ಮಡಿಕೇರಿ: ದೇಶದಲ್ಲಿ ಯೋಧರ ಬಗ್ಗೆ ಅಪಾರವಾದ ಕಾಳಜಿ ಹಾಗೂ ಗೌರವವಿದೆ. ದೇಶ ಕಾಯುವ ಸೈನಿಕರಿಗೆ ಅವಶ್ಯಬಿದ್ದಾಗ ಒಂದಲ್ಲ ಒಂದು ರೀತಿಯಲ್ಲಿ ನಮ್ಮಿಂದ ಸಾಧ್ಯವಾಗುವ ಅಳಿಲ ಸೇವೆ ಕೂಡ ಮಾಡುತ್ತಿರುತ್ತೇವೆ. ಆದರೆ ಯೋಧನ ವಿಷಯದಲ್ಲಿ KSRTC ಬಸ್ಸೊಂದರ ಚಾಲಕ ಹಾಗೂ ನಿರ್ವಾಹಕರು ಏಕೋ ಸ್ವಲ್ಪ ಮಾನವೀಯತೆ ಮರೆತ್ತಂತೆ ಕಾಣುತ್ತಿದೆ.
ಮನವಿ ಮಾಡಿದರೂ ಕೂಡ ರಿಕ್ವೆಸ್ಟ್ ಸ್ಟಾಪ್ ಕೊಡದ ಕಾರಣ, ಯೋಧರೊಬ್ಬರು ನಡುರಾತ್ರಿ 2 ಕಿಮೀ ಗಿಂತಲೂ ಹೆಚ್ಚು ದೂರ ನಡೆದು ಮನೆ ಸೇರಿದ್ದಾರೆ.
ಆ ರಾತ್ರಿ ನಡೆದಿದ್ದಿಷ್ಟು: ತ್ರಿಪುರದಲ್ಲಿ ಕರ್ತವ್ಯದಲ್ಲಿರುವ ಕೊಡಗು ಜಿಲ್ಲೆಯ ಯೋಧರೊಬ್ಬರು ರಜೆಯಲ್ಲಿ ಅಲ್ಲಿಂದ ನಾಲ್ಕು ದಿನ ನಿದ್ದೆಗೆಟ್ಟು ಕೊಡಗಿಗೆ ಬಂದಿದ್ದಾರೆ. ಮೊನ್ನೆ ದಿನ ತುರ್ತಾಗಿ ಉಡುಪಿಗೆ ತೆರಳಿದ್ದವರು ಸಂಜೆ ಮಂಗಳೂರಿಗೆ ಹಿಂತಿರುಗಿ ಅಲ್ಲಿಂದ KSRTC ಬಸ್ಸಿನಲ್ಲಿ ಮಡಿಕೇರಿಗೆ ಪ್ರಯಾಣಿಸಿದ್ದಾರೆ.
ಆಗ ತಡರಾತ್ರಿಯಾಗಿದ್ದ ಕಾರಣ ಊರಿಗೆ ತಲುಪುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ಸುದರ್ಶನ ಸರ್ಕಲ್ ಬಳಿಯಲ್ಲಿರುವ ಸಹೋದರನ ಮನೆಗೆ ಹೋಗಲು ನಿರ್ಧರಿಸಿದ್ದಾರೆ. ಬಸ್ ಮಡಿಕೇರಿ ನಿಲ್ದಾಣ ತಲುಪಿದಾಗ ಚಾಲಕ ಹಾಗೂ ನಿರ್ವಾಹಕನ ಬಳಿ ಸುದರ್ಶನ ಸರ್ಕಲ್ ಬಳಿ ಬಸ್ ನಿಲ್ಲಿಸುವಂತೆ ರಿಕ್ವೆಸ್ಟ್ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಇವರಿಬ್ಬರು ನಿರಾಕರಿಸಿದ್ದಾರೆ.
ಈ ವೇಳೆ ತಾನು ಮಿಲಿಟರಿಯವನು ಎಂದು ತಿಳಿಸಿದರೂ ಕೂಡ ಚಾಲನಾ ಸಿಬ್ಬಂದಿ ಒಪ್ಪಲಿಲ್ಲ. ಸುಂಟಿಕೊಪ್ಪಕ್ಕೆ ಟಿಕೆಟ್ ತೆಗೆದು ಕೊಳ್ಳುವುದಾಗಿ ಹೇಳಿದರೂ ಕೂಡ ಬಸ್ ನಿಲ್ಲಿಸಲು ಆಗುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ. ಕೊನೆಗೆ ವಿಧಿ ಇಲ್ಲದೆ ಮಧ್ಯರಾತ್ರಿ ಮಡಿಕೇರಿ ಬಸ್ ನಿಲ್ದಾಣದಲ್ಲೇ ಇಳಿದ ಇಳಿದ ಸುದರ್ಶನ ಸರ್ಕಲ್ ವರೆಗೆ ನಡೆದುಕೊಂಡೇ ಹೋಗಿ ಸಹೋದರನ ಮನೆ ತಲುಪಿದ್ದಾರೆ.
ಇನ್ನು ಈ ಯೋಧರಿಗೆ ಹಗಲಿರುಳು ನಡೆದುಕೊಂಡು ಹೋಗುವುದು ಪ್ರಯಾಸವಲ್ಲ. ಅದೇ ರೀತಿ ನಿಯಮ ಪ್ರಕಾರ ಮಾರ್ಗಮಧ್ಯದಲ್ಲಿ ಬಸ್ ನಿಲ್ಲಿಸಲು ಅವಕಾಶವಿಲ್ಲ ಆದರೂ ಮುಂದಿನ ಊರಿಗೆ ಟಿಕೆಟ್ ನೀಡಿಯಾದರೂ ಯೋಧನನ್ನು ಮಾನವೀಯತೆ ದೃಷ್ಟಿಯಿಂದ ಬಸ್ ಸಾಗುವ ಮಾರ್ಗಮಧ್ಯೆ ಇರುವ ಸುದರ್ಶನ್ ಸರ್ಕಲ್ ಬಳಿ ಇಳಿಸಬಹುದಿತ್ತು.
ದೇಶದ ಹಲವೆಡೆ ಊರಿಗೆ ರಜೆಯಲ್ಲಿ ತೆರಳಿದ್ದ ಯೋಧರನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಜೆ ಮೊಟಕುಗೊಳಿಸಿ ವಾಪಸ್ ಕರೆಸಿಕೊಳ್ಳಲಾಗುತ್ತಿದೆ. ಉತ್ತರಾಖಂಡದಲ್ಲಿ ಯೋಧರಿಗೆ ಟ್ಯಾಕ್ಸಿ ಚಾಲಕರು 50% ರಿಯಾಯಿತಿಯನ್ನು ನೀಡುತ್ತಿದ್ದಾರೆ.
ಕೆಲವೆಡೆ ಉಚಿತ ಸೇವೆಯನ್ನು ಸಹ ನೀಡಲಾಗುತ್ತಿದೆ. ಸೈನಿಕರಿಗಾಗಿ ಸೀಟುಗಳನ್ನು ಕಾಯ್ದಿರಿಸಲಾಗಿದೆ. ಇವೆಲ್ಲ ಪ್ರಚಾರಗೊಳ್ಳದ ಮೌನ ಸೇವೆಗಳಾಗಿವೆ. ಆದರೆ.. ನಮ್ಮೂರಲ್ಲಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ ಎಂದು ಯೋಧ ಬೇಸರ ವ್ಯಕ್ತ ಪಡಿಸಿದ್ದಾರೆ.
ಅಲ್ಲದೇ ಇನ್ನು ಮುಂದಾದರೂ KSRTC ಚಾಲಕರು ಮತ್ತು ನಿರ್ವಾಹಕರು ಯೋಧರೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತಾಗಲಿ ಎಂದು ಆಶಿಸಿರುವ ಯೋಧ ಕ್ಯೂಟ್ ಕೂರ್ಗ್ ನೊಂದಿಗೆ ಮೇ 9ರಂದು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.
Related

You Might Also Like
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...