘಟನೆಗಳಿಗೂ ವಂದನೆಗಳನ್ನು ಸಲ್ಲಿಸುತ್ತೇವೆ ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮುಷ್ಕರವನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಎಲ್ಲ ನೌಕರರೂ ಡಿ.31ರಿಂದ ಕೆಲಸಕ್ಕೆ ಹಾಜರಾಗಬೇಕೆಂದು ಎಲ್ಲ ನೌಕರರಿಗೂ ವಿನಂತಿಸುತ್ತೇವೆ ಎಂದು ತಿಳಿಸಿದ್ದಾರೆ.
Related

You Might Also Like
ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...