NEWSದೇಶ-ವಿದೇಶರಾಜಕೀಯ

ಅದೃಷ್ಟ ಅಂದರೆ ಇದೇ ಅಲ್ವಾ- ನಾಲ್ಕಾರು ಮನೆಗೆಲಸ ಮಾಡಿ ಜೀವನ ಸಾಗಿಸುತ್ತಿದ್ದಾಕಿ ಈಗ ಪಶ್ಚಿಮ ಬಂಗಾಳದ ಮಂತ್ರಿ !

ಕೇವಲ 3 ಸಾವಿರ ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್‌ಗ್ರಾಮ್ ವಿಧಾನ ಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದು, ಈಗ ಸಚಿವೆಯಾಗಿಯೂ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತ್ತಾ: ಜೀವನ ಸಾಗಿಸುವುದಕ್ಕೆ ಮನೆ ಕೆಲಸಕ್ಕೆ ಸೇರಿಕೊಂಡು ಕೇವಲ 3 ಸಾವಿರ ರೂಪಾಯಿಗಾಗಿ ಕಷ್ಟಪಡುತ್ತಿದ್ದ ಮಹಿಳೆಯೊಬ್ಬರು ಇಂದು ಸಚಿವರಾಗಿ ರಾಜ್ಯದ ಚುಕ್ಕಾಣಿ ಹಿಡಿದು ನಿಂತಿರುವುದು ಹೇಳಿಕೊಳ್ಳುವುದಕ್ಕೆ ಪದವೇ ಸಿಗದಷ್ಟು ಹೆಮ್ಮೆಯ ವಿಷಯವಾಗಿದೆ.

ಹೌದು! ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಈ ಕಮಲ್‌ ನಡೆದಿದ್ದು, ಬಡುವರು ಈಗಲೂ ಚುನಾವಣೆಯಲ್ಲಿ ನಿಂತು ಗೆಲ್ಲಬಹುದು ಎಂಬುದಕ್ಕೆ ತಾಜಾ ನಿದರ್ಶನವಾಗಿದೆ.

ತಿಂಗಳಿಗೆ 3,000 ರೂ. ವೇತನಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಎಂಬುವರು ಆ ಬಡತನವನ್ನು ಮೆಟ್ಟಿ ನಿಂತು ಶಾಸಕಿಯಾಗಿ ಆಯ್ಕೆಯಾಗಿದ್ದು ಅಲ್ಲದೆ, ಇದೀಗ ಸುವೇಂದು ಅಧಿಕಾರಿ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕೇವಲ 3 ಸಾವಿರ ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್‌ಗ್ರಾಮ್ ವಿಧಾನ ಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದು, ಈಗ ಸಚಿವೆಯಾಗಿಯೂ ಪ್ರಮಾಣವಚನ ಸ್ವೀಕರಿಸಿ, ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ.

2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರ್ಣಾಯಕ ಗೆಲುವು ಸಾಧಿಸಿದ್ದು, ಮಾಝಿ 1,07,692 ಮತಗಳನ್ನು ಗಳಿಸಿ, ತಮ್ಮ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಅಂತರದಿಂದ ಸೋಲಿಸಿರುವುದು ಇವರ ಹೋರಾಟಕ್ಕೆ ಮತದಾರರು ನೀಡಿದ ಅಂತಿಮ ತೀರ್ಪಾಗಿದೆ.

ಗುಸ್ಕಾರ ಪುರಸಭೆ ನಿವಾಸಿಯಾಗಿರುವ ಮಾಝಿ, ಸಕ್ರಿಯ ರಾಜಕೀಯಕ್ಕೆ ಕಾಲಿಡುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾಧಾರಣ ಹಿನ್ನೆಲೆ ಮತ್ತು ಬಲವಾದ ಸ್ಥಳೀಯ ಸಂಪರ್ಕಗಳಿಂದಾಗಿ ಪ್ರಚಾರದ ಸಮಯದಲ್ಲಿ ಅವರ ಉಮೇದುವಾರಿಕೆ ಗಮನ ಸೆಳೆಯಿತು.

ಮಾಝಿ ಈ ಹಿಂದೆ 2021ರ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು. ಆಗ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ಅಭ್ಯರ್ಥಿ ವಿರುದ್ಧ 11,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು. ಈ ಬಾರಿಯೂ ಬಿಜೆಪಿ ಅವರಿಗೆ ಟಿಕೆಟ್ ನೀಡಿತ್ತು. ಭರವಸೆಯಂತೆ ಈಗ ಕಮಲವನ್ನು ಅರಳಿಸಿದ್ದಾರೆ.

ಇನ್ನು ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾಝಿ, ನಾನು ತುಂಬಾ ಸಂತೋಷವಾಗಿದ್ದೇನೆ ಮತ್ತು ಪ್ರಧಾನಿ ನರೇಂದ್ರ ಮೋದಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ. ನಾನು ಇಂದು ನನ್ನ ಈ ಗೆಲುವನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಲ್ಲೆ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದು ಮತ್ತು ಸರಿಯಾದ ರಸ್ತೆಗಳು ಮತ್ತು ಕುಡಿಯುವ ನೀರು ಎಲ್ಲರ ಮನೆಗಳಿಗೆ ತಲುಪುವಂತೆ ನೋಡಿಕೊಳ್ಳುವುದು ನನ್ನ ಮುಖ್ಯ ಗುರಿಯಾಗಿದೆ. ಮೂಲಭೂತ ಸೌಕರ್ಯ ಸೇರಿದಂತೆ ಯುವಕರು ಮುಂದೆ ಬರುವುದುಕ್ಕೆ ಉತ್ತೇಜನ ನೀಡುವ ಜತೆಗೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗಾಗಿಯೂ ನಾನು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಒಟ್ಟಾರೆ, ಒಂದು ಕಾಲದಲ್ಲಿ ಮೆನೆಗೆಲಸ ಮಾಡಿಕೊಂಡಿದ್ದ ಸಾಧಾರಣ ಬಡ ಕುಟುಂಬದಿಂದ ಬಂದ ಮಹಿಳೆಯೊಬ್ಬರು ಇಂದು ಶಾಸಕಿಯಾಗಿ ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡಲು ಹೊರಟಿರುವುದು ತುಂಬಾ ಖುಷಿಯ ವಿಷಯ ಅವರಿಗೆ ಶುಭವಾಗಲಿ.

Megha
the authorMegha

Leave a Reply

error: Content is protected !!
Latest news
ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ–... ಬನ್ನೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾರ ಅಣ್ಣ ವಾಸುದೇವನ್ ನಿಧನ ಅದೃಷ್ಟ ಅಂದರೆ ಇದೇ ಅಲ್ವಾ- ನಾಲ್ಕಾರು ಮನೆಗೆಲಸ ಮಾಡಿ ಜೀವನ ಸಾಗಿಸುತ್ತಿದ್ದಾಕಿ ಈಗ ಪಶ್ಚಿಮ ಬಂಗಾಳದ ಮಂತ್ರಿ ! NWKRTC: ನೌಕರರ 11 ತಿಂಗಳ ಹಿಂಬಾಕಿ ಕುರಿತು ವಿವರಣೆ ಸ್ಲಿಪ್‌ ನೀಡಲು ಆದೇಶ ಮಾಡುತ್ತೇನೆ- ನೌಕರರಿಗೆ ಎಂಡಿ ಭರವಸೆ ಸರ್ಕಾರಿ ನೌಕರ ಪರೋಕ್ಷವಾಗಿ ಬೇರೊಬ್ಬರ ಮೂಲಕ ಲಂಚ ಪಡೆದರೂ ಆತ ತಪ್ಪಿತಸ್ಥನೆ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಇಂದಿನಿಂದ ಜಾರಿ: ಕರೆಂಟ್‌ ಬಿಲ್‌ಕೊಟ್ಟ ದಿನದಿಂದ ರಜೆ ಹೊರತುಪಡಿಸಿ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಸರ್ಕಾರಿ ಸಾರಿಗೆ ಚಾಲನಾ, ತಾಂತ್ರಿಕಾ ಸಿಬ್ಬಂದಿ ಕಾರ್ಮಿಕರಲ್ಲ: “ಸಂಸ್ಥೆ ನಿಯಮಗಳ ಮೂಲಕ ಯಾರು ನೇಮಕವಾಗಿದ್ದಾರೋ ಅವರೇ ಅ... ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ