Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ಬಿಜೆಪಿಗರಿಗೆ ರಾಮನೇ ದೊಡ್ಡ ಅಸ್ತ್ರ: ಸಂಗೋಪನಾ ಸಚಿವ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ರಾಮನನ್ನು ಬಿಜೆಪಿಯವರು ದೊಡ್ಡ ಅಸ್ತ್ರ ಮಾಡಿಕೊಂಡು ಜನರ ಭಾವನೆ ಕೆರಳಿಸುತ್ತಿದ್ದಾರೆ ಎಂದು ರೇಷ್ಮೆ ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಆರೋಪಿಸಿದ್ದಾರೆ.

ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ರಾಮನ ಮೇಲೆ ನಮ್ಮ ಅಭ್ಯಂತರವಿಲ್ಲ. ನಮ್ಮ ಅಭ್ಯಂತರ ಇರೋದು ಬಿಜೆಪಿ ನಡವಳಿಕೆ ಮೇಲೆ. ರಾಮಮಂದಿರ ನಿರ್ಮಾಣದ ಬಗ್ಗೆ ನಮ್ಮ ತಕರಾರಿಲ್ಲ, ಆದರೆ ರಾಮ ನಮ್ಮವನೇ ಅಂತಾ ಬಿಜೆಪಿಯವರು ಹೇಳುವ ವಿಚಾರದಲ್ಲಿ ನಮ್ಮ ತಕರಾರಿದೆ ಎಂದರು.

ಎಲ್ಲರಿಗೂ ಬೇಕಾದವನು ರಾಮ, ಹನುಮಂತ, ಸೀತೆಯನ್ನು ಎಲ್ಲರೂ ಪೂಜೆ ಮಾಡ್ತಾರೆ. ಆದರೆ ಬಿಜೆಪಿಯವರು ರಾಮ ತಮಗೆ ಸೇರಿದವನೆಂದು ಪ್ರತಿಬಿಂಬಿಸುತ್ತಿದ್ದಾರೆ. ಇದು ಸರಿಯಾದ ವರ್ತನೆಯಲ್ಲ. ಆ ದೃಷ್ಟಿಯಿಂದ ಸಿದ್ದರಾಮಯ್ಯ ನಮ್ಮ ನಾಯಕರು. ಆದ್ದರಿಂದ ರಾಮ ನಮ್ಮಲ್ಲಿ ಇದ್ದಾರೆಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರಷ್ಟೇ. ರಾಮನನ್ನು ತುಚ್ಛೀಕರಿಸುವ ರೀತಿ ಅವರು ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.

ರಾಮಮಂದಿರ ನಮ್ಮದೇ ಎಂದು ಬಿಜೆಪಿ ಬಿಂಬಿಸಿಕೊಳ್ಳುವುದು ಬೇಸರದ ಸಂಗತಿ. ಅಯೋಧ್ಯೆ ವಿಚಾರ ಬಿಟ್ಟು ಇವರಿಗೆ ಬೇರೆ ಏನೂ ಇಲ್ಲ. ಈ ದೇಶದ ಸಮಸ್ಯೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಕುಡಿಯುವ ನೀರು, ಮನೆಯಿಲ್ಲದವರು ಈ ದೇಶದಲ್ಲಿ ಎಷ್ಟೋ ಜನರಿದ್ದಾರೆ.

ಸೂರಿಲ್ಲ ಈ ಜನರ ಬಗ್ಗೆ ಮೋದಿ ಅವರಿಗೆ ಏನೂ ಗೊತ್ತಾಗಲ್ಲ. ವರ್ಷದಲ್ಲಿ ಆರು ತಿಂಗಳು ಫಾರಿನ್‌ ಸುತ್ತುತ್ತಾರೆ. ಎಲ್ಲೋ ಒಂದು ಕಡೆ ಬಂದು ಭಾಷಣ ಮಾಡಿ ಹೋಗ್ತಾರೆ. ಬಿಹಾರ, ಮಧ್ಯಪ್ರದೇಶ, ಯುಪಿಯ ಹಳ್ಳಿಗಳಿಗೆ ಹೋಗಿ ನೋಡಿದ್ರೆ ಜನರ ಪರಿಸ್ಥಿತಿ ತಿಳಿಯುತ್ತೆ ಎಂದು ಸಚಿವ ವೆಂಕಟೇಶ್ ಹೇಳಿದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ