NEWSನಮ್ಮರಾಜ್ಯಮೈಸೂರುಸಂಸ್ಕೃತಿ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಖಾಸಗಿ ದರ್ಬಾರ್​ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಖಾಸಗಿ ದರ್ಬಾರ್​ ಆರಂಭವಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್​ ಸಿಂಹಾಸನವೇರಿ ಧಾರ್ಮಿಕ ವಿಧಿ ವಿಧಾನ ನಡೆಸುತ್ತಿದ್ದಾರೆ.

ಬೆಳಗ್ಗೆ 5.30 ರಿಂದ 6.45 ರ ಒಳಗಿನ ಶುಭ ಮುಹೂರ್ತದಲ್ಲಿ ರತ್ನಖಚಿತ ಸಿಂಹಾಸನಕ್ಕೆ ಸಿಂಹದ ಮುಖ ಜೋಡಣೆ ಮಾಡಲಾಗಿತ್ತು. ಬಳಿಕ ಬೆಳಗ್ಗೆ 9:55 ರಿಂದ 10 : 15 ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ ಮಾಡಲಾಯಿತು.

ಬೆಳಗ್ಗೆ 11: 35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಸೇರಿದಂತೆ ಮಹಿಳೆಯರು ಕಳಸ ಹೊತ್ತು ಆಗಮಿಸಿದ್ದು, ಮಂಗಳವಾದ್ಯದೊಂದಿಗೆ ಸವಾರ್ ತೊಟ್ಟಿಯ ಬಳಿ ಪೂಜಾ ಕಂಕೈರ್ಯಗಳು ನೆರವೇರಿದವು. ನಂತರ ಮಧ್ಯಾಹ್ನ 2:05 ರ ಒಳಗೆ ಚಾಮುಂಡೇಶ್ವರಿ ಅಮ್ಮನವರ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ವಿಜಯ ಯಾತ್ರೆ ಸಾಗಿತು.

ಸೆಪ್ಟೆಂಬರ್​ 23 ರಿಂದ 29ರ ಸಂಜೆವರೆಗೆ ಖಾಸಗಿ ದರ್ಬಾರ್ ಜರುಗಲಿದೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ 10:10 ರಿಂದ 10:30 ರ ಒಳಗೆ ಒಡೆಯರ್ ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ. ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳ ರಾತ್ರಿ ಪೂಜೆ ನಡೆಯಲಿದೆ.

ಆಯುಧ ಪೂಜೆಯ ದಿನದಂದು ಬೆಳಗ್ಗೆ 6 ಗಂಟೆಗೆ ಚಂಡಿ ಹೋಮ ನಡೆಯಲಿದೆ. ಬಳಿಕ ಬೆಳಗ್ಗೆ 7:30 ರಿಂದ 7:42 ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನ ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನದ ಕಳುಹಿಸಿ ಪೂಜೆ ನೆರವೇರಿಸಲಾಗುವುದು.

ನಂತರ ಬೆಳಗ್ಗೆ 8 ರಿಂದ 8: 40 ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನ ಕಲ್ಯಾಣ ಮಂಟಪಕ್ಕೆ ಕರೆತಂದು ಪೂಜೆ. ಬೆಳಗ್ಗೆ 10: 35 ಕ್ಕೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ಜರುಗಲಿದೆ. ಅಂದು ಸಂಜೆ ಸಿಂಹ ಹಾಗೂ ಯದುವೀರ್, ತ್ರಿಷಿಕಾ ಕುಮಾರಿ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಅಕ್ಟೋಬರ್ 2 ರಂದು ಬೆಳಗ್ಗೆ 10 ಗಂಟೆಗೆ ವಿಜಯ ದಶಮಿ ಪೂಜೆ ನಡೆಯಲಿದೆ. ಬಳಿಕ ಬೆಳಗ್ಗೆ 10:55ಕ್ಕೆ ವಿಜಯ ಯಾತ್ರೆ ಆರಂಭಗೊಳ್ಳಲಿದೆ. ಎಲ್ಲಾ ಪೂಜೆ ಕೈಂಕರ್ಯ ಮುಗಿದ ಬಳಿಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿ ಸಾಗಲಿದೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ