NEWSನಮ್ಮಜಿಲ್ಲೆರಾಜಕೀಯ

ಸಚಿವ ಸ್ಥಾನ ಭರವಸೆ ಕೊಟ್ಟು ನನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆತಂದರು: ಶಾಸಕ ಶಿವಲಿಂಗೇಗೌಡ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ನೀಡುತ್ತೇನೆ ಎಂದು ನನ್ನನ್ನು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಕಾಂಗ್ರೆಸ್‌ಗೆ ಕರೆತರುವಾಗ ನೀಡಿದ್ದ ಭರವಸೆಯಲ್ಲಿ ಮುಚ್ಚುಮರೆ ಏನಿಲ್ಲ. ಸಚಿವರನ್ನಾಗಿ ಮಾಡುವುದಾಗಿ ಸಿದ್ದರಾಮಯ್ಯನವರು ಭರವಸೆ ಕೊಟ್ಟಿದ್ದರು. ಎರಡೂವರೆ ವರ್ಷದ ಬಳಿಕ ಸಚಿವನನ್ನಾಗಿ ಮಾಡುವುದಾಗಿ ಸಾರ್ವಜನಿಕ ವೇದಿಕೆಗಳಲ್ಲೂ ತಿಳಿಸಿದ್ದಾರೆ ಎಂದರು.

ಜಿಲ್ಲೆಗೆ ಪಕ್ಷದ ಹಿತದೃಷ್ಟಿಯಿಂದ ಸಚಿವ ಸ್ಥಾನ ನೀಡಬೇಕು ಎಂಬ ರಾಜಕೀಯ ಲೆಕ್ಕಾಚಾರಗಳು ಇವೆ. ಗೆದ್ದಿರುವುದು ನಾನೊಬ್ಬನೇ. ಹೀಗಾಗಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ. ಸದ್ಯಕ್ಕೆ ಸಮಯ ಕೂಡಿಬಂದಿಲ್ಲ. ಸಂಪುಟ ಪುನ‌ರ್ರರಚನೆಯಾಗಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯನವರ ವಿರುದ್ಧ ಯಾರು, ಎಷ್ಟೇ ಬಾಯಿ ಬಡಿದುಕೊಂಡರೂ ಏನೂ ಮಾಡಲಾಗುವುದಿಲ್ಲ. 5 ವರ್ಷ ಸಿದ್ದರಾಮಯ್ಯ ಸುಭದ್ರ ಸರ್ಕಾರ ನಡೆಸುತ್ತಾರೆ. ಹಣಕಾಸಿನ ಕೊರತೆ ಇದೆ ಎಂಬುದಲ್ಲೇ ಸುಳ್ಳು ಎಂದರು.

ಇನ್ನು ಅರಸೀಕೆರೆ ಕ್ಷೇತ್ರವೊಂದಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಲಾಗಿದೆ. ಯಾವ ಅಭಿವೃದ್ಧಿ ಕೆಲಸಗಳೂ ನಿಂತಿಲ್ಲ. 56 ಸಾವಿರ ಕೋಟಿ ರೂ.ಗಳ ಗ್ಯಾರಂಟಿ ಯೋಜನೆಗಳನ್ನೂ ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಪ್ರತಿ ಮನೆಗೆ ತಿಂಗಳಿಗೆ 5 ಸಾವಿರ ರೂ.ಗಳು ಮನೆ ಬಾಗಿಲಿಗೆ ತಲುಪುತ್ತಿವೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ