NEWSನಮ್ಮರಾಜ್ಯ

ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಸೌಲಭ್ಯ ಜಾರಿಗೆ ಮುಂದಾದ ಸಾರಿಗೆ ಇಲಾಖೆ

ಒಂದೇ ಸ್ಮಾರ್ಟ್ ಕಾರ್ಡ್ ರೀ-ಚಾರ್ಜ್ ಮಾಡಿಕೊಂಡರೆ ಸಾಕು, ಮೆಟ್ರೋ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೈಪ್ ಮಾಡಿ ಪ್ರಯಾಣಿಸಬಹುದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರ ಸಾರಿಗೆ ವ್ಯವಸ್ಥೆ ಜನರ ಜೀವನಾಡಿಯಾಗಿದೆ. ತಮ್ಮ ತಮ್ಮ ಕೆಲಸಕ್ಕೆ ತೆರಳಲು ನಿತ್ಯ ಲಕ್ಷಾಂತರ ಪ್ರಯಾಣಿಕರು ಮೆಟ್ರೋ ಹಾಗೂ ಬಿಎಂಟಿಸಿ ಬಸ್​​ಗಳ ಮೂಲಕ ಪ್ರಯಾಣ ಮಾಡುತ್ತಾರೆ.

ಸಾರಿಗೆ ವ್ಯವಸ್ಥೆ ಒಂದು ದಿನ ಬಂದ್ ಆದರೂ ಸಾಮಾನ್ಯ ಜನರಿಗೆ ಕಷ್ಟ ಕಷ್ಟವೇ ಆಗುತ್ತೆ. ಇನ್ನೂ ನಮ್ಮ ಮೆಟ್ರೋ ಬಂದ ಬಳಿಕ ಮೆಟ್ರೋ ಹಾಗೂ ಬಿಎಂಟಿಸಿ ಎರಡನ್ನೂ ಬಳಸುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೂತನ ಸೌಲಭ್ಯ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.

ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ತರಲು ಇಲಾಖೆ ಮುಂದಾಗಿದೆ. ನಗರದಲ್ಲಿ ನಿತ್ಯ ಜನರು ಮೆಟ್ರೋಗಳ ಸಂಪರ್ಕ ಇರುವ ಕಡೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿ ಬಳಿಕ ಬಿಎಂಟಿಸಿ ಬಸ್​​ ಮೂಲಕ ತಾವು ತಲುಪಬೇಕಿದ್ದ ಸ್ಥಳಕ್ಕೆ ಹೋಗ್ತಾರೆ. ಹೀಗೆ ಎರಡೂ ಸಾರಿಗೆಗಳನ್ನ ಬಳಸುವ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಒಂದೇ ಸ್ಮಾರ್ಟ್​ ಕಾರ್ಡ್​ ಜಾರಿಗೆ ಸಾರಿಗೆ ಇಲಾಖೆ ಮುಂದಾಗಿದೆ.

ಬಿಎಂಟಿಸಿ ಮತ್ತು ಮೆಟ್ರೋ ಎರಡಕ್ಕೂ ಒಂದೇ ಸ್ಮಾರ್ಟ್ ಕಾರ್ಡ್ ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಬಿಎಂಟಿಸಿ, ಮೆಟ್ರೋದಲ್ಲಿ ಪ್ರಯಾಣಿಸುವವರು ಎರಡೆರಡು ಕಾರ್ಡ್‌ ಬಳಸಬೇಕಿಲ್ಲ. ಎರಡಕ್ಕೂ ಒಂದೇ ‘ಸ್ಮಾರ್ಟ್ ಕಾರ್ಡ್’ ಬಳಸುವಂತಹ ಸೌಲಭ್ಯ ಶೀಘ್ರದಲೆ ಜಾರಿಗೆ ಬರಲಿದೆ.

ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲ: ಪ್ರಯಾಣಿಕರು ಒಂದೇ ಸ್ಮಾರ್ಟ್ ಕಾರ್ಡ್ ರೀ-ಚಾರ್ಜ್ ಮಾಡಿಕೊಂಡರೆ ಸಾಕು, ಅದನ್ನೇ ಮೆಟ್ರೋ ನಿಲ್ದಾಣಗಳಲ್ಲಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೈಪ್ ಮಾಡಿ ಪ್ರಯಾಣಿಸಬಹುದು.

ಈ ನೂತನ ವ್ಯವಸ್ಥೆಯಿಂದ ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಿಎಂಟಿಸಿ ಈಗಾಗಲೇ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಲು ಸನ್ನದ್ಧವಾಗಿದ್ದು, ತ್ವರಿತವಾಗಿ ಎಲ್ಲ ಡಿಪೋಗಳಿಗೆ ಅತ್ಯಾಧುನಿಕ ಟಿಕೆಟ್ ಮಿಷನ್‌ಗಳನ್ನು ವಿತರಣೆ ಮಾಡಲಾಗಿದೆ.

ಈ ಮಿಷನ್‌ಗಳ ಮೂಲಕ ಸ್ಮಾರ್ಟ್ ಕಾರ್ಡ್‌ ಗಳನ್ನು ಸುಲಭವಾಗಿ ರೀಡ್ ಮಾಡಬಹುದು. ಹೊಸ ಕಾರ್ಡ್‌ ಪಡೆಯಲು ಮತ್ತು ರೀಚಾರ್ಜ್ ಮಾಡಲು ಪ್ರಯಾಣಿಕರಿಗೆ ಅನುಕೂಲಕರವಾಗುವಂತೆ ಕೇಂದ್ರಗಳ ಸ್ಥಾಪನೆ ಮಾಡಲು ಸಾರಿಗೆ ಸಂಸ್ಥೆ ಮುಂದಾಗಿದೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ