ಮೈಸೂರು: ರಾಜ್ಯದ ಜನರಿಗೆ ಹಲವಾರು ರೀತಿಯಲ್ಲಿ ತೆರಿಗೆ ಹೊರೆ ಹೇರುತ್ತಿರುವ ನಡುವೆಯೇ ಇಂದಿನಿಂದ ವಾಹನ ಸವಾರರಿಗೆ ಟೋಲ್ ದರ ಏರಿಕೆ ಬಿಸಿ ಕೂಡಾ ತಟ್ಟಲಿದೆ. ಹೌದು! ಶೇ. 5ರಷ್ಟು ಟೋಲ್ ದರ ಏರಿಕೆಯಾಗಿದ್ದು, ರಾಜ್ಯದ ಜನರ ಮೇಲೆ ಮತ್ತೊಂದಷ್ಟು ವಸೂಲಿಗೆ ಇಳಿದಿವೆ ಸರ್ಕಾರಗಳು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (NHAI) ವಾರ್ಷಿಕ ಟೋಲ್ ದರ ಏರಿಕೆಯು ಇಂದಿನಿಂದ (ಏ.1) ಅನ್ವಯವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲೂ ಪರಿಷ್ಕೃತ ದರ ಜಾರಿ ಆಗಿದೆ. ಬೆಂಗಳೂರಿನಿಂದ ನಿಢಗಟ್ಟದವರೆಗಿನ 56ಕಿ.ಮೀಗೆ ಶೇ.5ರಷ್ಟು ಟೋಲ್ ದರ ಏರಿಕೆಯಾಗಿದ್ದು, ಬಿಡದಿ ಸಮೀಪದ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್ನಲ್ಲೂ ದರ ಏರಿಕೆ ಮಾಡಲಾಗಿದೆ.
ಕಾರು/ಜೀಪು: ಏಕಮುಖ ಸಂಚಾರದ ಹೊಸ ದರ 180 ರೂ. ಆಗಿದ್ದು, ಹಳೆ ದರ 170 ರೂ. ಇತ್ತು. ಇದೀಗ 10 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 270 ರೂ. ಆಗಿದ್ದು, ಹಳೆ ದರ 255 ರೂ. ಇತ್ತು. 15 ರೂ. ಹೆಚ್ಚಿಸಲಾಗಿದೆ.
ಲಘು ವಾಣಿಜ್ಯ ವಾಹನ: ಏಕಮುಖ ಸಂಚಾರ ಹೊಸ ದರ 290 ರೂ. ಆಗಿದ್ದು, ಹಳೆ ದರ 275 ರೂ. ಇತ್ತು. 15 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 430 ರೂ. ಆಗಿದ್ದು, ಹಳೆ ದರ 415 ರೂ. ಇತ್ತು. ಇದೀಗ 15 ರೂ. ಹೆಚ್ಚಿಸಲಾಗಿದೆ.
ಬಸ್/ಟ್ರಕ್: ಏಕಮುಖ ಸಂಚಾರ ಹೊಸ ದರ 605 ರೂ. ಆಗಿದ್ದು, ಹಳೆ ದರ 580 ರೂ. ಇತ್ತು. 25 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 905 ರೂ. ಆಗಿದ್ದು, ಹಳೆ ದರ 870 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ.
ಮೂರು ಆಕ್ಸಲ್ ವಾಣಿಜ್ಯ ವಾಹನ: ಏಕಮುಖ ಸಂಚಾರದ ಹೊಸ ದರ 660 ರೂ. ಆಗಿದ್ದು, ಹಳೆ ದರ 635 ರೂ. ಇತ್ತು. ಇದೀಗ 25 ರೂ. ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರದ ಹೊಸ ದರ 990 ರೂ. ಆಗಿದ್ದು, ಹಳೆ ದರ 950 ರೂ. ಇತ್ತು. ಇದೀಗ 40 ರೂ. ಹೆಚ್ಚಳವಾಗಿದೆ.
ಮಲ್ಟಿ ಆಕ್ಸಲ್ ವೆಹಿಕಲ್ಸ್(4-6 ಆಕ್ಸಲ್): ಏಕಮುಖ ಸಂಚಾರದ ಹೊಸ ದರ 945 ರೂ. ಆಗಿದ್ದು, ಹಳೆ ದರ 910 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,420 ರೂ. ಆಗಿದ್ದು, ಹಳೆ ದರ 1,365 ಇತ್ತು. ಇದೀಗ 55 ರೂ. ಹೆಚ್ಚಿಸಲಾಗಿದೆ.
ಭಾರಿ ವಾಹನಗಳು (7 ಆಕ್ಸೆಲ್ ಅಥವಾ ಅಧಿಕ): ಏಕಮುಖ ಸಂಚಾರದ ಹೊಸ ದರ 1,155 ರೂ. ಆಗಿದ್ದು, ಹಳೆ ದರ 1,110 ಇತ್ತು. 55 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,730 ರೂ. ಆಗಿದ್ದು, ಹಳೆ ದರ 1,660 ರೂ. ಇತ್ತು. ಇದೀಗ 100 ರೂ. ಹೆಚ್ಚಿಸಲಾಗಿದೆ.
ಒಟ್ಟಾರೆ ಇತ್ತ ರಾಜ್ಯ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದರೆ ಅತ್ತ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನರಲ್ಲಿ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಕೆಲಸದಲ್ಲಿ ಮುಂದುವರಿಯೂತ್ತಲೇ ಇದೆ. ಇದು ಕೆಳ ಮಧ್ಯಮ ವರ್ಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...