NEWSನಮ್ಮರಾಜ್ಯಸಂಸ್ಕೃತಿ

ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟ : ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶ ಕಂಡ ಅಪರೂಪದ ಸಂತ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾನೂ ಭಾಗಿಯಾಗುತ್ತೇನೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಕ್ಷಕ್ಷ ಪೃಥ್ವಿ ರೆಡ್ಡಿ ಸಂತಾಪ ಸೂಚಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

“ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಮನುಕುಲವನ್ನು ಸರಿದಾರಿಯಲ್ಲಿ ಕೊಂಡೊಯ್ಯಲು ಜೀವನ ಪರ್ಯಂತ ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಹಾಗೂ ಅಪಾರ ಜ್ಞಾನವು ನಮಗೆಲ್ಲರಿಗೂ ಮಾದರಿಯಾಗಬೇಕಿದೆ. ಅತ್ಯಂತ ಸರಳ ಜೀವನವನ್ನು ಅನುಸರಿಸಿದ ಅವರು ನಡೆಗೂ ನುಡಿಗೂ ಅಂತರವಿಲ್ಲದಂತೆ ಬದುಕಿದ್ದರು. ಸಮಾಜಕ್ಕೆ ಸ್ಫೂರ್ತಿಯಾಗುವಂತೆ ಜೀವನದ ಪ್ರತಿಕ್ಷಣವನ್ನೂ ಕಳೆಯುತ್ತಿದ್ದ ಸ್ವಾಮೀಜಿಯವರು ನಮ್ಮೊಂದಿಗೆ ಇನ್ನೂ ಹಲವು ವರ್ಷಗಳು ಇರಬೇಕಿತ್ತು” ಎಂದ ಪೃಥ್ವಿ ರೆಡ್ಡಿ ಕಣ್ಣಾಲಿಗಳು ತೇವವಾದವು.

“ಕಠಿಣವಾದ ವಿಷಯಗಳನ್ನೂ ಅತ್ಯಂತ ಸರಳವಾಗಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಹೇಳುವ ಕೌಶಲ್ಯತೆ ಸಿದ್ದೇಶ್ವರ ಸ್ವಾಮೀಜಿಯವರಿಗೆ ಇತ್ತು. ಅವರ ಮಧುರವಾದ ಮಾತು, ಪ್ರಖರ ವಿಷಯ ಹಾಗೂ ಪ್ರಬುದ್ಧ ಚಿಂತನೆಯು ಎಂತಹವರನ್ನೂ ಆಕರ್ಷಿಸುತ್ತಿತ್ತು. ಅಧ್ಯಾತ್ಮದ ಜೊತೆಗೆ ವಿಜ್ಞಾನ, ಕೃಷಿ, ಶಿಕ್ಷಣ, ಪರಿಸರಕ್ಕೆ ಸಂಬಂಧಿಸಿದ ವಿಚಾರಗಳಲ್ಲೂ ಅವರು ಆಸಕ್ತಿ ಹೊಂದಿದ್ದರು. ಗಿಡಗಳಿಂದ ಹೆಚ್ಚು ಹೂವುಗಳನ್ನು ಕೀಳಬಾರದೆಂದು ಕೇವಲ ಒಂದೇ ಹೂವಿನಿಂದ ದೇವರನ್ನು ಪೂಜಿಸುತ್ತಿದ್ದ ಅವರದ್ದು ಹೂವಿನಷ್ಟೇ ಸೂಕ್ಷ್ಮವಾದ ಮನಸ್ಸಾಗಿತ್ತು” ಎಂದು ತಿಳಿಸಿದರು.

“ಸಿದ್ದೇಶ್ವರ ಸ್ವಾಮೀಜಿಯವರು ಜೀವನದುದ್ದಕ್ಕೂ ಅದ್ಭುತ ಸಾಧನೆ ಮಾಡಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದರೂ, ಸಾಮಾನ್ಯರಲ್ಲಿ ಸಾಮಾನ್ಯರಂತೆ ಜನರೊಂದಿಗೆ ಬೆರೆಯುತ್ತಿದ್ದರು. ಐಶಾರಾಮಿ ಉಡುಗೊರೆ, ಪ್ರಶಸ್ತಿಗಳನ್ನೆಲ್ಲ ತಿರಸ್ಕರಿಸಿ ಬದುಕಿದ್ದ ಅವರು ನಿಜಕ್ಕೂ ನಡೆದಾಡುವ ದೇವರು. ಅವರ ಅಪಾರ ಸಂಖ್ಯೆಯ ಭಕ್ತರು, ಅಭಿಮಾನಿಗಳಿಗೆ ಅವರ ನಿಧನದ ದುಃಖವನ್ನು ನೀಗಿಸಿಕೊಳ್ಳುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ