NEWSದೇಶ-ವಿದೇಶನಮ್ಮರಾಜ್ಯ

ಕಾರಿಗೆ  170 ಇದ್ದ ಟೋಲ್ ದರ 180 ರೂ.ಗೆ ಏರಿಕೆ – ಸವಾರರು ಕಂಗಾಲು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯದ ಜನರಿಗೆ ಹಲವಾರು ರೀತಿಯಲ್ಲಿ ತೆರಿಗೆ ಹೊರೆ ಹೇರುತ್ತಿರುವ ನಡುವೆಯೇ ಇಂದಿನಿಂದ ವಾಹನ ಸವಾರರಿಗೆ ಟೋಲ್ ದರ ಏರಿಕೆ ಬಿಸಿ ಕೂಡಾ ತಟ್ಟಲಿದೆ. ಹೌದು! ಶೇ. 5ರಷ್ಟು ಟೋಲ್ ದರ ಏರಿಕೆಯಾಗಿದ್ದು, ರಾಜ್ಯದ ಜನರ ಮೇಲೆ ಮತ್ತೊಂದಷ್ಟು ವಸೂಲಿಗೆ ಇಳಿದಿವೆ ಸರ್ಕಾರಗಳು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (NHAI) ವಾರ್ಷಿಕ ಟೋಲ್ ದರ ಏರಿಕೆಯು ಇಂದಿನಿಂದ (ಏ.1) ಅನ್ವಯವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲೂ ಪರಿಷ್ಕೃತ ದರ ಜಾರಿ ಆಗಿದೆ. ಬೆಂಗಳೂರಿನಿಂದ ನಿಢಗಟ್ಟದವರೆಗಿನ 56ಕಿ.ಮೀಗೆ ಶೇ.5ರಷ್ಟು ಟೋಲ್ ದರ ಏರಿಕೆಯಾಗಿದ್ದು, ಬಿಡದಿ ಸಮೀಪದ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್‌ನಲ್ಲೂ ದರ ಏರಿಕೆ ಮಾಡಲಾಗಿದೆ.

ಕಾರು/ಜೀಪು: ಏಕಮುಖ ಸಂಚಾರದ ಹೊಸ ದರ 180 ರೂ. ಆಗಿದ್ದು, ಹಳೆ ದರ 170 ರೂ. ಇತ್ತು. ಇದೀಗ 10 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 270 ರೂ. ಆಗಿದ್ದು, ಹಳೆ ದರ 255 ರೂ. ಇತ್ತು. 15 ರೂ. ಹೆಚ್ಚಿಸಲಾಗಿದೆ.

ಲಘು ವಾಣಿಜ್ಯ ವಾಹನ: ಏಕಮುಖ ಸಂಚಾರ ಹೊಸ ದರ 290 ರೂ. ಆಗಿದ್ದು, ಹಳೆ ದರ 275 ರೂ. ಇತ್ತು. 15 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 430 ರೂ. ಆಗಿದ್ದು, ಹಳೆ ದರ 415 ರೂ. ಇತ್ತು. ಇದೀಗ 15 ರೂ. ಹೆಚ್ಚಿಸಲಾಗಿದೆ.

ಬಸ್/ಟ್ರಕ್: ಏಕಮುಖ ಸಂಚಾರ ಹೊಸ ದರ 605 ರೂ. ಆಗಿದ್ದು, ಹಳೆ ದರ 580 ರೂ. ಇತ್ತು. 25 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 905 ರೂ. ಆಗಿದ್ದು, ಹಳೆ ದರ 870 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ.

ಮೂರು ಆಕ್ಸಲ್ ವಾಣಿಜ್ಯ ವಾಹನ: ಏಕಮುಖ ಸಂಚಾರದ ಹೊಸ ದರ 660 ರೂ. ಆಗಿದ್ದು, ಹಳೆ ದರ 635 ರೂ. ಇತ್ತು. ಇದೀಗ 25 ರೂ. ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರದ ಹೊಸ ದರ 990 ರೂ. ಆಗಿದ್ದು, ಹಳೆ ದರ 950 ರೂ. ಇತ್ತು. ಇದೀಗ 40 ರೂ. ಹೆಚ್ಚಳವಾಗಿದೆ.

ಮಲ್ಟಿ ಆಕ್ಸಲ್ ವೆಹಿಕಲ್ಸ್(4-6 ಆಕ್ಸಲ್): ಏಕಮುಖ ಸಂಚಾರದ ಹೊಸ ದರ 945 ರೂ. ಆಗಿದ್ದು, ಹಳೆ ದರ 910 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,420 ರೂ. ಆಗಿದ್ದು, ಹಳೆ ದರ 1,365 ಇತ್ತು. ಇದೀಗ 55 ರೂ. ಹೆಚ್ಚಿಸಲಾಗಿದೆ.

ಭಾರಿ ವಾಹನಗಳು (7 ಆಕ್ಸೆಲ್ ಅಥವಾ ಅಧಿಕ): ಏಕಮುಖ ಸಂಚಾರದ ಹೊಸ ದರ 1,155 ರೂ. ಆಗಿದ್ದು, ಹಳೆ ದರ 1,110 ಇತ್ತು. 55 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,730 ರೂ. ಆಗಿದ್ದು, ಹಳೆ ದರ 1,660 ರೂ. ಇತ್ತು. ಇದೀಗ 100 ರೂ. ಹೆಚ್ಚಿಸಲಾಗಿದೆ.

ಒಟ್ಟಾರೆ ಇತ್ತ ರಾಜ್ಯ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೇರುತ್ತಿದ್ದರೆ ಅತ್ತ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನರಲ್ಲಿ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಕೆಲಸದಲ್ಲಿ ಮುಂದುವರಿಯೂತ್ತಲೇ ಇದೆ. ಇದು ಕೆಳ ಮಧ್ಯಮ ವರ್ಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ.

Deva
the authorDeva

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ