- ಔರಾದ ಘಟಕದಲ್ಲಿ ತಪ್ಪಿದ ನಿಯಂತ್ರಣ l ಭ್ರಷ್ಟಾಚಾರಕ್ಕೆ ಬೆಸತ್ತು ಕೆಲಸಕ್ಕೆ ರಾಜೀನಾಮೆ ಕೊಟ್ಟ ನೌಕರ
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೀದರ್ ವಿಭಾಗದ ಔರಾದ ಘಟಕದಲ್ಲಿ ಘಟಕ ವ್ಯವಸ್ಥಾಪಕ ಮತ್ತು ಎಟಿಎಸ್ ಕಿರುಕುಳ ನೀಡುತ್ತಿರುವುದರಿಂದ ಮನನೊಂದ ಚಾಲಕ ಕಂ ನಿರ್ವಾಹಕರೊಬ್ಬರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಔರಾದ ಘಟಕದ ವ್ಯವಸ್ಥಾಪಕ ನಯೀಮ್ ಮತ್ತು ಸಂಚಾರ ಶಾಖೆ ಸಿಬ್ಬಂದಿ ಸಂಚಾರಿ ನಿಯಂತ್ರಕ ಸೂರ್ಯಕಾಂತ ಅವರು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಷಯದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ. ಇದರಿಂದ ಬೇಸತ್ತ ಚಾ ಕಂ ನಿ (1317) ಪ್ರಕಾಶ ಎಂಬುವರು ವ್ಯವಸ್ಥಾಪಕ ನಿರ್ದೇಶಕರಿಗೆ ರಾಜಿನಾಮೇ ಪತ್ರವನ್ನು ಇಂದು (ಸೆ.2) ಸಲ್ಲಿಸಿದ್ದಾರೆ.
ಚಾಕಂನಿ ಪ್ರಕಾಶ್ ಅವರನ್ನು ಘಟಕದ ಅಧಿಕಾರಿ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ ಈ ಚಾಲಕನಿಗೆ ಸರಿಯಾಗಿ ಕರ್ತವ್ಯಕ್ಕೆ ನಿಯೋಜನೆ ಮಾಡದೆ ಅತ್ಯಂತ ಕೆಟ್ಟ ಪದಗಳಿಂದ ಬೈಯ್ದಿದ್ದಾರೆ.
ಮೊನ್ನೆ ತಾನೆ ಅಲ್ಲಿಯ ಡ್ಯೂಟಿ ಕೊಡುವ ಅಧಿಕಾರಿ ಚಲನಾ ಸಿಬ್ಬಂದಿಗೆ ಅವಾಚ್ಯ ಪದಗಳಲ್ಲಿ ಬೈದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ ಹರಿದಾಡಿದೆ. ಈಗ ಕಾರ್ಮಿಕನ ಈ ನಡೆ ಔರಾದನಲ್ಲಿ ಯಾವ ಪರಿಸ್ಥಿತಿ ಇದೆ ಎಂಬುದನ್ನು ಸೂಚಿಸುತ್ತಿದೆ. ಅಧಿಕಾರಿಗಳು ಏಕೆ ಈರೀತಿ ತಾಳ್ಮೆ ಕಳೆದುಕೊಂಡು ನೌಕರರನ್ನು ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂಬುವುದು ಇನ್ನೂ ತಿಳಿಯದಾಗಿದೆ.
ಹೌದು ! ಸಾರಿಗೆ ನೌಕರರು ಪ್ರಮುಖವಾಗಿ ಡಿಪೋಗಳಲ್ಲಿ ಕೊಡುತ್ತಿರುವ ಕಿರುಕುಳ ತಪ್ಪಿಸಬೇಕು ಮತ್ತು ವೇತನ ಹೆಚ್ಚಳ ಮಾಡಬೇಕೆಂದು ಕಳೆದ ಏಪ್ರಿಲ್ನಲ್ಲಿ ಮುಷ್ಕರ ನಡೆಸಿದ್ದರು. ಆದರೆ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸಲಿಲ್ಲ, ಜತೆಗೆ ಕೊರೊನಾದಿಂದ ಅವರ ಮುಷ್ಕರ ವಿಫಲವಾಯಿತು.
ತದ ನಂತದ ಹೈ ಕೋರ್ಟ್ ಅದೇಶದ ಮೇರೆಗೆ ಎಲ್ಲ ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದರು. ಆದರೆ ಇತ್ತ ಸಾರಿಗೆ ಅಧಿಕಾರಿಗಳು ಮುಷ್ಕರದ ವೇಳೆ 8 ಸಾವಿರಕ್ಕೂ ಹೆಚ್ಚು ನೌಕರರ ವಿರುದ್ಧ ಏಕಾಏಕಿ ಯಾವುದೇ ಕಾರಣವಿಲ್ಲದಿದ್ದರೂ ಶಿಸ್ತು ಕ್ರಮದ ಹೆಸರಿನಲ್ಲಿ ವಜಾ, ಅಮಾನತು, ವರ್ಗಾವಣೆಯಂತಹ ಶಿಕ್ಷೆ ಕೊಟ್ಟಿದ್ದಾರೆ.

ಇದು ಸಾಲದು ಎಂಬಂತೆ ಮುಷ್ಕರದ ಬಳಿಕ ಕರ್ತವ್ಯಕ್ಕೆ ಹಾಜರಾಗಿರುವ ಹಲವು ನೌಕರರಿಗೆ ಸರಿಯಾಗಿ ಡ್ಯೂಟಿ ಕೊಡುತ್ತಿಲ್ಲ. ಜತೆಗೆ ತಮಗೆ ಇಷ್ಟ ಬಂದಂತೆ ಕೆಲ ಡಿಪೋಗಳ ವ್ಯವಸ್ಥಾಪಕರು ನಡೆದುಕೊಳ್ಳುತ್ತಿದ್ದು, ನೌಕರರಿಗೆ ಇನ್ನಿಲ್ಲದ ಕಿರುಕುಳಗಳನ್ನು ನೀಡುತ್ತದ್ದಾರೆ. ಇಷ್ಟಾದರೂ ಸಾರಿಗೆ ಸಚಿವರಾಗಲಿ ಅಥವಾ ಉನ್ನತ ಅಧಿಕಾರಿಗಳಾಗಲಿ ನೌಕರರ ಸಮಸ್ಯೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಇದರಿಂದ ಬಹುತೇಕ ಡಿಪೋಗಳಲ್ಲಿ ನೌಕರರಿಗೆ ಏ.6ರ ಹಿಂದೆ ಇದ್ದ ಕಿರುಕುಳಕ್ಕಿಂತಲೂ ಈಗ ಹೆಚ್ಚಾಗಿದ್ದು, ನೌಕರರು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಕೆಲ ಡಿಪೋಗಳಲ್ಲಿ ಕೊಡುತ್ತಿರುವ ಕಿರುಕುಳಕ್ಕೆ ನೌಕರರ ಮನನೊಂದು ತಮ್ಮ ವೃತ್ತಿಗೆ ರಾಜೀನಾಮೆ ಕೊಡುತ್ತಿದ್ದಾರೆ.
ಅದೇ ರೀತಿ ರಾಂನಗರ ಜಿಲ್ಲೆಯ ಚನ್ನಪಟ್ಟದ ಡಿಪೋ ವ್ಯವಸ್ಥಾಪಕರು ನಿರ್ವಾಹಕರೊಬ್ಬರಿಗೆ ಅವಾಚ್ಯವಾಗಿ ಬೈದಿರುವ ಆಡಿಯೋ ಕೂಡ ತುಂಬಾ ಸದ್ದು ಮಾಡಿದೆ. ಆದರೆ ಈವರೆಗೂ ಆ ಅಧಿಕಾರಿಯ ವಿರುದ್ಧವೂ ಯಾವುದೇ ಕ್ರಮ ಜರುಗಿಸಿಲ್ಲ.
ನಿತ್ಯ ಇದೇ ರೀತಿ ಡಿಪೋಗಳಲ್ಲಿ ನೌಕರರಿಗೆ ಕಿರುಕುಳ ಹೆಚ್ಚಾಗುತ್ತಿದ್ದರೆ ಎಲ್ಲ ನೂಕರರು ಡಿಪೋಗಳಲ್ಲೇ ಕುಟುಂಬ ಸಹಿತವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅಲ್ಲದೇ ವಜಾಗೊಂಡಿರುವ ಎಲ್ಲ ನೌಕರರು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಯಾಮರಣ ಕೋರಿ ಪತ್ರಬರೆದಿದ್ದು, ಎಲ್ಲ ನೌಕರರ ಸಹಿ ಪಡೆಯುವ ನಿಟ್ಟಿನಲ್ಲಿ ಸದ್ದಿಲ್ಲದೆ ಅಭಿಯಾನ ಆರಂಭಿಸಿದ್ದಾರೆ.
ಡಿಪೋಗಳಲ್ಲಿ ಅನಾಹುತಗಳು ಅಂದರೆ ನೌಕರರ ಕುಟುಂಬಗಳು ಸಾಮೂಹಿಕವಾಗಿ ಜೀವ ಕಳೆದುಕೊಳ್ಳಲು ಮುಂದಾಗುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲ ಉದಾಸೀನತೆ ತೋರಿದರೆ ಮುಂದೆ ನಡೆಯುವ ಅನಾಹುತಗಳ ಹೊಣೆಯನ್ನು ನೀವೆ ಹೊರಬೇಕಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ.
Related


You Might Also Like
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...
ಜಿಬಿಎ: ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಐದು ನಗರ ಪಾಲಿಕೆಗಳ ಆಯುಕ್ತರು
ಬೆಂಗಳೂರು: ಐದು ನಗರ ಪಾಲಿಕೆಗಳ ಆಯುಕ್ತರಿಂದ ಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಇತ್ತ ಕೇಂದ್ರ ನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಭೆ...