BMTC ಬಸ್ನಲ್ಲಿ ಬೆಂಗಳೂರು- ಕನಕಪುರ ನಡುವೆ ಪ್ರಯಾಣಿಸುವ ಸಾರ್ವಜನಿಕರಿಂದ ಟೋಲ್ ಶುಲ್ಕ ₹5 ಸಂಗ್ರಹ: ಸಿಟಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ-948ರ ಬೆಂಗಳೂರು-ಕನಕಪುರ ರಸ್ತೆಯಲ್ಲಿನ ಪ್ರಯಾಣಿಸುವ ಸಾರ್ವಜನಿಕರು ಹೆಚ್ಚುವರಿಯಾಗಿ ಗೆ ಟೋಲ್ ಶುಲ್ಕ 5ರೂಪಾಯಿಯನ್ನು ಪಾವತಿಸಬೇಕು.
ಈ ಸಂಬಂಧ ಮಂಗಳವಾರ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಆದೇಶ ಹೊರಡಿಸಿದ್ದು, ಸೋಮನಹಳ್ಳಿ ಟೋಲ್ ಪ್ಲಾಜಾ ಮಾರ್ಗವಾಗಿ ಕಾರ್ಯಾಚರಣೆಯಾಗುವ ಸಂಸ್ಥೆಯ ಸಾರಿಗೆಗಳಿಗೆ ಟೋಲ್ ಶುಲ್ಕ 5 ರೂಪಾಯಿಯನ್ನು ಪ್ರತಿ ಟಿಕೆಟ್ಗೂ ಹೆಚ್ಚುವರಿಯಾಗಿ ಪಡೆಯುವಂತೆ ನಿರ್ವಾಹಕರಿಗೆ ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ-948 ರ ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸೋಮನಹಳ್ಳಿ ಗೇಟ್ ಹತ್ತಿರ ಹೊಸದಾಗಿ ಟೋಲ್ ಪ್ಲಾಜಾ ನಿರ್ಮಿಸಿದ್ದು, ಈ ರಸ್ತೆ ಮಾರ್ಗವಾಗಿ ಕಾರ್ಯಾಚರಣೆಯಾಗುವ ವಾಹನಗಳಿಗೆ ಇದೇ ಮೇ 9 ರಿಂದ ಜಾರಿಗೆ ಬರುವಂತೆ ಟೋಲ್ ಶುಲ್ಕವನ್ನು ಹಾಕಲಾಗುತ್ತಿದೆ.
ಅದರಂತೆ ಈ ಟೋಲ್ ಮಾರ್ಗವಾಗಿ ಸಂಸ್ಥೆಯ ಸಾರಿಗೆಗಳಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ಪಾಸು ಪ್ರಯಾಣಿಕರಿಗೂ ಸೇರಿದಂತೆ (ವಿಶೇಷಚೇತನ ಪಾಸು ಹಾಗೂ ವಿದ್ಯಾರ್ಥಿ ರಿಯಾಯಿತಿ ಪಾಸುದಾರರನ್ನು ಮಾತ್ರ ಹೊರತುಪಡಿಸಿ) 5ರೂಪಾಯಿ ಟೋಲ್ ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಜಿಲ್ಲೆಯೊಳಗೆ ನೋಂದಣಿ ಆಗಿರುವ ವಾಣಿಜ್ಯ ವಾಹನಗಳಿಗೆ ಪ್ರತಿ ಏಕಮುಖ ಸುತ್ತುವಳಿಗೆ 145 ರೂ.ಗಳನ್ನು ಪಾವತಿಸಬೇಕು. ಹೀಗಾಗಿ ಪ್ರತಿ ಪ್ರಯಾಣಿಕರಿಂದ 5 ರೂ. ಪಡೆಯಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಇನ್ನು ಹಿರಿಯ/ ಘಟಕ ವ್ಯವಸ್ಥಾಪಕರು FASTag ಅಳವಡಿಸಿದ ವಾಹನಗಳನ್ನು ಮಾತ್ರ ಟೋಲ್ ಮಾರ್ಗವಾಗಿ ಕಾರ್ಯಾಚರಣೆಗೊಳಿಸಲು ಹಾಗೂ ಟೋಲ್ ಶುಲ್ಕವನ್ನು FASTag ಮೂಲಕವೇ ಪಾವತಿಸಲು ಕ್ರಮ ವಹಿಸಬೇಕು. ಟೋಲ್ ಮಾರ್ಗವಾಗಿ ಆಚರಣೆಗೊಳಿಸುವ ಎಲ್ಲ ಸಾರಿಗೆಗಳಿಗೆ ಸಂಬಂಧಿಸಿದಂತೆ ದಿನನಿತ್ಯ ಟೋಲ್ ಶುಲ್ಕ ಸಂದಾಯ ಮಾಡುವ ಬಗ್ಗೆ ಪರಿಶೀಲಿಸಿ, ಲಾಭದಾಯಕವಾಗಿದ್ದಲ್ಲಿ ಕಡ್ಡಾಯವಾಗಿ ದೈನಂದಿನ/ ಮಾಸಿಕ ಪಾಸುಗಳನ್ನು ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ಟೋಲ್ ಮಾರ್ಗವಾಗಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ, ಪಾಸು ಪ್ರಯಾಣಿಕರು ಸೇರಿದಂತೆ (ವಿಶೇಷಚೇತನ ಪಾಸು ಹಾಗೂ ವಿದ್ಯಾರ್ಥಿ ರಿಯಾಯಿತಿ ಪಾಸುದಾರರನ್ನು ಮಾತ್ರ ಹೊರತುಪಡಿಸಿ) ಪ್ರಯಾಣ ದರದ ಜತೆಗೆ 5 ರೂ. ಟೋಲ್ ಶುಲ್ಕವನ್ನು ಪಡೆಯಬೇಕು. ವಿದ್ಯಾರ್ಥಿ ರಿಯಾಯಿತಿ ಪಾಸು ಹಾಗೂ ವಿಶೇಷಚೇತನರ ಪಾಸುದಾರರನ್ನು ಹೊರತುಪಡಿಸಿ ಉಳಿದೆಲ್ಲ ಪಾಸುದಾರರಿಗೆ ಈ ಟೋಲ್ ಶುಲ್ಕ ಅನ್ವಯಿಸಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಈ ಟೋಲ್ ಮಾರ್ಗವಾಗಿ ಆಚರಣೆಯಾಗುವ ಎಲ್ಲ ಮಾರ್ಗದ ಅನುಸೂಚಿಗಳಲ್ಲಿನ ವಿದ್ಯುನ್ಮಾನ ಯಂತ್ರಗಳ ತಂತ್ರಾಂಶದಲ್ಲಿ ಪ್ರಯಾಣಿಕರ ಚೀಟಿ ಹಾಗೂ ಟೋಲ್ ಶುಲ್ಕ ಅಳವಡಿಸಲು ಮುಖ್ಯ ಗಣಕ ವ್ಯವಸ್ಥಾಪಕರವರು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸುತ್ತೋಲೆಯು ಮೇ 21ರಿಂದ ಅಂದರೆ ಇಂದಿನಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...