NEWSಸಂಸ್ಕೃತಿ

ಸಂತ ಕವಿ ಸರ್ವಜ್ಞರ ತ್ರಿಪದಿಗಳು ಸಾರ್ವಕಾಲಿಕ: ಎಡಿಸಿ ಸೈಯಿದಾ ಆಯಿಷಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 16ನೇ ಶತಮಾನದ ಪ್ರಸಿದ್ದ ಕನ್ನಡ ತ್ರಿಪದಿ ಕವಿ ದಾರ್ಶನಿಕ ಮತ್ತು ವಾಸ್ತವಿಕವಾದಿ ಸರ್ವಜ್ಞರು ರಚಿಸಿದ ತ್ರಿಪದಿಗಳು ಸಾರ್ವಕಾಲಿಕ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞರ ಜಯಂತಿಯಲ್ಲಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಜಾತಿ ಪದ್ಧತಿ, ಮೂಢನಂಬಿಕೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಅವರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಇನ್ನು ಕಠಿಣವಾದ ಭಾಷೆಯನ್ನು ಬಳಸದೆ, ಜನಸಾಮಾನ್ಯರಿಗೆ ಅರ್ಥವಾಗುವ ಅಚ್ಚಗನ್ನಡದಲ್ಲಿ ಜೀವನದ ಮೌಲ್ಯಗಳನ್ನು ಬೋಧಿಸಿದವರು ಅವರು, ಹಾಗಾಗಿ ಅವರನ್ನು ತ್ರಿಕಾಲ‌ ಜ್ಞಾನಿ ಎಂದು ಕರೆಯುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಯೋಜನಾಧಿಕಾರಿ ರಾಮಕೃಷ್ಣ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ರಮೇಶ್, ಪಶು ಇಲಾಖೆ ಉಪನಿರ್ದೇಶಕ ಡಾ.ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ ಶೇ.3ರಿಂದ5ರಷ್ಟು ವೇತನ ಹೆಚ್ಚಳ ಮಾಡುತ್ತೇವೆ: ಕೆಎಸ್‌ಆರ್‌ಟಿಸಿ ಎಂಡಿ ಹೇಳಿಕೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಪತ್ನಿ ನೋಡಲು ಬೈಕ್‌ನಲ್ಲಿ ಹೋಗುತ್ತಿದ್ದ ಪತಿ ಸರ್ಕಾರಿ ಬಸ್‌ಗೆ ಬಲಿ, ಪತ್ನಿಯ... ಸರಿಸಮಾನ ವೇತನ ಸೇರಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳಿದಿಂದ ಚಿತ್ರದುರ್ಗದಿಂದ ಪಾದಯಾತ್ರೆ: ಒಕ್ಕೂಟ KSRTC ಎಂಡಿ ಅಧ್ಯಕ್ಷತೇಲಿ ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಸಂಜೆ ಸಭೆ ಲಾಲ್‌ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿದ ಇಪಿಎಸ್ ಪಿಂಚಿಣಿದಾರರ 99ನೇ ಮಾಸಿಕ ಸಭೆ- ಕೇಂದ್ರದ ಬಗ್ಗೆ ಅಸಮಾಧಾನ ಆರ್‌.ಆರ್‌.ಇನ್‌ಫ್ರಾಸ್ಟ್ರಕ್ಚರ್‌ ಕಂಪನಿಯ ಮುಖ್ಯ ಕಾನೂನು ಸಲಹೆಗಾರ ವಕೀಲ H.B.ಶಿವರಾಜು ತಮಿಳುನಾಡಿಗೆ ವರ್ಗಾವಣೆ NWKRTC -ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರು ಪ್ರಯಾಣಿಕರು ಮೃತ, 20 ಮಂದಿಗೆ ಗಾಯ KSRTC: ಪ್ರಣಾಳಿಕೆ ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾದ ಸಾರಿಗೆ ನೌಕರರಿಂದ ನಾಳೆ ಸುದ್ದಿಗೋಷ್ಠಿ KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಸರ್ಕಾರಿ ಬಸ್‌ ಪ್ರಯಾಣಕ್ಕೆ ಶಿಫಾರಸು