KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ಅಧ್ಯಕ್ಷ ಭರಮಗೌಡ

ಬೆಂಗಳೂರು: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು – ನೌಕರರು ಮತ್ತು ನೌಕರರು – ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ ಮೊದಲು ನೀವು ಒಗ್ಗೂಡಿ ಎಲ್ಲವೂ ಸಾಧ್ಯವಾಗಲಿದೆ ಎಂದು NWKRTC ನಿಗಮದ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಕಿವಿ ಮಾತು ಹೇಳಿದರು.
ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ಅಭಿನಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲರೂ ಒಗ್ಗಟ್ಟಾಗಿದ್ದಿದ್ದರೆ ಯಾವುದೇ ಸಮಸ್ಯೆಗಳು ಉಳಿಯುತ್ತಿರಲಿಲ್ಲ. ಒಬ್ಬರ ಕಾಲು ಒಬ್ಬರು ಎಳೆಯುವುದು ಜತೆಗೆ ಪೊಲೀಸ್ ಪ್ರಕರಣಗಳನ್ನು ಹಾಕುವುದು. ಇದೆಲ್ಲವನ್ನು ನಾನು 8 ತಿಂಗಳಿನಿಂದ ಕಂಡಿದ್ದೀನಿ ಎಂದು ಭಾರಿ ನೋವಿನಿಂದ ಹೇಳುತ್ತಿದ್ದೇವೆ ಎಂದರು.
ಇನ್ನು ಚಾಲನಾ ಸಿಬ್ಬಂದಿಗಳು ಮಾಡದ ತಪ್ಪಿಗೆ ಅಧಿಕಾರಿಗಳು ವಜಾ, ಅಮಾನತು ಮತ್ತು ವರ್ಗಾವಣೆಯಂತ ಶಿಕ್ಷೆ ಕೊಡುತ್ತಿದ್ದಾರೆ. ಇದಕ್ಕೆ ಉದಾ: ಬಸ್ ನಿಲ್ದಾಣ 50 ಮೀಟರ್ ದೂರವಿದ್ದಾಗ ನಿರ್ವಾಹಕರು ಸೀಟಿ ಹೊಡೆಯುತ್ತಾರೆ. ಬಸ್ ನಿಲ್ಲುವುದಕ್ಕೂ ಮೊದಲು ವಯಸ್ಸಾದ ಮಹಿಳೆಯೊಬ್ಬರು ಬಸ್ ಇಳಿಯುವುದಕ್ಕೆ ಮುಂದಾಗಿ ಬಿದ್ದು ಮೃತಪಡುತ್ತಾರೆ. ಆದರೆ ಇಲ್ಲಿ ಚಾಲನಾ ಸಿಬ್ಬಂದಿಗಳನ್ನು ಹೊಣೆ ಮಾಡಿ ಅಮಾನತು ಮಾಡಿದ್ದಾರೆ.
ಅಧಿಕಾರಿಗಳು ಏನೆ ಆದರೂ ನೌಕರರ ಪರ ನಿಲ್ಲಬೇಕು. ಅದನ್ನು ಬಿಟ್ಟು ಅವರ ವಿರುದ್ಧ ನಿಂತರೆ ಅವರ ಪಾಡೇನು. 8ತಾಸು ಹಳ್ಳಿ ಹಳ್ಳಿಗಳಿಗೆ ಸರಿ ಇಲ್ಲದ ಹಳ್ಳ ಕೊಳ್ಳಗಳ ರಸ್ತೆಗಳಲ್ಲಿ ಬಸ್ ಓಡಿಸುತ್ತಾರೆ. ಈ ವೇಳೆ ಜನರು ಅವರನ್ನು ಎಷ್ಟು ರೀತಿ ಬೈದುಕೊಳ್ಳುತ್ತಾರೋ ಗೊತ್ತಿಲ್ಲ. ಆದರೂ ಅವರು ಅದ್ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೆ ಸುರಕ್ಷಿತವಾಗಿ ತಲುಪಿಸುವ ಕೆಲಸ ಮಾಡುತ್ತಾರೆ.
ಇಷ್ಟೆಲ್ಲ ಕಷ್ಟಪಡುವ ನೌಕರರ ಪರವಾಗಿ ಅಂದರೆ ಸಂಸ್ಥೆಯ ಸಿಬ್ಬಂದಿಗಳ ಪರವಾಗಿ ನಿಲ್ಲಬೇಕು. ಒಂದು ವೇಳೆ ಈ ರೀತಿ ಸಾವು ನೋವುಗಳಾದಗ ಬಸ್ ಮತ್ತು ಚಾಲನಾ ಸಿಬ್ಬಂದಿಗಳನ್ನು ಕಾನೂನಾತ್ಮಕವಾಗಿ ಬಿಡಿಸಿಕೊಂಡು ಬರಬೇಕು ಎಂಬ ದೃಷ್ಟಿಯಿಂದ ಕಾನೂನು ವಿಭಾಗವು ಸಂಸ್ಥೆಯಲ್ಲಿ ಇದೆ. ಆದರೆ, ಕಾನೂನು ವಿಭಾಗದ ಅಧಿಕಾರಿಗಳು ಮಾಡುತ್ತಿರುವುದು ಏನು? ನೌಕರರ ವಿರುದ್ಧವೇ ಪ್ರಕರಣ ದಾಖಲಿಸುವುದು. ಬಳಿಕ ಅವರಿಗೆ ಬೇಲ್ ವ್ಯವಸ್ಥೆ ಮಾಡದೆ ನ್ಯಾಯಾಂಗ ಬಂಧನಕ್ಕೆ ಬಿಡುವುದಾ? ಇದು ಮೊದಲು ನಿಲ್ಲಬೇಕು ಎಂದು ಹೇಳಿದರು.
ಇನ್ನು ಅಪಘಾತ ಸಮಯದಲ್ಲಿ ಚಾಲಕನ ಪರ ನ್ಯಾಯಾಲಯದಲ್ಲಿ ವಾದ ಮಾಡಬೇಕಾದ ಸಂಸ್ಥೆಯ ವಕೀಲರು ಇರುವುದೇ ಇಲ್ಲ. ಬದಲಿಗೆ ಸಂಸ್ಥೆಯ ಬಸ್ ಓಡಿಸುವಾಗ ಅಪಘಾತವಾಗಿದ್ದರೂ ಚಾಲಕ ಅವರ ಕೈಯಿಂದ ಹಣ ಕೊಟ್ಟು ಖಾಸಗಿ ವಕೀಲರ ನೇಮಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಇದು ಬದಲಾಗಬೇಕು ಎಂದು ಸಾರಿಗೆ ಸಚಿವರಿಗೆ ಮನವಿ ಮಾಡಿದರು.
ಪ್ರಮುಖವಾಗಿ ಚಾಲನಾ ಸಿಬ್ಬಂದಿ ಬಸ್ ಸ್ವಚ್ಛಗೊಳಿಸುವ ಕೆಲಸ ಮಾಡುವಂತಿಲ್ಲ. ಆದರೆ ಘಟಕದಲ್ಲಿ ಬಸ್ ತೊಳೆಯದಿರುವುದಕ್ಕೆ ಚಾಲಕನೇ ಘಟಕದಲ್ಲಿ ನೀರು ತೆಗೆದುಕೊಂಡು ಹೋಗಿ ಬಸ್ ಸ್ವಚ್ಛಗೊಳಿಸಿದರೆ ಆ ಚಾಲಕನನ್ನೇ ಅಮಾನತು ಮಾಡುತ್ತಾರೆ ಅಧಿಕಾರಿಗಳು ಎಂದರೆ, ಎಲ್ಲಿದೆ ಮಾನವೀಯತೆ ಎಂಬುದನ್ನು ನಾವು ಇಂದು ಕಾಣ ಬೇಕಿದೆ ಎಂದು ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿದರು.
ಇನ್ನು ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆಯ ಬಸ್ ಟಿಕೆಟ್ಅನ್ನು ಪಡೆದವರಲ್ಲಿ ಗಂಡ ಹೆಂಡತಿ ಹಿಂದಿನ ಬಸ್ ನಿಲ್ದಾಣದಲ್ಲಿ ಇಳಿದುಕೊಂಡು ಹೋಗುವ ವೇಳೆ ಮುಂದಿನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಪುರುಷ ಪ್ರಯಾಣಿಕನಿಗೆ ಮಿಸ್ಆಗಿ ಮಹಿಳೆಯ ಉಚಿತ ಬಸ್ ಟಿಕೆಟ್ ಕೊಟ್ಟು ಇಳಿಯುತ್ತಾರೆ. ದುರಾದೃಷ್ಟವೆಂದರೆ ಅದೇ ವೇಳೆ ತನಿಖಾ ಸಿಬ್ಬಂದಿ ಬಂದು ಟಿಕೆಟ್ ಚೆಕ್ ಮಾಡುವಾಗ ಮಹಿಳೆಯ ಉಚಿತ ಟಿಕೆಟ್ ಆತನ ಬಳಿ ಸಿಗುತ್ತದೆ. ಅದಕ್ಕೆ ನಿರ್ವಾಹಕರನ್ನು ಹೊಣೆ ಮಾಡಿ ಕೆಲಸದಿಂದ ಅಮಾನತು ಮಾಡುತ್ತಾರೆ. ಅಂದರೆ ಏನು ನಡೆದಿದೆ ಎಂಬುದರ ಬಗ್ಗೆ ತಿಳಿಯದೇ ಈ ರೀತಿ ನೌಕರರ ಮೇಲೆ ದಬ್ಬಾಳಿಕೆ ಮಾಡಬಾರು ಎಂದು ಅಧ್ಯಕ್ಷರು ಹೇಳಿದರು.
ಈ ರೀತಿ ಆಗುತ್ತಿರುವುದು ಏಕೆ ಎಂದು 8 ತಿಂಗಳಿನಿಂದ ಗಮನಿಸಿದಾಗ ನಮಗೆ ತಿಳಿದು ಬಂದಿದ್ದು ನೌಕರರು ಅಧಿಕಾರಿಗಳಲ್ಲಿ ಒಗ್ಗಟ್ಟಿಲ್ಲದಿರುವುದು ಜತೆಗೆ ನೌಕರರು ನೌಕರರಲ್ಲೇ ಹೊಂದಾಣಿಕೆ ಇಲ್ಲದಿರುವುದರಿಂದ ಪೊಲೀಸ್ ಪ್ರಕರಣಗಳು ದಾಖಲಾಗುತ್ತಿವೆ ಇವೆಲ್ಲವನ್ನು ಬಿಡಬೇಕು. ಇನ್ನು ವೇತನಕ್ಕಾಗಿ ಹೋರಾಟ ಮಾಡಿದ 2500 ನೌಕರರನ್ನು ಅಮಾನತು, ವಜಾ, ವರ್ಗಾವಣೆ ಮಾಡಿದ್ದೇವೆ ಎಂದು ಅಧಿಕಾರಿಗಳು ಖುಷಿಯಿಂದ ಹೇಳುತ್ತಾರೆ ಎಂದರೆ ಅವರ ಮನಸ್ಥಿತಿ ಹೇಗಿದೆ ಎಂಬುವುದು ತಿಳಿಯುತ್ತದೆ.
ಏಕೆಂದರೆ ಮುಷ್ಕರ ಮಾಡುವುದು ಬೇಡಿಕೆ ಈಡೇರಿಕೆಗೆ ಆದರೆ ಈ ರೀತಿ ಹೋರಾಟ ಮಾಡಿದವರ ವಜಾ ಮಾಡಿ ಅಧಿಕಾರಿಗಳು ನಮ್ಮ ಬಳಿ ಏನೋ ಸಾಧನೆ ಮಾಡಿದ್ದೀವಿ ಎಂಬುಂತೆ ಹೇಳುತ್ತಾರೆ ಎಂದರೆ ಏನರ್ಥ ಎಂದು ಆತಂಕ ವ್ಯಕ್ತಪಡಿಸಿದರು. ಅಂದರೆ ನೌಕರರ ಹೋರಾಟದ ಫಲ ಅಧಿಕಾರಿಗಳಿಗೆ ಸಿಗುವುದಿಲ್ಲವೇ? ಆದರೂ ಏಕೆ ಈ ರೀತಿ ನಡೆದುಕೊಳ್ಳತ್ತಾರೆ ಎಂಬುವುದು ಅಧ್ಯಕ್ಷರ ಪ್ರಶ್ನೆ.
ನಮ್ಮ ನೌಕರರನ್ನು ರಕ್ಷಣೆ ಮಾಡುವವರು ಯಾರು ಸಂಸ್ಥೆಯ ಅಧಿಕಾರಿಗಳು, ನಾವು. ಆದರೆ, ಕೆಲಸದಿಂದ ತೆಗೆದುಹಾಕಿದ್ದೀವೆ ಎಂದು ಹೇಳುವುದು ಎಷ್ಟು ಸರಿ? ಮುಷ್ಕರ ಮಾಡಿದರು ಎಂದು ನೋಟಿಸ್ ಕೊಟ್ಟಿದ್ದೇವೆ ಎಂದು ಹೇಳುತ್ತಾರೆ ಎಂದರೆ ಇಲ್ಲಿ ಒಗ್ಗಟ್ಟಿನ ಕೊರತೆ ಇದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದೆ, ಜತೆಗೆ ಅಧಿಕಾರಿಗಳ ಬೇಡಿಕೆ ಏನು ಎಂಬುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಇನ್ನು ನಾವು ಯಾವಾಗಲು ನಿಮ್ಮ ಜತೆ ಇರುತ್ತೇವೆ. ನಿಮಗೆ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಕೊಡಿಸುವ ನಿಟ್ಟಿನಲ್ಲಿ ನಾವು ಕೂಡ ನಿಮ್ಮ ಜತೆಗಿರುತ್ತೇವೆ ಎಂದು NWKRTC ನಿಗಮದ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಭರವಸೆ ನೀಡಿದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....