ಹೊನ್ನಾವರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಅಲ್ಲದೆ ಬಸ್ನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಉಪ್ಪೋಣಿಯಲ್ಲಿ ನಡೆದಿದೆ.
NWKRTC ಬಸ್ ಹಾಗೂ ಸ್ಕಾರ್ಪಿಯೋ ನಡುವೆ ಈ ಭೀಕರ ಅಪಘಾತ ಸಂಭವಿಸಿರುವುದು. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಹಾಗೂ ಸಾಗರ ಕಡೆಯಿಂದ ಹೊನ್ನಾವರ ಬರುತ್ತಿದ್ದ ಸ್ಕಾರ್ಪಿಯೋ ವಾಹನ ನಡುವೆ ಅವಘಡ ನಡೆದಿದೆ.
ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದ ಹೆದ್ದಾರಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಮೃತಪಡುತ್ತಿರುವವರ ಸಂಖ್ಯೆ ಏರಿಕೆಯ ಹಾದಿಯಲ್ಲೇ ಸಾಗುತ್ತಿದೆ. ಇದು ರಾಜ್ಯದ ಹೆದ್ದಾರಿಗಳಲ್ಲಿ ವಾಹನವನ್ನು ಓಡಿಸುವುದು ಹೇಗೆ ಎಂಬ ಭಯ ಕೂಡ ಹಲವರನ್ನು ಕಾಡುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು. ಅಪಘಾತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕನಕಪುರ ತಾಲೂಕಿನ ಸಂಗಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಕೋಡಿಹಳ್ಳಿ ಬಳಿಯ ಹಲಸೂರು ಬಳಿ ನಡೆಯುತ್ತಿದ್ದ ಕ್ರಿಶ್ಚಿಯನ್ ಜಾತ್ರೆಗೆ ಬಂದಿದ್ದ ಬೆಂಗಳೂರು ಮೂಲದ 50 ಪ್ರವಾಸಿಗರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು. 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಘಟನ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...