NEWSದೇಶ-ವಿದೇಶನಮ್ಮರಾಜ್ಯ

ಸಿವಿಲ್‌ ನ್ಯಾಯಾಧೀಶರಾಗಲು ಕನಿಷ್ಠ ಮೂರು ವರ್ಷ ವಕೀಲ ವೃತ್ತಿ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಪರೀಕ್ಷೆ ಬರೆಯಲು ಅಭ್ಯರ್ಥಿಯಾಗುವುದಕ್ಕೆ ಮೂರು ವರ್ಷ ವಕೀಲರಾಗಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ಇಂದು ಮಹತ್ವದ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯ ಮೂರ್ತಿಗಳಾದ ಬಿ.ಆರ್‌.ಗವಾಯಿ, ನ್ಯಾಯಮೂರ್ತಿ ಎ.ಜಿ.ಮಸಿಹ್‌ ಹಾಗೂ ನ್ಯಾಯಮೂರ್ತಿ ಕೆ.ವಿನೋದ್‌ ಚಂದ್ರನ್‌ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಮಂಗಳವಾರ (ಮೇ 20ರಂದು) ಈ ಆದೇಶ ಹೊರಡಿಸಿದೆ.

ಪ್ರಸ್ತುತ ಕಾನೂನು ಪದವಿಧರರನ್ನು ನೇರವಾಗಿ ನ್ಯಾಯಧೀಶರಾಗಿ ನೇಮಿಸುವುದುಕ್ಕೆ ಅವಕಾಶವಿದೆ. ಹೀಗೆ ಕಾನೂನು ಪದವಿ ಪಡೆದ ಕೂಡಲೆ ಸಿವಿನ್‌ ನ್ಯಾಯಾಧೀಶರ ಹುದ್ದೆಗೆ ಪರೀಕ್ಷೆ ಮೂಲಕ ನೇಮಕಗೊಳ್ಳುತ್ತಿರುವುದರಿಂದ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವುದು ಮುಖ್ಯವಾಗಿದೆ ಎಂದು ನ್ಯಾಯಪೀಠವು ತಿಳಿಸಿದೆ.

ಇನ್ನು ಸಿವಿಲ್‌ ನ್ಯಾಯಾಧೀಶರ (ಜೂನಿಯರ್‌ ವಿಭಾಗ) ಪರೀಕ್ಷೆಗೆ ಹಾಜರಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ಅನುಭವ ಹೊಂದಿರಬೇಕು ಎಂಬ ನಿಯಮವನ್ನು ಮತ್ತೆ ಆರಂಭಿಸಬೇಕು ಎಂದು ನ್ಯಾಯಪೀಠ ಆದೇಶಿಸಿದ್ದು, ಜತೆಗೆ ಇದು ಪ್ರಸ್ತುತ ನಡೆಯುತ್ತಿರುವ ನ್ಯಾಯಾಂಗ ನೇಮಕಾತಿಗೆ ಅನ್ವಯಿಸುವುದಿಲ್ಲ ಎಂದೂ ಕೂಡ ಸ್ಪಷ್ಟಪಡಿಸಿದೆ.

ಅಲ್ಲದೆ ಹೈಕೋರ್ಟ್‌ಗಳು ಪ್ರಸ್ತುತ ನಡೆಸುತ್ತಿರುವ ಸಿವಿಲ್‌ ನ್ಯಾಯಾಧೀಶರ (ಜೂನಿಯರ್‌ ವಿಭಾಗ) ನೇಮಕಾತಿ ಪ್ರಕ್ರಿಯೆಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ತಿಳಿಸಿರುವ ನ್ಯಾಯಪೀಠ ಈ ಬಾರಿಯ ನೇಮಕಾತಿ ಪರೀಕ್ಷೆ ಹೊರತುಪಡಿಸಿ ಮುಂದಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದಾಗ ಮೂರು ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿರುವವರನ್ನು ಅಭ್ಯರ್ಥಿಗಳಾಗಿಸುವುದು ಕಡ್ಡಾಯ ಎಂದು ಆದೇಶ ನೀಡಿದೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...