NEWSಲೇಖನಗಳು

ಸಿಎಂ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಸಾರಿಗೆ ನೌಕರರಿಗೆ ನಿರಾಸೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರು ಶುಕ್ರವಾರ ಮಂಡಿಸಿದ ಮುಖ್ಯಮಂತ್ರಿಗಳ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವು ಈಡೇರಲೇ ಇಲ್ಲ. ಹೀಗಾಗಿ ಸಾರಿಗೆ ನೌಕರರು ಭಾರಿ ನಿರಾಸೆಗೊಂಡಿದ್ದಾರೆ.

ಪ್ರಸ್ತುತ ಸರ್ಕಾರ ಹಾಗೂ ಸಾರಿಗೆ ನೌಕರರ ಪರಿಸ್ಥಿತಿ ನಾ ಕೊಡೆ, ನೀ ಬಿಡೇ ಎನ್ನುವಂತಾಗಿದೆ. ಸಾರಿಗೆ ನೌಕರರ ಭರವಸೆಗಳು ಐದು ವರ್ಷಗಳಾದರೂ ಈವರೆಗೂ ಈಡೇರಿಲ್ಲ. ಶಕ್ತಿ ಯೋಜನೆಯ ಎಫೆಕ್ಟ್‌ನಿಂದಾಗಿ ಸಾರಿಗೆ ನೌಕರರ ಕೆಲಸ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗಳು ಮಾತ್ರ ಈಡೇರಿಲ್ಲ.

ಇನ್ನು ಸರ್ಕಾರ ನೌಕರರ ಬಗ್ಗೆ ಒಂದು ರೀತಿ ತಾತ್ಸಾರ ಮನೋಭಾಔ ತಳೆದಿರುವುದರಿಂದ ಅಧಿಕಾರಿಗಳು/ನೌಕರರ ತಾಳ್ಮೆಕಟ್ಟೆಯೂ ಒಡೆಯುವ ಹಂತ ತಲುಪಿದೆ. ಈಗಾಗಿ ಮಾರ್ಚ್ 22ರೊಳಗೆ ಸರ್ಕಾರಿ ನೌಕರರಂತೆ ನಮಗೂ ವೇತನ ಆಯೋಗ ಮಾದರಿಯಲೇ ಸಂಬಳ  ಕೊಡುತ್ತೇವೆ ಎಂದು ಘೋಷಣೆ ಮಾಡಬೇಕು ಇಲ್ಲದಿದ್ದರೆ ಮಾ.25ರ ನಂತರ ಮುಷ್ಕರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ ನೀಡಬೇಕು. 7ನೇ ವೇತನ ಆಯೋಗ ಜಾರಿ ಆಗಬೇಕು. 38 ತಿಂಗಳ ವೇತನ ಹಿಂಬಾಕಿ ನೀಡಬೇಕು. 2021ರ ವೇಳೆ ಮುಷ್ಕರದಲ್ಲಿ ವಜಾಗೊಂಡ ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರಮುಖ ಬೇಡಿಕೆಗಳನ್ನು ನೌಕರರ ಒಕ್ಕೂಟ ಇಟ್ಟಿದೆ.

ಈ ನಡುವೆ ಅಧಿಕಾರಿಗಳು ಹೋರಾಟಕ್ಕೆ ಬಂದರೆ ಮಾತ್ರ ನಾವು ಮುಷ್ಕರಕ್ಕೆ ಮುಂದಾಗುತ್ತೇವೆ ಇಲ್ಲದಿದ್ದರೆ ಅಧಿಕಾರಿಗಳಿಗೆ ಆದಂತೆಯೇ ನಮಗೂ ಆಗಲಿ ಬಿಡಿ. ಅವರು ಹೋರಾಟ ಮಾಡದೆ ನಮ್ಮ ಹೋರಾಟದ ಫಲವನ್ನು ಪಡೆಯುತ್ತಾರೆ. ಆದರೆ ನಾವು ಹೋರಾಟ ಮಾಡಿ ಮುಂಚೂಣಿಯಲ್ಲಿ ಗುರುತಿಸಿಕೊಂಡರೆ ನಮ್ಮನೇ ವಜಾ, ಅಮಾಣತು ಮಾಡಿ ಇದೇ ಅಧಿಕಾರಿ ವರ್ಗ ಇನ್ನಿಲ್ಲದಂತ ಕಿರುಕುಳ ಕೊಡುತ್ತದೆ. ಇದು ನಮಗೇ ಬೇಕಿಲ್ಲ ಎಂದು ನೌಕರರು ಪಟ್ಟುಹಿಡಿದು ಕುಳಿತ್ತಿದ್ದಾರೆ.

ಈ ನಡುವೆ ಅಧಿಕಾರಿಗಳು ನಾವು ಯಾವುದೇ ಕಾರಣಕ್ಕೂ ಬಸ್‌ ನಿಲ್ಲಿಸಿ ಮುಷ್ಕರ ಮಾಡುವುದನ್ನು ಬೆಂಬಲಿಸುವುದಿಲ್ಲ ಬದಲಿಗೆ ಶಾಂತಿಯುತ ಧರಣಿ ಮಾಡಿದರೆ ಬಾಹ್ಯ ಬೆಂಬಲ ನೀಡುತ್ತೇವೆ ಎಂದು ಅಧಿಕಾರಿಗಳ ಸಂಘದ ಮುಖಂಡರು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...