Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ತಿ.ನರಸೀಪುರ: ನೀರಿಗಾಗಿ ನೀರಾವರಿ ನಿಗಮದ ಕಚೇರಿ ಮುಂದೆ ರೈತರ ಪ್ರತಿಭಟನೆ ಆಕ್ರೋಶ

ಉಸ್ತುವಾರಿ ಸಚಿವ ಡಾ:ಎಚ್‌ಸಿಎಂ ನಡೆಗೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಕುಡಿಯುವ ನೀರಿಗಾಗಿ ತಕ್ಷಣವೇ ಕಾಲುವೆಗಳಲ್ಲಿ ನೀರು ಹರಿಸಿ, ನದಿ ಮೂಲಕ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಇಂದು ಪಟ್ಟಣದ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಅತ್ತಹಳ್ಳಿ ದೇವರಾಜ್, ಕಬಿನಿ – ಕಾವೇರಿ ಜಲಾಶಯದಿಂದ ತಮಿಳು ನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಹರಿಸಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಾಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಜನತೆ ಹಾಗೂ ರೈತರನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿದೆ. ಅಧಿಕಾರ ಕೊಟ್ಟ ರಾಜ್ಯದ ಜನತೆಗೆ ಹಾಗೂ ರೈತರಿಗೆ ದ್ರೋಹ ಬಗೆದು ತಮ್ಮ ಅಧಿಕಾರದ ಆಸೆಗೆ ಅಧಿಕಾರ ಕೊಟ್ಟ ರಾಜ್ಯದ ರೈತರಿಗೆ ಹಾಗೂ ಜನತೆಗೆ ಮರಣ ಶಾಸನ ಬರೆಯುತ್ತಿದೆ ಎಂದು ಕಿಡಿಕಾರಿದರು.

ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿನ ಗುಲಾಮರಂತೆ ವರ್ತಿಸುವುದನ್ನು ನಿಲ್ಲಿಸಿ ಅಚ್ಚುಕಟ್ಟು ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಾಲಿ ಬೆಳೆದು ನಿಂತಿರುವ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಮುಂದಾಗದೆ, ತಮಿಳುನಾಡಿನ ಹಿತ ಕಾಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ತಕ್ಷಣವೇ ತಮಿಳುನಾಡಿಗೆ ಕಾವೇರಿ – ಕಬಿನಿ ಜಲಾಶಯದಿಂದ ಬಿಟ್ಟಿರುವ ನೀರು ನಿಲಿಸಬೇಕು, ಇಲ್ಲವೇ ಕಚೇರಿ ಬಿಟ್ಟು ತೊಲಗಬೇಕು. ಇದು ರೈತರ ಎಚ್ಚರಿಕೆ. ತಮಿಳುನಾಡಿನ ಗುಲಾಮರಂತೆ ವರ್ತಿಸಿ ಜೀತ ಪದ್ಧತಿ ಮುಂದುವರಿಸಿದರೆ ತಮಿಳುನಾಡಿಗೆ ತೊಲಗಿ ಎಂದು ಎಚ್ಚರಿಕೆ ನೀಡಿ ಒತ್ತಾಯ ಸಲ್ಲಿಸಿದರು.

ಉಸ್ತುವಾರಿ ಸಚಿವ ಡಾ:ಎಚ್‌ಸಿಎಂ ನಡೆಗೆ ಖಂಡನೆ: ಇಂದು ನರಸೀಪುರದ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅದೇ ಮಾರ್ಗವಾಗಿ ಬಂದರು ರೈತರನ್ನು ನೋಡಿಯೂ ನೋಡದಂತೆ ಹೋಗಿದ್ದಾರೆ.

ಸೌಜನ್ಯಕ್ಕಾದರು ಇವರು ಕಾರು ಇಳಿದು ಬಂದು ರೈತರ ಸಮಸ್ಯೆ ಏನು ಎಂದು ಕೇಳಬೇಕಿತ್ತು. ಆದರೇ ಇರಿವರಿಗೆ ಕೇಳುವ ತಾಳ್ಮೆ ಸಹನೆ ಇಲ್ಲ ಎಂದರೆ ಇವರು ಜನ ಪ್ರತಿನಿಧಿಯ ಅಥವಾ ಸರ್ವಾಧಿಕಾರಿಯಾ? ಇವರಿಗೆ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂಬುದು ಇದರಿಂದ ಎದ್ದು ಕಾಣುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಚಿವರ ವರ್ತನೆಯನ್ನು ಖಂಡಿಸಿದ್ದಾರೆ.

ರೈತರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ತಾಲೂಕು ಉಪಾಧ್ಯಕ್ಷರಾದ ಹೆಗ್ಗೂರು ರಂಗರಾಜ್, ಆದಿಬೆಟ್ಟಹಳ್ಳಿ ನಂಜುಂಡಸ್ವಾಮಿ, ತಾಲೂಕು ಪ್ರದಾನ ಕಾರ್ಯದರ್ಶಿ ಕಿರಗಸೂರು ಪ್ರಸಾದ್ ನಾಯಕ್, ತಾಲೂಕು ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಮುಖಂಡರಾದ ಗೌರಿ ಶಂಕರ್, ಕುರುಬೂರು ಗುರುಸ್ವಾಮಿ, ಬನ್ನೂರು ಸೂರಿ, ಶೇಖರ್, ತರಕಾರಿ ನಿಂಗರಾಜು ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...