ಹೊನ್ನಾವರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಅಲ್ಲದೆ ಬಸ್ನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಉಪ್ಪೋಣಿಯಲ್ಲಿ ನಡೆದಿದೆ.
NWKRTC ಬಸ್ ಹಾಗೂ ಸ್ಕಾರ್ಪಿಯೋ ನಡುವೆ ಈ ಭೀಕರ ಅಪಘಾತ ಸಂಭವಿಸಿರುವುದು. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಹಾಗೂ ಸಾಗರ ಕಡೆಯಿಂದ ಹೊನ್ನಾವರ ಬರುತ್ತಿದ್ದ ಸ್ಕಾರ್ಪಿಯೋ ವಾಹನ ನಡುವೆ ಅವಘಡ ನಡೆದಿದೆ.
ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದ ಹೆದ್ದಾರಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಮೃತಪಡುತ್ತಿರುವವರ ಸಂಖ್ಯೆ ಏರಿಕೆಯ ಹಾದಿಯಲ್ಲೇ ಸಾಗುತ್ತಿದೆ. ಇದು ರಾಜ್ಯದ ಹೆದ್ದಾರಿಗಳಲ್ಲಿ ವಾಹನವನ್ನು ಓಡಿಸುವುದು ಹೇಗೆ ಎಂಬ ಭಯ ಕೂಡ ಹಲವರನ್ನು ಕಾಡುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು. ಅಪಘಾತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕನಕಪುರ ತಾಲೂಕಿನ ಸಂಗಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಕೋಡಿಹಳ್ಳಿ ಬಳಿಯ ಹಲಸೂರು ಬಳಿ ನಡೆಯುತ್ತಿದ್ದ ಕ್ರಿಶ್ಚಿಯನ್ ಜಾತ್ರೆಗೆ ಬಂದಿದ್ದ ಬೆಂಗಳೂರು ಮೂಲದ 50 ಪ್ರವಾಸಿಗರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು. 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಘಟನ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...