ಬೆಂಗಳೂರು: ರಾತ್ರೋರಾತ್ರಿ ಅಭಿಮಾನಿಗಳ ವಿರೋಧದ ನಡುವೆಯೂ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು.
ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಆದ್ರೆ ಹೈಕೋರ್ಟ್ ಸೂಚನೆ ಮೇರೆ ರಾತ್ರೋರಾತ್ರಿ ಸಮಾಧಿಯನ್ನು ತೆರವುಗೊಳಿಸಲಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 100ಕ್ಕೂ ಹೆಚ್ಚು ಆರಕ್ಷಕರನ್ನು ನಿಯೋಜನೆ ಮಾಡಲಾಗಿದೆ.
ಇನ್ನು ಮೈಸೂರಿನಲ್ಲುಂಟು ವಿಷ್ಣು ಸ್ಮಾರಕ: ಸದ್ಯ ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕ್ರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಶೇಷವಾದ ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ. ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ.
Related

You Might Also Like
KSRTC: ಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಲೇ ಬೇಕು- ಏಕೆಂದರೆ ELಗೆ ಶೇ.15ರಷ್ಟು ಹೆಚ್ಚುವರಿ…!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಮಾರ್ಚ್ 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ 2020 ಜನವರಿ 1ರಿಂದ ಅನ್ವಯವಾಗುವಂತೆ ಘೋಷಣೆ ಮಾಡಿರುವ ಶೇ.15ರಷ್ಟು...
ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗತ್ತೆ: 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಮ್ಯಾನೇಜರ್ ಸ್ಪಷ್ಟನೆ
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ವಿರುದ್ಧ ಈಗ 3.15 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ...
ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ
ಗದಗ: ಪೊಲೀಸ್ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್...
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: FIR ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ನಂಬಿಸಿ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ...
KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಅಮಾನತು: ಎಸ್ಪಿ ಆದೇಶ
ಕೂಡ್ಲಿಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕರ್ತವ್ಯ ನಿರತ ಚಾಲಕನ ಮೇಲೆ ಮನಬಂದಂತೆ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಇಂದು...
ವೈ.ರಾಮಕೃಷ್ಣರ ಸೇವೆ-ಹೋರಾಟ ಇಂದಿಗೂ ಸ್ಮರಣೀಯ: ಸಚಿವ ಮುನಿಯಪ್ಪ
ಮೈಸೂರು: ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ವೈ.ರಾಮಕೃಷ್ಣ ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು...
ವಿಜಯಪಥ ವರದಿ ಪರಿಣಾಮ: ವರದಿ ಬಂದ ಅರ್ಥಗಂಟೆಯಲ್ಲಿ ಹಣ ಪಾವತಿ ಸಂಬಂಧ ಲೆಕ್ಕಾಧಿಕಾರಿಗೆ ಟಿಪ್ಪಣಿ ಬರೆದ ಡಿಸಿ
ವಿಜಯಪುರ: KKRTC ವಿಜಯಪುರ: ನಿವೃತ್ತ ನೌಕರನಿಗೆ 29ಲಕ್ಷ ಕೊಡುವಂತೆ ಹೈ ಕೋರ್ಟ್ ತೀರ್ಪು- ಈ ಆದೇಶವನ್ನೇ ಉಲ್ಲಂಘಿಸುತ್ತಿರುವ ಡಿಸಿ! ಎಂಬ ಶೀರ್ಷಿಕೆಯಡಿ ವಿಜಯಪಥ ದಲ್ಲಿ ವರದಿ ಬಂದ ಕೇವಲ...
ಲಾಲ್ಬಾಗ್: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್ಬಾಗ್ನಲ್ಲಿ ಆಯೋಜಿಸಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅವರ...