CrimeNEWSಬೆಂಗಳೂರು

ಸಾಲಬಾಧೆಯಿಂದ ತತ್ತರಿಸಿ ಹೋಗಿದ್ದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾಲಬಾಧೆಯಿಂದ ತತ್ತರಿಸಿ ಹೋಗಿದ್ದ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಪಿ. ನಗರದ ಮೂರನೇ ಹಂತದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58), 28 ವರ್ಷದ ಅವರ ಅವಳಿ ಮಕ್ಕಳಾದ ನಿಖಿತ್‌ ಮತ್ತು ನಿಶ್ಚಿತ್‌ ಮೃತಪಟ್ಟವರು.

ಬೆಳಗ್ಗೆ ಪತಿಗೆ ಹಾಲು ಹಾಗೂ ಪೇಪರ್ ಕೊಟ್ಟು ಬಳಿಕ ರೂಂ ಲಾಕ್‌ ಮಾಡಿಕೊಂಡುಮಕ್ಕಳ ಜೊತೆ ತಾಯಿಯೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುಕನ್ಯಾ ಪತಿ ಜಯಾನಂದ್‌ ಈ ಹಿಂದೆ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್‌ನಿಂದ ಫ್ಯಾಕ್ಟರಿ ನಷ್ಟಕ್ಕೆ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ಜಯಾನಂದ್‌ ಫ್ಯಾಕ್ಟರಿ ಬಂದ್‌ ಮಾಡಿದ್ದರು. ಅಲ್ಲದೆ ತುಂಬ ಸಾಲ ಮಾಡಿಕೊಂಡು ತೀರಿಸಲಾಗದೆ ಪರಿತಪ್ಪಿಸುತ್ತಿದ್ದರು.

ಇನ್ನು ಸಂಸಾರ ಸರಿದೂಗಿಸುವುದಕ್ಕಾಗಿ ಸುಕನ್ಯಾ ಅವರು ಮನೆಯಲ್ಲಿ ಟ್ಯೂಷನ್‌ ಹೇಳಿಕೊಡುತ್ತಿದ್ದರು. ವ್ಯವಹಾರದಲ್ಲಿ ನಷ್ಟವಾಗಿದ್ದರಿಂದ ಜಯಾನಂದ್‌ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.

ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು.

ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ