CRIMENEWSನಮ್ಮರಾಜ್ಯ

ಸಾರಿಗೆ ಬಸ್‌ ಕಾರು ನಡುವೆ ಅಪಘಾತ: ಇಬ್ಬರು ಸಾವು ಮೂವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಹೊನ್ನಾವರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಅಲ್ಲದೆ ಬಸ್‌ನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಉಪ್ಪೋಣಿಯಲ್ಲಿ ನಡೆದಿದೆ.

NWKRTC ಬಸ್ ಹಾಗೂ ಸ್ಕಾರ್ಪಿಯೋ ನಡುವೆ ಈ ಭೀಕರ ಅಪಘಾತ ಸಂಭವಿಸಿರುವುದು. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಹಾಗೂ ಸಾಗರ ಕಡೆಯಿಂದ ಹೊನ್ನಾವರ ಬರುತ್ತಿದ್ದ ಸ್ಕಾರ್ಪಿಯೋ ವಾಹನ ನಡುವೆ ಅವಘಡ ನಡೆದಿದೆ.

ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದ ಹೆದ್ದಾರಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಮೃತಪಡುತ್ತಿರುವವರ ಸಂಖ್ಯೆ ಏರಿಕೆಯ ಹಾದಿಯಲ್ಲೇ ಸಾಗುತ್ತಿದೆ. ಇದು ರಾಜ್ಯದ ಹೆದ್ದಾರಿಗಳಲ್ಲಿ ವಾಹನವನ್ನು ಓಡಿಸುವುದು ಹೇಗೆ ಎಂಬ ಭಯ ಕೂಡ ಹಲವರನ್ನು ಕಾಡುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು. ಅಪಘಾತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು  ಗಾಯಗೊಂಡಿದ್ದಾರೆ.

ಕನಕಪುರ ತಾಲೂಕಿನ ಸಂಗಮದ ತಿರುವಿನಲ್ಲಿ  ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಕೋಡಿಹಳ್ಳಿ ಬಳಿಯ ಹಲಸೂರು ಬಳಿ ನಡೆಯುತ್ತಿದ್ದ ಕ್ರಿಶ್ಚಿಯನ್ ಜಾತ್ರೆಗೆ ಬಂದಿದ್ದ ಬೆಂಗಳೂರು ಮೂಲದ 50 ಪ್ರವಾಸಿಗರು ಅಪಘಾತದಲ್ಲಿ  ಗಾಯಗೊಂಡಿದ್ದಾರೆ.

50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು. 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಘಟನ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Deva
the authorDeva

Leave a Reply

error: Content is protected !!