NEWSVideosವಿಡಿಯೋ

KSRTC ನೌಕರರ ವೇತನ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಒಕ್ಕೂಟದ ಸಭೆಯೂ ವಿಫಲ ಮತ್ತೆ ಡಿ.5ಕ್ಕೆ ನಿಗದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಸಂಜೆ ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ KSRTC ನೌಕರರ ಒಕ್ಕೂಟದ ಪದಾಧಿಕಾರಿಗಳ ಸಭೆಯಲ್ಲಿಯೂ ಯಾವುದೇ ಅಂತಿಮ ತೀರ್ಮಾನವಾಗದೆ ವಿಫಲಗೊಂಡಿದೆ.

ಮತ್ತೆ ಡಿಸೆಂಬರ್‌ 5ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಪದಾಧಿಕಾರಿಗಳ ಸಭೆ ಆಯೋಜಿಸುವಂತೆ ಸಿಎಂ ತಿಳಿಸಿದ್ದಾರೆ ಅಂದು ಮತ್ತೆ ಚರ್ಚೆಯಾಗಿಲಿದೆ ಎಂದು ಒಕ್ಕೂಟದ ಮುಖಂಡರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಸಭೆಯಲ್ಲಿ ಏನಾಯಿತು?: ನಮಗೆ 2020 ಜನವರಿ 1ರಿಂದ ಶೇ.15ರಷ್ಟು ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಕೊಡಿ ಮತ್ತೆ 2024 ಜನವರಿ 1ರಿಂದಲೇ ಸರಿಸಮಾನ ವೇತನ ಜಾರಿ ಮಾಡಿ ಎಂದು ಸಭೆಯಲ್ಲಿ ಒತ್ತಾಯಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಮನಗೆ ಈ ನಾಲ್ಕು ವರ್ಷಕ್ಕೊ ಆಗುತ್ತಿರುವ ಜಂಜಾಟ ಬೇಡ ಹೀಗಾಗಿ ತಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಚರ್ಚಿಸಿದ್ದೇವೆ. ಹೀಗಾಗಿ ಮತ್ತೆ ಡಿ.6ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದರು.

ಇಂದು ನಡೆದ ಜಂಟಿ ಕ್ರಿಯಾ ಸಮಿತಿ ಹಾಗೂ ನೌಕರರ ಒಕ್ಕೂಟ ಈ ಎರಡೂ ಸಭೆಯಲ್ಲಿಯೂ ಯಾವುದೂ ಕೂಡ ಅಂತಿಮವಾಗಿಲ್ಲ. ಹೀಗಾಗಿ ಮತ್ತೆ ಡಿಸೆಂಬರ್‌ 5 ಹಾಗೂ 6ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಜತೆಗೆ ಮತ್ತೊಂದು ಸಭೆ ನಡೆಯಲಿದೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ