NEWSನಮ್ಮಜಿಲ್ಲೆನಮ್ಮರಾಜ್ಯ

ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್‌ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಖಾಸಗಿ ಬಸ್‌ ಮಾಲೀಕರ ಸಭೆ ಕರೆಯಲಾಗಿದೆ.

ಸಭೆಯನ್ನು ನಾಳೆ (ಆ.2ರಂದು) ಮಧ್ಯಾಹ್ನ 12ಗಂಟೆಗೆ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಈ ಸಭೆಗೆ ಖಾಸಗಿ ಬಸ್‌ ಮಾಲೀಕರು ಹಾಜರಾಗಬೇಕು ಎಂದು ಸೂಚಿಸಿರುವುದಾಗಿ ರಾಜ್ಯ ಸಾರಿಗೆ ಪ್ರಾಧಿಕಾರದ ಅಪರ ಸಾರಿಗೆ ಆಯುಕ್ತರು ಮತ್ತು ಕಾರ್ಯದರ್ಶಿ (ಪ್ರಭಾರ) ತಿಳಿಸಿದ್ದಾರೆ.

ಸಭೆಯಲ್ಲಿ ಖಾಸಗಿ ಬಸ್‌ ಮಾಲೀಕರಾದ ಸದಾನಂದ ಚಾತ್ರಾ, ಕರ್ನಾಟಕ ಸ್ಟೇಟ್ ಟೂರಿಸ್ಟ್ ಬಸ್ ಅಪರೇಟರ್ ಅಸೋಸಿಯೇಷನ್, ಬೆಂಗಳೂರು.

ಕುಯಿಲಾಡಿ ಸುರೇಶ್ ನಾಯಕ್, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಜಲು ವಾಹನ ಬಸ್ ಮಾಲೀಕರ ಸಂಘಗಳ ಒಕ್ಕೂಟ, ಬೆಂಗಳೂರು.

ರಾಜವರ್ಮ ಬಲ್ಲಾಳ, ಅಧ್ಯಕ್ಷರು, ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘ, ಜಯರಾಜ್ ಬಳ್ಳಾಲ ಮೋಟರ್ಸ್ ಅಂಗಡಿ ನಂ. 03, ಮಂಗಳೂರು ಸಿಟಿ ಕಾರ್ಪೋರೇಷನ್ ಕಾಂಪ್ಲೆಕ್ಸ್, ಕದರಿ, ಮಂಗಳೂರು ಇವರು  ಸೇರಿದಂತೆ ವಿವಿಧ 20 ಖಾಸಗಿ ಬಸ್‌ ಮಾಲೀಕರು ಹಾಜರಾಗಲು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬಿಡದಿ ಟೌನ್ ಶಿಪ್‌: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್