NEWSನಮ್ಮಜಿಲ್ಲೆಬೆಂಗಳೂರುರಾಜಕೀಯ

ಬೆಂಗಳೂರಲ್ಲಿದ್ದಾರೆ 98,43,577 ಮತದಾರರು: ಬಿಬಿಎಂಪಿಯ ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ತಿಳಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ವಿವರ ನೀಡಿದರು.

ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಮತದಾರರು ತಮ್ಮ ಮತದಾರರ ಮಾಹಿತಿಯನ್ನು (ಹೆಸರು, ತಂದೆಯ ಹೆಸರು, ಸಂಬಂಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೊ) ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿ ರವರ www.ceokarnataka.kar.nic.in ಮತ್ತು ಬಿಬಿಎಂಪಿ www.bbmp.gov.in ವೆಬ್‌ಸೈಟ್‌ನಲ್ಲೂ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು ಎಂದರು.

ಸಾರ್ವಜನಿಕರು/ ಮತದಾರರು ಮತದಾರರ ಪಟ್ಟಿ ಕಾರ್ಯ ಚಟುವಟಿಕೆಗಳ ಲಾಭವನ್ನು ಪಡೆದುಕೊಂಡು ಯಾವುದೇ ಕಚೆರಿಗೆ ಹೋಗದೆ ಅವರಿರುವ ಸ್ಥಳದಿಂದಲೆ Web Portal-Voters.eci.gov.in, Voter Helpline Mobile App ಹಾಗೂ 1950 Voter Helpline ಮುಖಾಂತರ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ