ಬೆಂಗಳೂರು: ಸಾರಿಗೆ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸಂಕ್ರಾಂತಿ ಬಳಿಕ ಸಾರಿಗೆ ಸಂಘಟನೆಗಳ ಸಭೆ ಕರೆಯುತ್ತೇವೆ ಎಂದು ಹೇಳಿ ಈವರೆಗೂ ಸಭೆ ಕರೆಯದಿರುವುದಕ್ಕೆ ಆಕ್ರೋಶಗೊಂಡಿರುವ ಜಂಟಿ ಕ್ರಿಯಾ ಸಮಿತಿ ಇದೇ ಏ.15ರಿಂದ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಕ್ಕೆ ಮುಂದಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಕಳೆದ 2024ರ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡ ಅವರು ಮನವಿ ಮಾಡಿದ್ದರಿಂದ ಜಂಟಿ ಕ್ರಿಯಾ ಸಮಿತಿ ಅಂದು ಧರಣಿಯನ್ನು ಮುಂದೂಡಿತ್ತು.
ಆ ಬಳಿಕ ಅಂದರೆ ಸಂಕ್ರಾಂತಿ ಮುಗಿದ ಕೂಡಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಂಘಟನೆಗಳ ಸಭೆ ಕರೆದು 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಸಂಬಂಧ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಸಚಿವರು ಮನವಿ ಮಾಡಿದ್ದರು.
ಹೀಗಾಗಿ ಜಂಟಿ ಕ್ರಿಯಾ ಸಮಿತಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಡಿ.29ರಂದು ಹೇಳಿಕೆ ನೀಡಿತ್ತು. ಆ ಬಳಿಕ ಅಂದರೆ ಜನವರಿ 15ರ ಬಳಿಕ ಸಭೆ ಕರೆಯುತ್ತೇವೆ ಎಂದು ಹೇಳಿದ ಸರ್ಕಾರ ಅಥವಾ ಸಚಿವರು ಈವರೆಗೂ ಸಂಘಟನೆಗಳ ಸಭೆ ಕರೆದಿಲ್ಲ ಆದ್ದರಿಂದ ಮತ್ತೆ ಮುಷ್ಕರ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
ಇನ್ನು ಇದೇ ಏ.15ರಿಂದ ಮುಖ್ಯಮಂತ್ರಿ ಮನೆಮುಂದೆ ಧರಣಿ ಕೂರುವುದಾಗಿತಿಳಿಸಿದ್ದು, ನಾವು ಈವರೆಗೂ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ಕರೆಯುತ್ತಾರೆ ಎಂದು ಕಾದು ನೋಡಿದ್ದೇವೆ. ಅದರಂತೆ ಏ.5ರಂದು ಸಭೆಯನ್ನು ನಿಗದಿ ಮಾಡಿದ್ದರು ಆದರೆ, ಆ ಸಭೆಯನ್ನು ಮುಂದೂಡಿದ್ದು 7ದಿನಗಳು ಕಳೆದರೂ ಈವರೆಗೂ ಯಾವುದೆ ಮಾಹಿತಿ ಇಲ್ಲ.
ಹೀಗಾಗಿ ನಾವು ಇದೇ ಏ.15ರಿಂದ ಸಿಎಂ ಮನೆ ಮುಂದೆ ಧರಣಿ ಕೂರುತ್ತೇವೆ ಎಂದು ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಆದರಿಂದ ಏ.15ರಂದು ಸಾರಿಗೆ ಬಸ್ ವ್ಯತ್ಯಯವಾಗುವ ಸಂಭವ ಹೆಚ್ಚಿದೆ ಎಂದು ಹೇಳಲಾಗುತ್ತಿದ್ದು, ಸರ್ಕಾರಿ ಬಸ್ಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕರು ಈ ಬಗ್ಗೆ ಸ್ವಲ್ಪ ಎಚ್ಚರ ವಹಿಸುವುದು ಸೂಕ್ತ.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...