ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು ತೆಗೆದುಕೊಂಡಿದ್ದರು. ಈಗ ಆ ರೀತಿಯ ಟಿಕೆಟ್ ಇಲ್ಲ ಬಿಡಿ. ಆದರೆ ಅಧಿಕಾರಿಗಳು ತೆಗೆದುಕೊಳ್ಳುವ ಸಣ್ಣತನದ ನಿರ್ಧಾರದಿಂದ ನೌಕರರು ಎಷ್ಟೆಲ್ಲ ಸಮಸ್ಯೆ ಅನುಭವಸಬೇಕಾಗುತ್ತದೆ ಅನ್ನೋದು ಗೊತ್ತಾಗಬೇಕಲ್ಲ, ಅದಕ್ಕಾಗಿ.
ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು ಶಾಂತಿ ನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಕುಳಿತು ಒಂದು ಸಹಿ ಮಾಡಿ ಆದೇಶ ಮಾಡಿಬಿಟ್ಟರು. ಆದರೆ ಅವರಿಗೇನುಗೊತ್ತು ಕಳೆದುಕೊಂಡ ಟಿಕೆಟ್ಗೆ ಮೌಲ್ಯವೇ ಇಲ್ಲದಾಗ ನಿರ್ವಾಹಕರಿಂದ ಪ್ರತಿ ಶೂನ್ಯ ಟಿಕೆಟ್ 10 ರೂಪಾಯಿ ವಸೂಲಿ ಮಾಡಿ ಎಂಬ ಆದೇಶದಿಂದ ನೌಕರರಿಗೆ ಲಾಸ್ ಆಗುತ್ತದೆ ಎಂದು.
ಈ ರೀತಿ ಆದೇಶ ಹೊರಡಿಸುವ ಮುನ್ನ ಮುಖ್ಯ ಸಂಚಾರಿ ವ್ಯವಸ್ಥಾಪಕರು ಸ್ವಲ್ಪ ತಾಳ್ಮೆಯಿಂದ ಯೋಚಿಸಬೇಕಾಗುತ್ತದೆ. ಟಿಕೆಟ್ಅನ್ನು ನಿರ್ವಾಹಕರು ಕಳೆದುಕೊಂಡಿದ್ದಾರೆ ಎಂದ ಮೇಲೆ ಆ ಟಿಕೆಟ್ನಿಂದ ಸಂಸ್ಥೆಗೆ ಯಾವುದೇ ನಷ್ಟವಾಗುವುದಿಲ್ಲ. ಅಂದ ಮೇಲೆ ನಿರ್ವಾಹಕರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬೇಕು ಅವರಿಂದ ಟಿಕೆಟ್ ಹೇಗೆ ಕಳೆದುಕೊಂಡಿರಿ ಎಂಬ ಬಗ್ಗೆ ವಿವರಣೆ ಬರದುಕೊಡಿ ಎಂದು ಹೇಳಿ ಬರೆಸಿಕೊಂಡು ಆ ಬಳಿಕ ನಿಜವಾಗಲು ಟಿಕೆಟ್ ಕೆಳೆದುಹೋಗಿವೆ ಎಂದು ಖಚಿತವಾದ ಮೇಲೆ ಆ ಪ್ರಕರಣವನ್ನು ಕೈ ಬಿಟ್ಟರಾಯಿತಲ್ಲವೇ?
ಅದನ್ನು ಬಿಟ್ಟು ನಿರ್ವಾಹಕರೆ ಏನೋ ಆ ಟಿಕೆಟ್ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ರೀತಿಯಲ್ಲಿ ಅವರಿಂದ ಪ್ರತಿ ಟಿಕೆಟ್ಗೆ 10 ರೂಪಾಯಿ ವಸೂಲಿ ಮಾಡಿ ಎಂಬ ಸುತ್ತೋಲೆ ಹೊರಡಿಸಿರುವುದು ಒಂದು ರೀತಿ ಹಾಸ್ಯಸ್ಪದವಾಗಿ ಕಾಣುತ್ತಿದೆ. ಅಲ್ಲದೆ ಆ ಅಧಿಕಾರಿಯ ಮನಸ್ಥಿತಿ ಏನಾಗಿದೆ ಎಂಬುದರ ಬಗ್ಗೆಯೂ ಯೋಚಿಸಬೇಕಿದೆ ಎಂಬ ಅನುಮಾನ ಮೂಡುವಂತಿದೆ.
ಆ ಮುಖ್ಯ ಸಂಚಾರಿ ವ್ಯವಸ್ಥಾಪಕರು ಹೊರಟಿಸಿರುವ ಸುತ್ತೋಲೆ? ಸುತ್ತೋಲೆ ಸಂಖ್ಯೆ: 1796/2024 (ಸಂಚಾರ ಇಲಾಖೆಯಿಂದ ಹೊರಡಿಸಲಾಗಿದೆ) ವಿಷಯ: “ಶಕ್ತಿ ಯೋಜನೆ’ಯಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರುಗಳಿಗೆ ವಿತರಿಸಲು ನೀಡಿರುವ ಪಿಂಕ್ ಟಿಕೆಟ್ಗಳನ್ನು ಕಳೆದುಕೊಂಡಾಗ ಕೈಗೊಳ್ಳಬೇಕಾದ ಕ್ರಮದ ಕುರಿತು.
ಉಲ್ಲೇಖ:ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ: 818/2023, ದಿನಾಂಕ: 07-06.2023.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 818/2023 ರನ್ವಯ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಇ.ಟಿ.ಎಂ. ಕಾರ್ಯ ನಿರ್ವಹಿಸದ ಸ್ಪಂದರ್ಭದಲ್ಲಿ ಪಿಂಕ್ ಟಿಕೆಟ್ ವಿತರಿಸಲು (ಲಗ್ಗೇಜ್ ಟಿಕೆಟ್ ರೀತಿಯಲ್ಲಿ) ತಿಳಿಸಲಾಗಿರುತ್ತದೆ. ಅದೇ ರೀತಿ ಎಲ್ಲ
ನಿರ್ವಾಹಕರಿಗೂ ಪಿಂಕ್ ಟಿಕೆಟ್ನ್ನು ವಿತರಿಸಲಾಗಿರುತ್ತದೆ. ಈ ರೀತಿ ನಿರ್ವಾಹಕರಿಗೆ ವಿತರಿಸಿರುವ ಪಿಂಕ್ ಟಿಕೆಟ್ ಕಳೆದುಹೋದ ಪಕ್ಷದಲ್ಲಿ ನಿರ್ವಾಹಕರ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಯಾವುದೇ ಮಾರ್ಗದರ್ಶನ ನೀಡಿರುವುದಿಲ್ಲವೆಂದು ತಿಳಿಸಿ, ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಮಾರ್ಗದರ್ಶನವನ್ನು ಕೋರಿ ವಿಭಾಗಗಳಿಂದ ಪತ್ರಗಳನ್ನು ಸ್ವೀಕರಿಸಲಾಗುತ್ತಿರುತ್ತದೆ.
ಈ ಸಂಬಂಧ ನಿರ್ವಾಹಕರಿಗೆ ಪಿಂಕ್ ಟಿಕೆಟ್ನ್ನು ಲಗ್ಗೇಜು ಟಿಕೆಟ್ ಮಾದರಿಯಲ್ಲಿ ವಿತರಿಸುತ್ತಿದ್ದು, ಸದರಿ ಟಿಕೆಟ್ಗಳಿಗೆ ಮುಖ ಬೆಲೆ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಸದರಿ ಕಳೆದುಹೋದ ಪ್ರತಿ ಟಿಕೆಟ್ಗೆ ರೂ. 10/- (ರೂ.ಹತ್ತು)ರಂತೆ ನಿಗದಿ ಮಾಡಿ, ಸದರಿ ಮೊತ್ತವನ್ನು ಸಂಬಂಧಿಸಿದ ನಿರ್ವಾಹಕರಿಂದ ಭರಿಸಿಕೊಳ್ಳುವಂತೆ ಹಾಗೂ ಸದರಿ ಟಿಕೆಟ್ ಕಳೆದ ಕಾರಣ ಅವರ ನಿರ್ಲಕ್ಷತೆಗೆ ಸೂಕ್ತ ಶಿಸ್ತಿನ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.
ಇನ್ನು ಈ ಸುತ್ತೋಲೆಯನ್ನು ಸ್ವೀಕರಿಸಿದ ಬಗ್ಗೆ ಸ್ವೀಕೃತಿಯನ್ನು ಹಾಗೂ ಕೈಗೊಂಡ ಕ್ರಮದ ಬಗ್ಗೆ ಅನುಸರಣಾ – ವರದಿಯನ್ನು ನೀಡುವುದು ಎಂದು ಮುಖ್ಯ ಸಂಚಾರಿ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ. ಇದರಿಂದ ನಿರ್ವಾಹಕರಿಗೆ ಎಷ್ಟು ಕಿರಿಕಿರಿಯಾಗುತ್ತೆ ಎಂಬ ತಿಳಿವಳಿಕೆಯೂ ಇಲ್ಲದೆ ಈ ರೀತಿ ಸುತ್ತೋಲೆ ಹೊರಡಿಸುವುದು ಎಷ್ಟೆ ಮಟ್ಟಿಗೆ ಸರಿ ಇರುತ್ತದೆ. ಈ ಬಗ್ಗೆ ಏಕೆ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸುವುದಿಲ್ಲ ಎಂಬುವುದೇ ಯಕ್ಷಪ್ರಶ್ನೆಯಾಗಿದೆ.
Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...