ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕು.
ಈ ಬಾಕಿ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ ಎಂದರು.
ಇನ್ನು ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50, 60:40, 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ₹46,859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ ₹24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ ₹22,758 ಕೋಟಿಗಳಿದ್ದು ಕೇಂದ್ರದಿಂದ ₹18,561ಕೋಟಿ ಮಾತ್ರ ಬಿಡುಗಡೆ ಆಗಿದೆ. ₹4,195 ಕೋಟಿ ರೂಪಾಯಿ ಬಿಡುಗಡೆ ಆಗಿಲ್ಲ ಎಂದು ವಿವರಿಸಿದರು.
ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83 ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025-26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ ಎಂದರು.
ಅಲ್ಲದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ನೀಡಲೇಬೇಕು. ಈ ಸಂಬಂಧ ಕೇಂದ್ರದ ಪಾಲು ನೀಡಲು ಪತ್ರ ಬರೆದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
Related

You Might Also Like
KSRTC ಕೋಲಾರ: ನೌಕರರ ದುಡಿಮೆಗೆ ತಕ್ಕ ವೇತನಕೊಡದೆ ಕಾಡುತ್ತಿರುವ ಡಿಸಿ, ಡಿಟಿಒಗಳ ಅಮಾನತು ಮಾಡಿ- ಸಾರಿಗೆ ಸಚಿವರಿಗೆ ಸೈಕಲ್ ರೆಡ್ಡಿ ಪತ್ರ
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೋಲಾರ ವಿಭಾಗದ ನಿಯಂತ್ರಣಾಧಿಕಾರಿಗಳ ಅಧಿಕಾರ ದುರ್ಬಳಕೆ, ನೌಕರರಿಗೆ ಕಿರುಕುಳ ಮತ್ತು ಲಂಚಾವತಾರ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು...
KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ...
ನಿವೃತ್ತಿಗೆ ಮುನ್ನವೇ ನೌಕರರ ವಿಚಾರಣೆ ಮುಗಿದಿರಬೇಕು ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮದ ಖಡಕ್ ಎಚ್ಚರಿಕೆ
ಬೆಂಗಳೂರು: ವೃತ್ತಿಯಲ್ಲಿರುವ ಸಂದರ್ಭದಲ್ಲಿ ದುರ್ನಡತೆ, ಕರ್ತವ್ಯಲೋಪದಂತಹ ಆರೋಪಗಳನ್ನು ಎದುರಿಸುವ ಸರ್ಕಾರಿ ನೌಕರರು, ಅವರು ನಿವೃತ್ತರಾಗುವ ಮುನ್ನವೇ ಅವರ ವಿರುದ್ಧದ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ...
KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್ ಮುಖಂಡ, ವಕೀಲ ಶಂಕರೇಗೌಡ ಆಗ್ರಹ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ....
ಮೈಸೂರು: ಶೀಘ್ರದಲ್ಲೇ ಕಬಿನಿ ನೀರು ಹೊರ ವಲಯ ಬಡಾವಣೆಗಳಿಗೆ ಪೂರೈಕೆ: ಶಾಸಕ ಜಿಟಿಡಿ
ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರೂಪಾ ನಗರದಲ್ಲಿ ಸ್ಥಳೀಯ...
ಜಮೀರ್ ರಾಜೀನಾಮೆಗೆ ಸಾಗರ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯ
ಶಿವಮೊಗ್ಗ: ವಸತಿ ಇಲಾಖೆಯಿಂದ ಮನೆಗಳನ್ನು ಪಡೆಯಲು ಲಂಚ ನೀಡಬೇಕು ಎಂಬ ಶಾಸಕ ಬಿ. ಆರ್. ಪಾಟೀಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ...
ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ- 2-3 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದ NWKRTC ಅಧ್ಯಕ್ಷ ರಾಜುಕಾಗೆ
ಕಾಗವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿಡುತ್ತಿದ್ದಾರೆ. ಜತೆಗೆ ಸರ್ಕಾರ...
KSRTC ಮೈಸೂರು: ಸರಿಸಮಾನ ವೇತನ ಕೊಡಿ- ಎಂಡಿಗೆ ಮನವಿ ಮಾಡಿದ ಸಂಸ್ಥೆಯ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಸನ್ಮಾನ ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ಪಾಷ ಅವರನ್ನು ಕರ್ನಾಟಕ...
ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಸ್ವೀಕರಿಸಿದ ಮಾಜಿ ಪ್ರಧಾನಿ ದೇವೇಗೌಡ್ರು
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ನಗರದಲ್ಲಿ ಇಂದು ದೇವೇಗೌಡ ಅಭಿನಂದನಾ ಸಮಿತಿ...