ನಾಲ್ಕೂ ಸಾರಿಗೆ ನಿಗಮಗಳಲ್ಲಿ ಡ್ಯೂಟಿ ಮುಗಿಸಿ ಬಂದ ಕಂಡಕ್ಟರ್ಗಳು ಘಟಕದಲ್ಲಿ ಸಹಿ ಪಡೆದು ಹಣ ಪಾವತಿಸಬೇಕೆಂಬ ನಿಯಮವಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಘಟಕಗಳಲ್ಲಿ ನಿರ್ವಾಹಕರು ಕರ್ತವ್ಯ ಮುಗಿಸಿ ಬಂದಾಗ ಘಟಕ ವ್ಯವಸ್ಥಾಪಕರು ಹಾಗೂ ಎಟಿಎಸ್ ಮತ್ತು ಎಟಿಐ ಇವರಿಂದ ಮಾರ್ಗ ಪ್ರತಿಯ ಮೇಲೆ ಸಹಿ ಹಾಕಿಸಿಕೊಂಡ ಬಳಿಕ ಲೆಕ್ಕಪತ್ರ ಶಾಖೆಯಲ್ಲಿ ಹಣ ಸಂದಾಯ ಮಾಡಬಾರದೆಂಬ ನಿಯಮವಿಲ್ಲ ಎಂದು ಸಾರಿಗೆ ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಿಳಿಸಿದ್ದಾರೆ.
4 ಸಾರಿಗೆ ನಿಗಮಗಳ ಬಹುತೇಕ ಎಲ್ಲ ಘಟಕಗಳಲ್ಲೂ ನಿರ್ವಾಹಕರು ಕರ್ತವ್ಯ ಮುಗಿಸಿ ಬಂದಾಗ ಘಟಕ ವ್ಯವಸ್ಥಾಪಕರು ಅಥವಾ ಎಟಿಎಸ್ ಅಥವಾ ಎಟಿಐ ಇವರಿಂದ ಮಾರ್ಗ ಪ್ರತಿಯ ಮೇಲೆ ಸಹಿ ಹಾಕಿಸಿಕೊಂಡ ಬಳಿಕ ಕಂಡಕ್ಟರ್ಗಳು ಲೆಕ್ಕಪತ್ರ ಶಾಖೆಯಲ್ಲಿ ಹಣ ಪಾವತಿ ಮಾಡಬೇಕು ಎಂದು ನಿಯಮಬಾಹಿರ ನಡೆಯನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ.
ಒಂದು ಈ ಮೂವರಲ್ಲಿ ಯಾರಾದರೊಬ್ಬರಿಂದ ಸಹಿ ಮಾಡಿಸಿಲ್ಲ ಎಂದರೆ ಅಂಥ ನೌಕರರನ್ನು ಆರೋಪಿಯ ಸ್ಥಾನದಲ್ಲಿ ನೋಡುವುದಲ್ಲದೆ, ಘಟಕದಲ್ಲಿ ಅಧಿಕಾರಿಗಳು ದರ್ಪಮೆರೆಯುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಕಳೆದ 2022ರ ಜುಲೈ 29ರಂದೆ ಆರ್ಟಿಐ ಅಡಿ ಅರ್ಜಿ ಹಾಕಿ ಮಾತಿಪಡೆದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಾವು ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಈ ಕಚೇರಿಯಲ್ಲಿ ನಿರ್ದಿಷ್ಟವಾದ ಮಾಹಿತಿ/ ದಾಖಲಾತಿ ಇಲ್ಲ ಎಂದು ಲಿಖಿತವಾಗಿ ತಿಳಿಸಿದ್ದಾರೆ. ಆದರೂ ಈಗಲೂ KSRTC, BMTC, KKRTC ಹಾಗೂ NWKRTC ಸಂಸ್ಥೆಯ ಕೆಲ ಡಿಪೋಗಳಲ್ಲಿ ನಮ್ಮ ಸಹಿ ಮಾಡಿಸಿಕೊಂಡೇ ಹೋಗಬೇಕು ಎಂದು ನೌಕರರಿಗೆ ದಮ್ಕಿಹಾಕುತ್ತಿದ್ದಾರೆ.
ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಕೊಡ ಮಾಹಿತಿ ಏನು?: ಈ ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ಮಾಹಿತಿ ಹಕ್ಕು ಅಧಿನಿಯಮ-2005 ರನ್ವಯ ತಾವು ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಸಂಚಾರ (ಕಾರ್ಯಾಚರಣೆ) ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು ಈ ಕೆಳಕಂಡಂತೆ ನೀಡಲಾಗಿದೆ.
ಕೋರಿರುವ ಮಾಹಿತಿ: KSRTC ಸಂಸ್ಥೆಯ ಎಲ್ಲ ಘಟಕಗಳಲ್ಲಿ ನಿರ್ವಾಹಕರು ಕರ್ತವ್ಯ ಮುಗಿಸಿ ಹಿಂದಿರುಗಿ ಬಂದಾಗ “ಇಪಿಕೆಎಂ-25 ರೂಪಾಯಿ ಕಡಿಮೆ ಬಂದ ನಿರ್ವಾಹಕರಿಗೆ, ಘಟಕದಲ್ಲಿ ಇಟ್ಟಿರುವ ಒಂದು ಪುಸ್ತಕದಲ್ಲಿ ಈ ವಿಷಯವಾಗಿ ಸಾರಾಂಶ ಬರೆದು, ಘಟಕ ವ್ಯವಸ್ಥಾಪಕರು ಹಾಗೂ ಎಟಿಎಸ್ ಮತ್ತು ಎಟಿಐ ಬರುವವರೆಗೂ ಕಾಯ್ದು ಮಾರ್ಗ ಪ್ರತಿಯ ಮೇಲೆ ಅವರ ಸಹಿಯನ್ನು ಹಾಕಿಸಿಕೊಂಡು, ಲೆಕ್ಕಪತ್ರ ಶಾಖೆಯಲ್ಲಿ ಈ ಅಧಿಕಾರಿಗಳ ಸಹಿ ಇಲ್ಲದೆ ಹಣವನ್ನು ಸಂದಾಯ ಮಾಡಬಾರದೆಂಬ ನಿಯಮವನ್ನು ಸರ್ಕಾರದಿಂದ ಅಥವಾ ಸಾರಿಗೆ ಸಂಸ್ಥೆಯಿಂದ ಅಥವಾ ಘಟಕ ವ್ಯವಸ್ಥಾಪಕರಿಂದ ಹೊರಡಿಸಿರುವ ಸುತ್ತೋಲೆಯ ಮಾಹಿತಿಯನ್ನು ಮಾಹಿತಿ ಹಕ್ಕು ಅಧಿನಿಯಮ 2005ರ ಪ್ರಕಾರ ಮಾಹಿತಿ ನೀಡಬೇಕಾಗಿ ಮನವಿ.

ಒದಗಿಸಲಾದ ಮಾಹಿತಿ: ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಈ ಕಚೇರಿಯಲ್ಲಿ (ಶಾಂತಿನಗರದಲ್ಲಿರುವ KSRTC ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ) ನಿರ್ದಿಷ್ಟವಾದ ಮಾಹಿತಿ/ ದಾಖಲಾತಿ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಮೇಲ್ಕಂಡ ಮಾಹಿತಿ ಬಗ್ಗೆ ಭಾದಿತರಾದಲ್ಲಿ, ಮಾಹಿತಿ ಹಕ್ಕು ಅಧಿನಿಯಮ-2005ರ ನಿಯಮ 19(1) ರನ್ವಯ, ಈ ಪತ್ರ ತಲುಪಿದ 30 ದಿನಗಳೊಳಗಾಗಿ ಮೇಲ್ಮನವಿ ಪ್ರಾಧಿಕಾರಸ್ಥರಿಗೆ ಅಂದರೆ ಉಪ ಮುಖ್ಯ ಸಂಚಾರ ವ್ಯವಸ್ಥಾಪಕ (ಕಾ) ಅವರಿಗೆ ಹಾಗೂ ಒಂದನೇ ಅಪೀಲು ಪ್ರಾಧಿಕಾರಿಗಳು, ಕರಾರಸಾ ನಿಮಗ, ಕೇಂದ್ರ ಕಚೇರಿ, ಸಾರಿಗೆ ಭವನ, ಬೆಂಗಳೂರು-560027 ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಲಾಗಿದೆ ಎಂದೂ ಕೂಡ (ಸಾರ್ವಜನಿಕ ಮಾಹಿತಿ ಅಧಿಕಾರಿ/ ವಿಭಾಗೀಯ ಸಂಚಲನಾಧಿಕಾರಿ ಸಂಚಾರ (ಕಾರ್ಯಾಚರಣೆ) ಇಲಾಖೆ) ತಿಳಿಸಿದ್ದಾರೆ.
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...