NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರಿನಲ್ಲೂ ಮುಷ್ಕರ ಬಿಸಿ ತಟ್ಟುತ್ತಿದ್ದು ಸಂಚಾರ ನಿಲ್ಲಿಸಿದ ಬಸ್‌ಗಳು: ಜನರ ಪರದಾಟ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ಕರೆ ನೀಡಿರುವ ಮುಷ್ಕರದ ಬಿಸಿ ಮೈಸೂರಿನಲ್ಲೂ ತಟ್ಟಿದ್ದು, ಬೆಂಗಳೂರಿಗೆ ಡ್ಯೂಟಿಗೆ ಬರುವವರು ಮತ್ತಿತರ ಕೆಲಸ ಕಾರ್ಯಗಳಿಗೆ ಹೋಗುವವರು ಪರದಾಡುತ್ತಿದ್ದಾರೆ.

ಇನ್ನು ಇಂದು ಬೆಳಗ್ಗೆ 4 ಗಂಟೆಯಿಂದಲೇ ನಗರದಲ್ಲಿ ಬಸ್‌ ಸಂಚಾರ ಸ್ತಬ್ಧವಾಗಿವೆ. ಹೀಗಾಗಿ ಬಸ್‌ಗಳನ್ನು ಯಥಾಸ್ಥಿತಿಯಲ್ಲಿ ಓಡಾಡುತ್ತವಾ ಇಲ್ಲವೇ ಎಂಬ ಗೊಂದಲದಲ್ಲಿ ಬಸ್‌ ನಿಲ್ದಾಣದಲ್ಲಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಒಂದು ಕಡೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗಲೇ ಬೇಕು ಎಂದು ಕೆಲ ನೌಕರರು ಬಸ್‌ ಓಡಿಸುವುದಕ್ಕೆ ಮುಂದಾಗಿದ್ದಾರೆ. ಅದು ಕೇವಲ ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ಮುಂಜಾನೆ ಇದ್ದವು 6 ಗಂಟೆ ಬಳಿಕ ಆ ಬಸ್‌ಗಳು ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ.

ನಾವು ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ ಬಂದ್‌ ನಿಲ್ಲುವುದಿಲ್ಲ ಶಾಂತಿಯುತವಾಗಿ ಮುಷ್ಕರ ಮಾಡುತ್ತೇವೆ ಎಂದು ಅನಂತ ಸುಬ್ಬರಾವ್‌ ಹೇಳಿದ್ದಾರೆ.

ಒಟ್ಟಾರೆ ಈವರೆಗೂ ಸಾರ್ವಜನಿಕರಿಗೆ ಮೈಸೂರಿನಲ್ಲಿ ಬಸ್‌ ಬಂದ್‌ಬಿಸಿ ಏರುತ್ತಿದೆ. ಅದೇ ರೀತಿ ಇತರ ಭಾಗಗಳಲ್ಲಿ ಬಂದ್‌ ಆಗುತ್ತಿದೆ. ಈನಡುವೆ ಖಾಸಗಿ ಬಸ್‌ಗಳು ಕೂಡ ಕಾಣುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ