CRIMENEWSನಮ್ಮಜಿಲ್ಲೆ

ಮಂಡ್ಯ: ಕುತ್ತಿಗೆಗೆ ಹಗ್ಗಬಿಗಿದು ಹೆದರಿಸಿ ಹೆದ್ದಾರಿಯಲ್ಲಿ ದರೋಡೆಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಓದುವುದನ್ನು ಬಿಟ್ಟು ಹೆದ್ದಾರಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ಕಿರಣ್, ಕುಶಾಲ್ ಬಾಬು ಮತ್ತು ಗೋಕುಲ್ ಬಂಧಿತ ದರೋಡೆಕೋರ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಪೊಲೀಸರು ಮೂವರು ದರೋಡೆಕೋರ ವಿದ್ಯಾರ್ಥಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅವರು ಹಣ ಮಾಡುವ ಉದ್ದೇಶದಿಂದ ರಾಬರಿಗೆ ಇಳಿದಿದ್ದರು ಎಂಬುವುದು ತಿಳಿದು ಬಂದಿದೆ.

ಈ ದರೋಡೆಕೋರ ವಿದ್ಯಾರ್ಥಿಗಳು ಸಾರ್ವಜನಿಕರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಹೆದರಿಸಿ ಅವರ ಬಳಿ ಇರುವ ಚಿನ್ನ, ಹಣ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು.

ವ್ಯಾಪಾರ (ಬಿಸಿನೆಸ್) ನೆಪದಲ್ಲಿ ಒಂದಾಗಿದ್ದ ಈ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ಇನ್ನಿ ಇವರಿಗೆ ಕೆಂಗೇರಿ ಬಸ್ ನಿಲ್ದಾಣದ ಬಳಿ ಬಸ್ ಕಾಯುವವರೇ ಇವರ ಟಾರ್ಗೆಟ್ ಆಗಿದ್ದರು. ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹೋಗುತ್ತಿದ್ದರು. ಮಂಡ್ಯ ಬರುತ್ತಿದ್ದಂತೆ ಅವರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಬೆದರಿಸಿ ಅವರ ಬಳಿ ಇದ್ದ ಚಿನ್ನ ಹಣ ಎಗರಿಸಿ ಪರಾರಿಯಾಗುತ್ತಿದ್ದರು.

ಈ ರೀತಿ ದರೋಡೆ ಮಾಡಿ ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು. ಸದ್ಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!