NEWSಕೃಷಿದೇಶ-ವಿದೇಶ

ಕುಸಿದ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಲೆ ಸಂಕಷ್ಟದಲ್ಲಿ ಅನ್ನದಾತ: ನೇರ ಖರೀದಿ ಕೇಂದ್ರಕ್ಕೆ ಕೋರಿದ ಸಂಸದ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಪ್ರಮುಖ ಬೆಳೆಯಾದ, ಜಿ.ಐ. (GI) ಟ್ಯಾಗ್ ಹೊಂದಿರುವ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಳೆಗಾರರು ಎದುರಿಸುತ್ತಿರುವ ತೀವ್ರ ಮಾರುಕಟ್ಟೆ ಬಿಕ್ಕಟ್ಟಿನ ಕುರಿತು ಸಂಸದ ಡಾ. ಕೆ. ಸುಧಾಕರ್  ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಭೌಗೋಳಿಕ ರಾಜಕೀಯ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ರಫ್ತು ಆಧಾರಿತ ಬೆಳೆಯ ಮಾರುಕಟ್ಟೆ ಕುಸಿದಿದೆ. ಹಿಂದೆ ಪ್ರತಿ ಚೀಲಕ್ಕೆ ₹1,200 ರಿಂದ ₹1,500 ಇರುತ್ತಿದ್ದ ಬೆಲೆ ಈಗ ₹100ಕ್ಕಿಂತ ಕೆಳಕ್ಕೆ ಇಳಿದಿರುವುದು ರೈತರನ್ನು ತೀವ್ರ ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಮಾರಾಟವಾಗದ ಈರುಳ್ಳಿ ರಾಶಿಗಳು ಮಳೆಯಿಂದ ಕೊಳೆಯುವ ಭೀತಿಯಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಕೇಂದ್ರ ಸಚಿವರಿಗೆ ಪತ್ರ: ಈ ಬಿಕ್ಕಟ್ಟನ್ನು ಪರಿಹರಿಸಲು ಡಾ. ಸುಧಾಕರ್ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ರೈತರು ಅನಿವಾರ್ಯವಾಗಿ ಸಂಕಷ್ಟದ ಮಾರಾಟಕ್ಕೆ (Distress Sale) ಮುಂದಾಗುವುದನ್ನು ತಪ್ಪಿಸಲು ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಅಥವಾ ನೇರ ಖರೀದಿ ಪ್ರಕ್ರಿಯೆ ಆರಂಭಿಸಬೇಕೆಂದು ಅವರು ಕೋರಿದ್ದಾರೆ.

ಅಲ್ಲದೆ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಿರುವ ಅವರು, ಪರ್ಯಾಯ ರಫ್ತು ಮಾರುಕಟ್ಟೆಗಳನ್ನು ಹುಡುಕುವುದು, ರಫ್ತು ಉತ್ತೇಜಕ ಸೌಲಭ್ಯ ನೀಡುವುದು ಹಾಗೂ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವು ನೀಡುವ ಮೂಲಕ ಈ ಬೆಳೆಯ ಆರ್ಥಿಕ ಲಾಭದಾಯಕತೆಯನ್ನು ಕಾಪಾಡಬೇಕೆಂದು ವಿನಂತಿಸಿದ್ದಾರೆ.

ದೀರ್ಘಕಾಲೀನ ಪರಿಹಾರಕ್ಕೆ ಆಗ್ರಹ: ಕೇವಲ ತಾತ್ಕಾಲಿಕ ಕ್ರಮಗಳಷ್ಟೇ ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಯಡಿ (PMKSY) ಈ ಭಾಗದಲ್ಲಿ ಈರುಳ್ಳಿ ನಿರ್ಜಲೀಕರಣ (Dehydration) ಮತ್ತು ಉಪ್ಪಿನಕಾಯಿ ತಯಾರಿಕಾ ಘಟಕಗಳಂತಹ ಸಂಸ್ಕರಣಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಇದರಿಂದ ರೈತರು ಕೇವಲ ಹಸಿ ಈರುಳ್ಳಿಯ ರಫ್ತಿನ ಮೇಲೆ ಅವಲಂಬಿತವಾಗುವುದು ತಪ್ಪುತ್ತದೆ ಎಂದು ಸುಧಾಕರ್ ಸಲಹೆ ನೀಡಿದ್ದಾರೆ.

ನಮ್ಮ ಅನ್ನದಾತರ ಶ್ರಮಕ್ಕೆ ನ್ಯಾಯ ಸಿಗಬೇಕು ಮತ್ತು ಅವರ ಜೀವನೋಪಾಯಕ್ಕೆ ಧಕ್ಕೆಯಾಗಬಾರದು. ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿ, ಕೂಡಲೇ ಬೆಳೆಗಾರರ ರಕ್ಷಣೆಗೆ ಧಾವಿಸಲಿದೆ ಎಂಬ ವಿಶ್ವಾಸವನ್ನು ಸಂಸದರು ವ್ಯಕ್ತಪಡಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ: ಸಚಿವ ಮುನಿಯಪ್ಪ ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಟ್ಟು ಪರಿಸರ ಜಾಗೃತಿ ವಿದೇಶದಲ್ಲಿ ಕನ್ನಡ ಕಲಿಕೆ: ‘ಕರ್ನಾಟಕ ಸಂಘ ಕತಾರ್’ನ ಅಧ್ಯಕ್ಷ ಸುಬ್ರಮಣ್ಯ ಅಭಯ KARNATAKA- ಸರ್ಕಾರಿ ನೌಕರರಿಗೆ ಇನ್ನು ಮುಂದೆ ಬಯೋಮೆಟ್ರಿಕ್‌ ಬದಲಿಗೆ AI ಜಿಪಿಎಸ್‌ ಆಧರಿತ ಹಾಜರಾತಿ ಕಡ್ಡಾಯ: ಸಿಎಸ್‌... ಸಚಿವ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ: ಸಿಎಂ ಡಿಕೆಶಿ ಕೊಟ್ಟ ಮಾತು ತಪ್ಪಿದ್ದಕ್ಕೆ ಈ ನಿರ್ಧಾರ ಎ... KSRTC ನಾಲ್ಕೂ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯಡಿ ಮೇ, ಜೂನ್‌ ತಿಂಗಳುಗಳ 860 ಕೋಟಿ ರೂ. ಅನುದಾನ ಬಿಡುಗಡೆ KKRTC: ಪ್ರತಿ ತಿಂಗಳು 1ರಂದೇ ವೇತನ ಆಗುತ್ತಿತ್ತು- ಈ ಬಾರಿ ಮೇ ತಿಂಗಳ ವೇತನ ಇನ್ನೂ ಆಗಿಲ್ಲ, ಗೊಂದಲದಲ್ಲಿ ನೌಕರರು! ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌: ಹೊರಬಿದ್ದ ಸರ್ಕಾರದ ಅಧಿಕೃತ ಆದೇಶ ಕೊಟ್ಟ ಮಾತು ತಪ್ಪಿದ ಸಿಎಂ ಡಿಕೆಶಿ: ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ! ಸರ್ಕಾರದ 2 ಸಾವಿರ ರೂ. ಪಡೆಯಲು ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್‌ ಕಡ್ಡಾಯ