ಬೆಂಗಳೂರು: ಕೇಂದ್ರ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪಿಸುತ್ತಾರೆ. ಆದರೆ ಇವರು ಮಾಡುತ್ತಿರುವುದು ಏನು ಎಂದು ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರದಿಂದ ದ್ವೇಷ ರಾಜಕಾರಣ ಮಾಡುತ್ತಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.
ಇನ್ನು ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದ ಭೂಮಿ ಒತ್ತುವರಿ ತೆರವಿಗೆ ಸರ್ಕಾರ ರಚಿಸಿದ್ದ ಎಸ್ಐಟಿಗೆ ಹೈಕೋರ್ಟ್ ತಡೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 40 ವರ್ಷಗಳ ಹಿಂದೆ ಖರೀದಿಸಿದ ಜಮೀನು. ಅದರಲ್ಲಿ ಅತಿಕ್ರಮಣವಾಗಿಲ್ಲ. ಆದರೆ ರಾಜ್ಯಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನವಾಗಲಿದೆ ಎಂದರು.
ನಿವೇಶನ ಕೊಡಬೇಕಾದರೆ ಕಮಿಷನ್ ನಡೆಯುತ್ತದೆ. ಇದು ನಿರಂತರವಾಗಿ ಎಲ್ಲ ಇಲಾಖೆಯಲ್ಲೂ ನಡೆಯುತ್ತಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, ರೇಟ್ ಎಷ್ಟು ಫಿಕ್ಸ್ ಮಾಡಿದ್ದೀರ ಎಂದು ಕೇಳಿದ್ದಾರೆ. ಈ ವಿಚಾರ ಮಂತ್ರಿಗಳಿಗೂ ಗೊತ್ತಿದ್ದು, ಅವರವರ ಇಲಾಖೆಗಳಲ್ಲಿ ಏನೇನು ನಡೆಯುತ್ತಿದೆ ಎಂಬುದರ ಮಾಹಿತಿಯೂ ಇದೆ ಎಂದು ವಸತಿ ಇಲಾಖೆಗೆ ಸಂಬಂಧಿಸಿದ ಆಡಿಯೋ ವೈರಲ್ ಆಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ಹಣ ನೀಡಿದರೆ ಮಾತ್ರ ಅನುದಾನ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಇದನ್ನು ನಾನಾಗಲೀ, ವಿಪಕ್ಷವಾಗಲೀ ಹೇಳುತ್ತಿಲ್ಲ. ಈಗ ಹಣ ಮಾಡಿದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇದರ ಮರ್ಮ ಇರಬೇಕು ಎಂದರು.
2028ಕ್ಕೆ ಜೆಡಿಎಸ್, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆಯನ್ನು ಹೊಲಿಸಿಕೊಡುತ್ತೇನೆಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವ್ಯಂಗ್ಯದ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅಂತಹ ದಾರಿದ್ರ್ಯ ನಮಗೆ ಬಂದಿಲ್ಲ. ಈ ನಾಡಿನ ಜನತೆ ನನಗೆ ದಾರಿದ್ರ್ಯವನ್ನು ಕೊಟ್ಟಿಲ್ಲ. ದುಡ್ಡಿನ ದಾರಿದ್ರ್ಯ ಇರುವುದು ಅವರಿಗೆ. ಆ ಪಾಪದ ಹಣದಿಂದ ನಾನು ಬಟ್ಟೆ ತರಿಸಿಕೊಳ್ಳಬೇಕಾ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಬಮೂಲ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದೆ ಕೆಎಂಎಫ್ ಅಧ್ಯಕ್ಷರನ್ನೂ ಮಾಡಿಕೊಳ್ಳುತ್ತಾರೆ. ಸರ್ಕಾರ ಅವರದ್ದಿದೆ. ಮುಂದೆ ಸಮಯ ಬರುತ್ತದೆ. ಸೂಕ್ತ ಉತ್ತರ ಕೊಡೋಣ ಎಂದು ಹೇಳಿದರು.
Related

You Might Also Like
KSRTC: ಹೈಕೋರ್ಟ್ ಆದೇಶವನ್ನೇ ಉಲ್ಲಂಘಿಸಿ ಗುಜರಿ, ತಾಂತ್ರಿಕ ದೋಷವಿರುವ ಬಸ್ಗಳ ರಸ್ತೆಗಿಳಿಸಿ ಜೀವದ ಜತೆ ಚೆಲ್ಲಾಟ
ಕನಕಪುರ: ಗುಜರಿ ಬಸ್, ತಾಂತ್ರಿಕ ದೋಷವಿರುವ ಬಸ್ಗಳನ್ನು ರಸ್ತೆಗಿಳಿಸಬಾರದೆಂದು ಹೈಕೋರ್ಟ್ ತಾಕೀತು ಮಾಡಿದ್ದರೂ ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಹುತೇಕ ಎಲ್ಲ ವಿಭಾಗಗಳ ಅಧಿಕಾರಿಗಳು...
11 ವರ್ಷಗಳಲ್ಲಿ ಮಹತ್ವದ ಪರಿವರ್ತನೆ ಹೊಂದಿದ ದೇಶದ ಆರೋಗ್ಯ ಕ್ಷೇತ್ರ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅಭಿಮತ
ಆದಿಚುಚನಗಿರಿ ವಿವಿ ಕ್ಯಾಂಪಸ್ ಉದ್ಘಾಟನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11...
ಲಿವಿಂಗ್ ಟು ಗೆದರ್ನಲ್ಲಿದ್ದ ಯುವತಿ ಗರ್ಭಿಣಿ- ಮಗುವಿಗೆ ಜನ್ಮನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತ: ಯುವಕ ಪರಾರಿ
ಬೆಂಗಳೂರು: ಲಿವಿಂಗ್ ಟು ಗೆದರ್ನಲ್ಲಿದ್ದ ಯುವತಿ ಗರ್ಭಿಣಿಯಾದ ನಂತರ ಯುವಕ ಕೈಕೊಟ್ಟಿದ್ದು, ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಆಕೆ ಮೃತಪಟ್ಟಿರುವ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ...
ನಿಮ್ಮ ಹೊಲಕ್ಕೆ ಹೋಗುವುದು ನಿಮ್ಮ ಹಕ್ಕು: ಅಕ್ಕ-ಪಕ್ಕ ಜಮೀನವರು ದಾರಿ ಕೊಡ್ತಿಲ್ವಾ? ಭಯಬೇಡ ಹೀಗೆ ಮಾಡಿ!
ಬೆಂಗಳೂರು: ಟ್ರ್ಯಾಕ್ಟರ್, ಎತ್ತು, ಗೊಬ್ಬರ, ಕೃಷಿ ಉಪಕರಣಗಳನ್ನ ಹೊಲಕ್ಕೆ ತಗೊಂಡು ಹೋಗಬೇಕು. ಆದರೆ ಅಕ್ಕಪಕ್ಕದ ಜಮೀನಿನ ಮಾಲೀಕರು, "ನಮ್ಮ ಜಮೀನಿನಲ್ಲಿ ಓಡಾಡಂಗಿಲ್ಲ, ದಾರಿ ಬಿಡಲ್ಲ," ಅಂತ ಕಾಲು...
BMTC: 87 ನಿರ್ವಾಹಕರಿಗೆ TC ಹುದ್ದೆಗೆ ಮುಂಬಡ್ತಿ- ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಸಿಪಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 87 ನಿರ್ವಾಹಕರನ್ನು ಸಂಚಾರಿ ನಿಯಂತ್ರಕ (TC) ಹುದ್ದೆಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು...
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...