BMTC ಬಸ್ನಲ್ಲಿ ಬೆಂಗಳೂರು- ಕನಕಪುರ ನಡುವೆ ಪ್ರಯಾಣಿಸುವ ಸಾರ್ವಜನಿಕರಿಂದ ಟೋಲ್ ಶುಲ್ಕ ₹5 ಸಂಗ್ರಹ: ಸಿಟಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ-948ರ ಬೆಂಗಳೂರು-ಕನಕಪುರ ರಸ್ತೆಯಲ್ಲಿನ ಪ್ರಯಾಣಿಸುವ ಸಾರ್ವಜನಿಕರು ಹೆಚ್ಚುವರಿಯಾಗಿ ಗೆ ಟೋಲ್ ಶುಲ್ಕ 5ರೂಪಾಯಿಯನ್ನು ಪಾವತಿಸಬೇಕು.
ಈ ಸಂಬಂಧ ಮಂಗಳವಾರ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಆದೇಶ ಹೊರಡಿಸಿದ್ದು, ಸೋಮನಹಳ್ಳಿ ಟೋಲ್ ಪ್ಲಾಜಾ ಮಾರ್ಗವಾಗಿ ಕಾರ್ಯಾಚರಣೆಯಾಗುವ ಸಂಸ್ಥೆಯ ಸಾರಿಗೆಗಳಿಗೆ ಟೋಲ್ ಶುಲ್ಕ 5 ರೂಪಾಯಿಯನ್ನು ಪ್ರತಿ ಟಿಕೆಟ್ಗೂ ಹೆಚ್ಚುವರಿಯಾಗಿ ಪಡೆಯುವಂತೆ ನಿರ್ವಾಹಕರಿಗೆ ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ-948 ರ ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸೋಮನಹಳ್ಳಿ ಗೇಟ್ ಹತ್ತಿರ ಹೊಸದಾಗಿ ಟೋಲ್ ಪ್ಲಾಜಾ ನಿರ್ಮಿಸಿದ್ದು, ಈ ರಸ್ತೆ ಮಾರ್ಗವಾಗಿ ಕಾರ್ಯಾಚರಣೆಯಾಗುವ ವಾಹನಗಳಿಗೆ ಇದೇ ಮೇ 9 ರಿಂದ ಜಾರಿಗೆ ಬರುವಂತೆ ಟೋಲ್ ಶುಲ್ಕವನ್ನು ಹಾಕಲಾಗುತ್ತಿದೆ.
ಅದರಂತೆ ಈ ಟೋಲ್ ಮಾರ್ಗವಾಗಿ ಸಂಸ್ಥೆಯ ಸಾರಿಗೆಗಳಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ಪಾಸು ಪ್ರಯಾಣಿಕರಿಗೂ ಸೇರಿದಂತೆ (ವಿಶೇಷಚೇತನ ಪಾಸು ಹಾಗೂ ವಿದ್ಯಾರ್ಥಿ ರಿಯಾಯಿತಿ ಪಾಸುದಾರರನ್ನು ಮಾತ್ರ ಹೊರತುಪಡಿಸಿ) 5ರೂಪಾಯಿ ಟೋಲ್ ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಜಿಲ್ಲೆಯೊಳಗೆ ನೋಂದಣಿ ಆಗಿರುವ ವಾಣಿಜ್ಯ ವಾಹನಗಳಿಗೆ ಪ್ರತಿ ಏಕಮುಖ ಸುತ್ತುವಳಿಗೆ 145 ರೂ.ಗಳನ್ನು ಪಾವತಿಸಬೇಕು. ಹೀಗಾಗಿ ಪ್ರತಿ ಪ್ರಯಾಣಿಕರಿಂದ 5 ರೂ. ಪಡೆಯಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಇನ್ನು ಹಿರಿಯ/ ಘಟಕ ವ್ಯವಸ್ಥಾಪಕರು FASTag ಅಳವಡಿಸಿದ ವಾಹನಗಳನ್ನು ಮಾತ್ರ ಟೋಲ್ ಮಾರ್ಗವಾಗಿ ಕಾರ್ಯಾಚರಣೆಗೊಳಿಸಲು ಹಾಗೂ ಟೋಲ್ ಶುಲ್ಕವನ್ನು FASTag ಮೂಲಕವೇ ಪಾವತಿಸಲು ಕ್ರಮ ವಹಿಸಬೇಕು. ಟೋಲ್ ಮಾರ್ಗವಾಗಿ ಆಚರಣೆಗೊಳಿಸುವ ಎಲ್ಲ ಸಾರಿಗೆಗಳಿಗೆ ಸಂಬಂಧಿಸಿದಂತೆ ದಿನನಿತ್ಯ ಟೋಲ್ ಶುಲ್ಕ ಸಂದಾಯ ಮಾಡುವ ಬಗ್ಗೆ ಪರಿಶೀಲಿಸಿ, ಲಾಭದಾಯಕವಾಗಿದ್ದಲ್ಲಿ ಕಡ್ಡಾಯವಾಗಿ ದೈನಂದಿನ/ ಮಾಸಿಕ ಪಾಸುಗಳನ್ನು ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ಟೋಲ್ ಮಾರ್ಗವಾಗಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ, ಪಾಸು ಪ್ರಯಾಣಿಕರು ಸೇರಿದಂತೆ (ವಿಶೇಷಚೇತನ ಪಾಸು ಹಾಗೂ ವಿದ್ಯಾರ್ಥಿ ರಿಯಾಯಿತಿ ಪಾಸುದಾರರನ್ನು ಮಾತ್ರ ಹೊರತುಪಡಿಸಿ) ಪ್ರಯಾಣ ದರದ ಜತೆಗೆ 5 ರೂ. ಟೋಲ್ ಶುಲ್ಕವನ್ನು ಪಡೆಯಬೇಕು. ವಿದ್ಯಾರ್ಥಿ ರಿಯಾಯಿತಿ ಪಾಸು ಹಾಗೂ ವಿಶೇಷಚೇತನರ ಪಾಸುದಾರರನ್ನು ಹೊರತುಪಡಿಸಿ ಉಳಿದೆಲ್ಲ ಪಾಸುದಾರರಿಗೆ ಈ ಟೋಲ್ ಶುಲ್ಕ ಅನ್ವಯಿಸಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಈ ಟೋಲ್ ಮಾರ್ಗವಾಗಿ ಆಚರಣೆಯಾಗುವ ಎಲ್ಲ ಮಾರ್ಗದ ಅನುಸೂಚಿಗಳಲ್ಲಿನ ವಿದ್ಯುನ್ಮಾನ ಯಂತ್ರಗಳ ತಂತ್ರಾಂಶದಲ್ಲಿ ಪ್ರಯಾಣಿಕರ ಚೀಟಿ ಹಾಗೂ ಟೋಲ್ ಶುಲ್ಕ ಅಳವಡಿಸಲು ಮುಖ್ಯ ಗಣಕ ವ್ಯವಸ್ಥಾಪಕರವರು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸುತ್ತೋಲೆಯು ಮೇ 21ರಿಂದ ಅಂದರೆ ಇಂದಿನಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....