BMTC ಬಸ್ನಲ್ಲಿ ಬೆಂಗಳೂರು- ಕನಕಪುರ ನಡುವೆ ಪ್ರಯಾಣಿಸುವ ಸಾರ್ವಜನಿಕರಿಂದ ಟೋಲ್ ಶುಲ್ಕ ₹5 ಸಂಗ್ರಹ: ಸಿಟಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ-948ರ ಬೆಂಗಳೂರು-ಕನಕಪುರ ರಸ್ತೆಯಲ್ಲಿನ ಪ್ರಯಾಣಿಸುವ ಸಾರ್ವಜನಿಕರು ಹೆಚ್ಚುವರಿಯಾಗಿ ಗೆ ಟೋಲ್ ಶುಲ್ಕ 5ರೂಪಾಯಿಯನ್ನು ಪಾವತಿಸಬೇಕು.
ಈ ಸಂಬಂಧ ಮಂಗಳವಾರ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಆದೇಶ ಹೊರಡಿಸಿದ್ದು, ಸೋಮನಹಳ್ಳಿ ಟೋಲ್ ಪ್ಲಾಜಾ ಮಾರ್ಗವಾಗಿ ಕಾರ್ಯಾಚರಣೆಯಾಗುವ ಸಂಸ್ಥೆಯ ಸಾರಿಗೆಗಳಿಗೆ ಟೋಲ್ ಶುಲ್ಕ 5 ರೂಪಾಯಿಯನ್ನು ಪ್ರತಿ ಟಿಕೆಟ್ಗೂ ಹೆಚ್ಚುವರಿಯಾಗಿ ಪಡೆಯುವಂತೆ ನಿರ್ವಾಹಕರಿಗೆ ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ-948 ರ ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸೋಮನಹಳ್ಳಿ ಗೇಟ್ ಹತ್ತಿರ ಹೊಸದಾಗಿ ಟೋಲ್ ಪ್ಲಾಜಾ ನಿರ್ಮಿಸಿದ್ದು, ಈ ರಸ್ತೆ ಮಾರ್ಗವಾಗಿ ಕಾರ್ಯಾಚರಣೆಯಾಗುವ ವಾಹನಗಳಿಗೆ ಇದೇ ಮೇ 9 ರಿಂದ ಜಾರಿಗೆ ಬರುವಂತೆ ಟೋಲ್ ಶುಲ್ಕವನ್ನು ಹಾಕಲಾಗುತ್ತಿದೆ.
ಅದರಂತೆ ಈ ಟೋಲ್ ಮಾರ್ಗವಾಗಿ ಸಂಸ್ಥೆಯ ಸಾರಿಗೆಗಳಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ಪಾಸು ಪ್ರಯಾಣಿಕರಿಗೂ ಸೇರಿದಂತೆ (ವಿಶೇಷಚೇತನ ಪಾಸು ಹಾಗೂ ವಿದ್ಯಾರ್ಥಿ ರಿಯಾಯಿತಿ ಪಾಸುದಾರರನ್ನು ಮಾತ್ರ ಹೊರತುಪಡಿಸಿ) 5ರೂಪಾಯಿ ಟೋಲ್ ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಜಿಲ್ಲೆಯೊಳಗೆ ನೋಂದಣಿ ಆಗಿರುವ ವಾಣಿಜ್ಯ ವಾಹನಗಳಿಗೆ ಪ್ರತಿ ಏಕಮುಖ ಸುತ್ತುವಳಿಗೆ 145 ರೂ.ಗಳನ್ನು ಪಾವತಿಸಬೇಕು. ಹೀಗಾಗಿ ಪ್ರತಿ ಪ್ರಯಾಣಿಕರಿಂದ 5 ರೂ. ಪಡೆಯಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಇನ್ನು ಹಿರಿಯ/ ಘಟಕ ವ್ಯವಸ್ಥಾಪಕರು FASTag ಅಳವಡಿಸಿದ ವಾಹನಗಳನ್ನು ಮಾತ್ರ ಟೋಲ್ ಮಾರ್ಗವಾಗಿ ಕಾರ್ಯಾಚರಣೆಗೊಳಿಸಲು ಹಾಗೂ ಟೋಲ್ ಶುಲ್ಕವನ್ನು FASTag ಮೂಲಕವೇ ಪಾವತಿಸಲು ಕ್ರಮ ವಹಿಸಬೇಕು. ಟೋಲ್ ಮಾರ್ಗವಾಗಿ ಆಚರಣೆಗೊಳಿಸುವ ಎಲ್ಲ ಸಾರಿಗೆಗಳಿಗೆ ಸಂಬಂಧಿಸಿದಂತೆ ದಿನನಿತ್ಯ ಟೋಲ್ ಶುಲ್ಕ ಸಂದಾಯ ಮಾಡುವ ಬಗ್ಗೆ ಪರಿಶೀಲಿಸಿ, ಲಾಭದಾಯಕವಾಗಿದ್ದಲ್ಲಿ ಕಡ್ಡಾಯವಾಗಿ ದೈನಂದಿನ/ ಮಾಸಿಕ ಪಾಸುಗಳನ್ನು ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ಟೋಲ್ ಮಾರ್ಗವಾಗಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ, ಪಾಸು ಪ್ರಯಾಣಿಕರು ಸೇರಿದಂತೆ (ವಿಶೇಷಚೇತನ ಪಾಸು ಹಾಗೂ ವಿದ್ಯಾರ್ಥಿ ರಿಯಾಯಿತಿ ಪಾಸುದಾರರನ್ನು ಮಾತ್ರ ಹೊರತುಪಡಿಸಿ) ಪ್ರಯಾಣ ದರದ ಜತೆಗೆ 5 ರೂ. ಟೋಲ್ ಶುಲ್ಕವನ್ನು ಪಡೆಯಬೇಕು. ವಿದ್ಯಾರ್ಥಿ ರಿಯಾಯಿತಿ ಪಾಸು ಹಾಗೂ ವಿಶೇಷಚೇತನರ ಪಾಸುದಾರರನ್ನು ಹೊರತುಪಡಿಸಿ ಉಳಿದೆಲ್ಲ ಪಾಸುದಾರರಿಗೆ ಈ ಟೋಲ್ ಶುಲ್ಕ ಅನ್ವಯಿಸಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಈ ಟೋಲ್ ಮಾರ್ಗವಾಗಿ ಆಚರಣೆಯಾಗುವ ಎಲ್ಲ ಮಾರ್ಗದ ಅನುಸೂಚಿಗಳಲ್ಲಿನ ವಿದ್ಯುನ್ಮಾನ ಯಂತ್ರಗಳ ತಂತ್ರಾಂಶದಲ್ಲಿ ಪ್ರಯಾಣಿಕರ ಚೀಟಿ ಹಾಗೂ ಟೋಲ್ ಶುಲ್ಕ ಅಳವಡಿಸಲು ಮುಖ್ಯ ಗಣಕ ವ್ಯವಸ್ಥಾಪಕರವರು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸುತ್ತೋಲೆಯು ಮೇ 21ರಿಂದ ಅಂದರೆ ಇಂದಿನಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...