ಮೈಸೂರು: ರಾಜ್ಯದ ಜನರಿಗೆ ಹಲವಾರು ರೀತಿಯಲ್ಲಿ ತೆರಿಗೆ ಹೊರೆ ಹೇರುತ್ತಿರುವ ನಡುವೆಯೇ ಇಂದಿನಿಂದ ವಾಹನ ಸವಾರರಿಗೆ ಟೋಲ್ ದರ ಏರಿಕೆ ಬಿಸಿ ಕೂಡಾ ತಟ್ಟಲಿದೆ. ಹೌದು! ಶೇ. 5ರಷ್ಟು ಟೋಲ್ ದರ ಏರಿಕೆಯಾಗಿದ್ದು, ರಾಜ್ಯದ ಜನರ ಮೇಲೆ ಮತ್ತೊಂದಷ್ಟು ವಸೂಲಿಗೆ ಇಳಿದಿವೆ ಸರ್ಕಾರಗಳು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (NHAI) ವಾರ್ಷಿಕ ಟೋಲ್ ದರ ಏರಿಕೆಯು ಇಂದಿನಿಂದ (ಏ.1) ಅನ್ವಯವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲೂ ಪರಿಷ್ಕೃತ ದರ ಜಾರಿ ಆಗಿದೆ. ಬೆಂಗಳೂರಿನಿಂದ ನಿಢಗಟ್ಟದವರೆಗಿನ 56ಕಿ.ಮೀಗೆ ಶೇ.5ರಷ್ಟು ಟೋಲ್ ದರ ಏರಿಕೆಯಾಗಿದ್ದು, ಬಿಡದಿ ಸಮೀಪದ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್ನಲ್ಲೂ ದರ ಏರಿಕೆ ಮಾಡಲಾಗಿದೆ.
ಕಾರು/ಜೀಪು: ಏಕಮುಖ ಸಂಚಾರದ ಹೊಸ ದರ 180 ರೂ. ಆಗಿದ್ದು, ಹಳೆ ದರ 170 ರೂ. ಇತ್ತು. ಇದೀಗ 10 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 270 ರೂ. ಆಗಿದ್ದು, ಹಳೆ ದರ 255 ರೂ. ಇತ್ತು. 15 ರೂ. ಹೆಚ್ಚಿಸಲಾಗಿದೆ.
ಲಘು ವಾಣಿಜ್ಯ ವಾಹನ: ಏಕಮುಖ ಸಂಚಾರ ಹೊಸ ದರ 290 ರೂ. ಆಗಿದ್ದು, ಹಳೆ ದರ 275 ರೂ. ಇತ್ತು. 15 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 430 ರೂ. ಆಗಿದ್ದು, ಹಳೆ ದರ 415 ರೂ. ಇತ್ತು. ಇದೀಗ 15 ರೂ. ಹೆಚ್ಚಿಸಲಾಗಿದೆ.
ಬಸ್/ಟ್ರಕ್: ಏಕಮುಖ ಸಂಚಾರ ಹೊಸ ದರ 605 ರೂ. ಆಗಿದ್ದು, ಹಳೆ ದರ 580 ರೂ. ಇತ್ತು. 25 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 905 ರೂ. ಆಗಿದ್ದು, ಹಳೆ ದರ 870 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ.
ಮೂರು ಆಕ್ಸಲ್ ವಾಣಿಜ್ಯ ವಾಹನ: ಏಕಮುಖ ಸಂಚಾರದ ಹೊಸ ದರ 660 ರೂ. ಆಗಿದ್ದು, ಹಳೆ ದರ 635 ರೂ. ಇತ್ತು. ಇದೀಗ 25 ರೂ. ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರದ ಹೊಸ ದರ 990 ರೂ. ಆಗಿದ್ದು, ಹಳೆ ದರ 950 ರೂ. ಇತ್ತು. ಇದೀಗ 40 ರೂ. ಹೆಚ್ಚಳವಾಗಿದೆ.
ಮಲ್ಟಿ ಆಕ್ಸಲ್ ವೆಹಿಕಲ್ಸ್(4-6 ಆಕ್ಸಲ್): ಏಕಮುಖ ಸಂಚಾರದ ಹೊಸ ದರ 945 ರೂ. ಆಗಿದ್ದು, ಹಳೆ ದರ 910 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,420 ರೂ. ಆಗಿದ್ದು, ಹಳೆ ದರ 1,365 ಇತ್ತು. ಇದೀಗ 55 ರೂ. ಹೆಚ್ಚಿಸಲಾಗಿದೆ.
ಭಾರಿ ವಾಹನಗಳು (7 ಆಕ್ಸೆಲ್ ಅಥವಾ ಅಧಿಕ): ಏಕಮುಖ ಸಂಚಾರದ ಹೊಸ ದರ 1,155 ರೂ. ಆಗಿದ್ದು, ಹಳೆ ದರ 1,110 ಇತ್ತು. 55 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,730 ರೂ. ಆಗಿದ್ದು, ಹಳೆ ದರ 1,660 ರೂ. ಇತ್ತು. ಇದೀಗ 100 ರೂ. ಹೆಚ್ಚಿಸಲಾಗಿದೆ.
ಒಟ್ಟಾರೆ ಇತ್ತ ರಾಜ್ಯ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದರೆ ಅತ್ತ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನರಲ್ಲಿ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಕೆಲಸದಲ್ಲಿ ಮುಂದುವರಿಯೂತ್ತಲೇ ಇದೆ. ಇದು ಕೆಳ ಮಧ್ಯಮ ವರ್ಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...