CRIMENEWSಕ್ರೀಡೆ

ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ದಿವ್ಯಾನ್ಷಿಯ ಅಜ್ಜ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೃತಪಟ್ಟ ಯಲಹಂಕದ ದಿವ್ಯಾನ್ಷಿಯ ಅಜ್ಜ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬುಧವಾರ 4:30ಕ್ಕೆ ಕರೆ ಮಾಡಿ ದಿವ್ಯಾನ್ಷಿ ಮೃತಪಟ್ಟ ಬಗ್ಗೆ ತಿಳಿಸಿದರು. ಈ ಸಾವಿಗೆ ಸರ್ಕಾರವೇ ಕಾರಣ, ಸರಿಯಾದ ವ್ಯವಸ್ಥೆ ಮಾಡದೆ ಈರೀತಿ ಮಕ್ಕಳನ್ನು ಬಲಿಪಡೆದುಕೊಂಡಿದೆ ಎಂದು ಕಣ್ಣೀರಾಕಿದರು.

ಇನ್ನು ಇಂದು ಸಂಜೆ ಆಂಧ್ರದ ಅನ್ನಮಯ ಜಿಲ್ಲೆಗೆ ಮೃತದೇಹ ಶಿಫ್ಟ್ ಮಾಡುತ್ತೇವೆ. ನನ್ನ ಮೊಮ್ಮಗಳ ಸಾವಿಗೆ ಸರ್ಕಾರವೇ ನೇರ ಹೊಣೆ. ಯಾವುದೇ ಪೊಲೀಸ್‌ ಇರಲಿಲ್ಲ ಎಂದು ಕಿಡಿಕಾರಿದರು.

ಗೇಟ್ ನಂಬರ್ 15ರ ಒಳಗೆ ಹೋದಾಗ ಈ ಘಟನೆ ನಡೆದಿದೆ. ಬಿದ್ದ ಮೊಮ್ಮಗಳನ್ನು ಜೊತೆಗೆ ಇದ್ದವರೇ ಆಟೋದಲ್ಲಿ ಕರೆದುಕೊಂಡು ಹೋದರು. ಸರ್ಕಾರ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದು ಗೋಳಾಡುತ್ತಿದ್ದಾರೆ.

ಇನ್ನು ತಾಯಿ ಮತ್ತು ಚಿಕ್ಕಮ್ಮ ಜೊತೆಗೆ ಹೋಗಿದ್ದರು ಆದರೆ ನನ್ನ ಮಗಳು ವಾಪಸ್‌ ಹೆಣವಾಗಿ ಬಂದಿದ್ದಾಳೆ. ಈ ನೋವ ಯಾರಿಗೂ ಬೇಡ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಮೊಮ್ಮಗಳು 9ನೇ ತರಗತಿ ಓದುತ್ತಿದ್ದಳು. ದಿವ್ಯಾನ್ಷಿ ಕಾಲ್ತುಳಿತದ ವೇಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ. ಸದ್ಯ ದಿವ್ಯಾನ್ಷಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಶಿವಕುಮಾರ್ ಹಾಗೂ ಅಶ್ವಿನಿ ದಂಪತಿಯ ಮಗಳಾದ ದಿವ್ಯಾನ್ಷಿ ಚಿಕ್ಕಮ್ಮ ರಚನಾ ಹಾಗೂ ಇನ್ನಿಬ್ಬರ ಜೊತೆ ಆರ್‌ಸಿಬಿ ಸಂಭ್ರಮಾಚರಣೆ ನೋಡಲು ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದಳು. ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ. ಯಲಹಂಕದ ಚೌಡೇಶ್ವರಿ ಲೇ ಔಟ್ ಮನೆಗೆ ದಿವ್ಯಾನ್ಷಿಯ ಮೃತದೇಹ ರವಾನಿಸಲಾಗಿದೆ. ಯಲಹಂಕದಲ್ಲಿ ದಿವ್ಯಾಂಶಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ