ಬೆಂಗಳೂರು: ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೃತಪಟ್ಟ ಯಲಹಂಕದ ದಿವ್ಯಾನ್ಷಿಯ ಅಜ್ಜ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬುಧವಾರ 4:30ಕ್ಕೆ ಕರೆ ಮಾಡಿ ದಿವ್ಯಾನ್ಷಿ ಮೃತಪಟ್ಟ ಬಗ್ಗೆ ತಿಳಿಸಿದರು. ಈ ಸಾವಿಗೆ ಸರ್ಕಾರವೇ ಕಾರಣ, ಸರಿಯಾದ ವ್ಯವಸ್ಥೆ ಮಾಡದೆ ಈರೀತಿ ಮಕ್ಕಳನ್ನು ಬಲಿಪಡೆದುಕೊಂಡಿದೆ ಎಂದು ಕಣ್ಣೀರಾಕಿದರು.
ಇನ್ನು ಇಂದು ಸಂಜೆ ಆಂಧ್ರದ ಅನ್ನಮಯ ಜಿಲ್ಲೆಗೆ ಮೃತದೇಹ ಶಿಫ್ಟ್ ಮಾಡುತ್ತೇವೆ. ನನ್ನ ಮೊಮ್ಮಗಳ ಸಾವಿಗೆ ಸರ್ಕಾರವೇ ನೇರ ಹೊಣೆ. ಯಾವುದೇ ಪೊಲೀಸ್ ಇರಲಿಲ್ಲ ಎಂದು ಕಿಡಿಕಾರಿದರು.
ಗೇಟ್ ನಂಬರ್ 15ರ ಒಳಗೆ ಹೋದಾಗ ಈ ಘಟನೆ ನಡೆದಿದೆ. ಬಿದ್ದ ಮೊಮ್ಮಗಳನ್ನು ಜೊತೆಗೆ ಇದ್ದವರೇ ಆಟೋದಲ್ಲಿ ಕರೆದುಕೊಂಡು ಹೋದರು. ಸರ್ಕಾರ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದು ಗೋಳಾಡುತ್ತಿದ್ದಾರೆ.
ಇನ್ನು ತಾಯಿ ಮತ್ತು ಚಿಕ್ಕಮ್ಮ ಜೊತೆಗೆ ಹೋಗಿದ್ದರು ಆದರೆ ನನ್ನ ಮಗಳು ವಾಪಸ್ ಹೆಣವಾಗಿ ಬಂದಿದ್ದಾಳೆ. ಈ ನೋವ ಯಾರಿಗೂ ಬೇಡ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.
ಮೊಮ್ಮಗಳು 9ನೇ ತರಗತಿ ಓದುತ್ತಿದ್ದಳು. ದಿವ್ಯಾನ್ಷಿ ಕಾಲ್ತುಳಿತದ ವೇಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ. ಸದ್ಯ ದಿವ್ಯಾನ್ಷಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.
ಶಿವಕುಮಾರ್ ಹಾಗೂ ಅಶ್ವಿನಿ ದಂಪತಿಯ ಮಗಳಾದ ದಿವ್ಯಾನ್ಷಿ ಚಿಕ್ಕಮ್ಮ ರಚನಾ ಹಾಗೂ ಇನ್ನಿಬ್ಬರ ಜೊತೆ ಆರ್ಸಿಬಿ ಸಂಭ್ರಮಾಚರಣೆ ನೋಡಲು ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದಳು. ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ. ಯಲಹಂಕದ ಚೌಡೇಶ್ವರಿ ಲೇ ಔಟ್ ಮನೆಗೆ ದಿವ್ಯಾನ್ಷಿಯ ಮೃತದೇಹ ರವಾನಿಸಲಾಗಿದೆ. ಯಲಹಂಕದಲ್ಲಿ ದಿವ್ಯಾಂಶಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...