CRIMENEWSನಮ್ಮಜಿಲ್ಲೆ

ಕಾಲು ಜಾರಿ ಕೆರೆಬಿದ್ದ ಬಾಲಕಿ, ರಕ್ಷಿಸಲು ಹೋದ ಇಬ್ಬರು ಸೇರಿ ಮೂವರು ನೀರುಪಾಲು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕಾಲು ಜಾರಿ ಕೆರೆಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಮತ್ತೊಬ್ಬ ಬಾಲಕಿ ಹೋಗಿದ್ದಾಳೆ ಈ ಇಬ್ಬರನ್ನು ರಕ್ಷಿಸಲು ಅವರ ತಂದೆ ಹೋಗಿದ್ದಾರೆ. ಈ ವೇಳೆ ಈಜು ಬಾರದೆ ಮೂವರು ಮೃತಪಟ್ಟಿದ್ದಾರೆ.

ದೀಪಾವಳಿ ಹಬ್ಬದಂದೇ ಈ ಮೂವರು ದಾರುಣವಾಗಿ ಅಸುನೀಗಿದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಯರೆಕಟ್ಟೆ ಗ್ರಾಮದಲ್ಲಿ ನಡೆದಿದೆ ನಡೆದಿದೆ.

ಗ್ರಾಮದ ಶ್ರಾವ್ಯಾ (12), ಪುಣ್ಯಾ(12), ಶ್ರಾವ್ಯಾಳ ತಂದೆ ವೆಂಕಟೇಶ್ (50) ಮೃತರು. ಮೂತ್ರ ವಿಸರ್ಜನೆ ವೇಳೆ ಶ್ರಾವ್ಯಾ ಕಾಲು ಜಾರಿ ಕೆರೆಗೆ ಬಿದ್ದಳು. ಶ್ರಾವ್ಯಾಳನ್ನ ರಕ್ಷಿಸಲು ಪುಣ್ಯಾ ಕೆರೆಗೆ ಇಳಿದಿದ್ದಾಳೆ. ಇವರಿಬ್ಬರನ್ನೂ ರಕ್ಷಿಸಲು ವೆಂಕಟೇಶ್‌ ನೀರಿಗೆ ಹಾರಿದ್ದಾರೆ. ಮೂವರಿಗೂ ಈಜು ಬಾರದೆ ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ ನಾಲ್ಕು ಮೂವತ್ತರ ವೇಳೆಯಲ್ಲಿ ದುರ್ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಶೋಧಕಾರ್ಯ ನಡೆಸಿದರು.

ಸದ್ಯ ಮೂರು ಮೃತದೇಹಗಳನ್ನ ಹೊರತೆಗೆದು ಚಿಕ್ಕನಾಯಕನಹಳ್ಳಿ‌ ಸಾರ್ವಜನಿಕ‌ ಆಸ್ಪತ್ರೆಯ ಶವಾಗಾರಕ್ಕೆ‌ ರವಾನೆ ಮಾಡಲಾಗಿದೆ. ಈ ಅವಘಡ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ