NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ

ಸಮಸ್ತ ಸಾರಿಗೆ ನೌಕರರು ಸಹಕರಿಸಿ ಈ ಹೋರಾಟದ ಯಶಸ್ವಿಗೆ ಕಾರಣರಾದ ಪ್ರತಿಯೊಬ್ಬ ಸಂಗಾತಿಗಳಿಗೆ ಅನಂತ ಅನಂತ ಧನ್ಯವಾದಗಳು ಜಂಟಿ ಕ್ರಿಯಾ ಸಮಿತಿ ಪರವಾಗಿ ಎಂದು ತಿಳಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಮುಷ್ಕರಕ್ಕೆ ಹೈ ಕೋರ್ಟ್‌ ಇಂದು ತಡೆನೀಡಿದೆ.

ಇಂದು (ಮೇ 19) ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠದ ಮುಂದೆ ಬಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸಂಘಟನೆಗಳ ಪರವಾಗಿ ಭಾಗವಹಿಸಿದ್ದ ವಕೀಲರು ಪ್ರಸ್ತುತ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇನ್ನೂ ಸಹ ಬಗೆಹರಿಸದಿರದ ಬಗ್ಗೆ ಮತ್ತು ಹಿಂದೆ 05.08.2025 ರಂದು ಕರೆ ನೀಡಿದ ಮುಷ್ಕರದಲ್ಲಿ ಸಹ ಹೈ ಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ಗೌರವದಿಂದ ಮುಷ್ಕರವನ್ನು ಹಿಂಪಡೆದಿತ್ತು.

ಆದರೆ 10 ತಿಂಗಳೂ ಕಳೆದರು ಇನ್ನೂ ಸಹ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿಲ್ಲವೆಂದು ಕೋರ್ಟ್ ನ ಗಮನಕ್ಕೆ ತಂದರು. ಈ ಕಾರಣವನ್ನು ಉಲ್ಲೇಖಿಸಿ ಹೈಕೋರ್ಟ್ ನ್ಯಾಯಮೂರ್ತಿಗಳು ಇದೇ 21ರಂದು ಮುಖ್ಯಮಂತ್ರಿಗಳ ಅಥವಾ ಸಾರಿಗೆ ಮಂತ್ರಿಗಳು ಜಂಟಿ ಕ್ರಿಯಾ ಸಮಿತಿ ಜತೆ ಸಭೆ ನಡೆಸುವ ದಿನಾಂಕವನ್ನು ನಿಗದಿ ಮಾಡಿ ಕೋರ್ಟ್ ಗೆ ತಿಳಿಸುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲ್ಲೇಯಲ್ಲಿ ಜಂಟಿ ಕ್ರಿಯಾ ಸಮಿತಿಯು ಸಭೆ ಸೇರಿ ಸಮಸ್ತ ಸಾರಿಗೆ ನೌಕರರ ಹಿತಕ್ಕಾಗಿ ಹೈಕೋರ್ಟ್ ನ ನಿರ್ದೇಶನದಂತೆ ಮುಂದಿನ ಸಭೆಯಲ್ಲಿ ಚರ್ಚಿಸಲು ಸರ್ಕಾರಕ್ಕೆ ಸೂಚನೆ ನೀಡಿರುವ ಕಾರಣ ಮೇ 20ರಿಂದ ಅಂದರೆ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಮುಷ್ಕರವನ್ನು ಹಿಂಪಡೆಯಲಾಗಿದೆ.

ಸಮಸ್ತ ಸಾರಿಗೆ ನೌಕರರು ಸಹಕರಿಸಿ ಈ ಹೋರಾಟದ ಯಶಸ್ವಿಗೆ ಕಾರಣರಾದ ಪ್ರತಿಯೊಬ್ಬ ಸಂಗಾತಿಗಳಿಗೆ ಅನಂತ ಅನಂತ ಧನ್ಯವಾದಗಳು ಜಂಟಿ ಕ್ರಿಯಾ ಸಮಿತಿ ಪರವಾಗಿ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ