ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರು ಶುಕ್ರವಾರ ಮಂಡಿಸಿದ ಮುಖ್ಯಮಂತ್ರಿಗಳ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವು ಈಡೇರಲೇ ಇಲ್ಲ. ಹೀಗಾಗಿ ಸಾರಿಗೆ ನೌಕರರು ಭಾರಿ ನಿರಾಸೆಗೊಂಡಿದ್ದಾರೆ.
ಪ್ರಸ್ತುತ ಸರ್ಕಾರ ಹಾಗೂ ಸಾರಿಗೆ ನೌಕರರ ಪರಿಸ್ಥಿತಿ ನಾ ಕೊಡೆ, ನೀ ಬಿಡೇ ಎನ್ನುವಂತಾಗಿದೆ. ಸಾರಿಗೆ ನೌಕರರ ಭರವಸೆಗಳು ಐದು ವರ್ಷಗಳಾದರೂ ಈವರೆಗೂ ಈಡೇರಿಲ್ಲ. ಶಕ್ತಿ ಯೋಜನೆಯ ಎಫೆಕ್ಟ್ನಿಂದಾಗಿ ಸಾರಿಗೆ ನೌಕರರ ಕೆಲಸ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗಳು ಮಾತ್ರ ಈಡೇರಿಲ್ಲ.
ಇನ್ನು ಸರ್ಕಾರ ನೌಕರರ ಬಗ್ಗೆ ಒಂದು ರೀತಿ ತಾತ್ಸಾರ ಮನೋಭಾಔ ತಳೆದಿರುವುದರಿಂದ ಅಧಿಕಾರಿಗಳು/ನೌಕರರ ತಾಳ್ಮೆಕಟ್ಟೆಯೂ ಒಡೆಯುವ ಹಂತ ತಲುಪಿದೆ. ಈಗಾಗಿ ಮಾರ್ಚ್ 22ರೊಳಗೆ ಸರ್ಕಾರಿ ನೌಕರರಂತೆ ನಮಗೂ ವೇತನ ಆಯೋಗ ಮಾದರಿಯಲೇ ಸಂಬಳ ಕೊಡುತ್ತೇವೆ ಎಂದು ಘೋಷಣೆ ಮಾಡಬೇಕು ಇಲ್ಲದಿದ್ದರೆ ಮಾ.25ರ ನಂತರ ಮುಷ್ಕರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ ನೀಡಬೇಕು. 7ನೇ ವೇತನ ಆಯೋಗ ಜಾರಿ ಆಗಬೇಕು. 38 ತಿಂಗಳ ವೇತನ ಹಿಂಬಾಕಿ ನೀಡಬೇಕು. 2021ರ ವೇಳೆ ಮುಷ್ಕರದಲ್ಲಿ ವಜಾಗೊಂಡ ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರಮುಖ ಬೇಡಿಕೆಗಳನ್ನು ನೌಕರರ ಒಕ್ಕೂಟ ಇಟ್ಟಿದೆ.
ಈ ನಡುವೆ ಅಧಿಕಾರಿಗಳು ಹೋರಾಟಕ್ಕೆ ಬಂದರೆ ಮಾತ್ರ ನಾವು ಮುಷ್ಕರಕ್ಕೆ ಮುಂದಾಗುತ್ತೇವೆ ಇಲ್ಲದಿದ್ದರೆ ಅಧಿಕಾರಿಗಳಿಗೆ ಆದಂತೆಯೇ ನಮಗೂ ಆಗಲಿ ಬಿಡಿ. ಅವರು ಹೋರಾಟ ಮಾಡದೆ ನಮ್ಮ ಹೋರಾಟದ ಫಲವನ್ನು ಪಡೆಯುತ್ತಾರೆ. ಆದರೆ ನಾವು ಹೋರಾಟ ಮಾಡಿ ಮುಂಚೂಣಿಯಲ್ಲಿ ಗುರುತಿಸಿಕೊಂಡರೆ ನಮ್ಮನೇ ವಜಾ, ಅಮಾಣತು ಮಾಡಿ ಇದೇ ಅಧಿಕಾರಿ ವರ್ಗ ಇನ್ನಿಲ್ಲದಂತ ಕಿರುಕುಳ ಕೊಡುತ್ತದೆ. ಇದು ನಮಗೇ ಬೇಕಿಲ್ಲ ಎಂದು ನೌಕರರು ಪಟ್ಟುಹಿಡಿದು ಕುಳಿತ್ತಿದ್ದಾರೆ.
ಈ ನಡುವೆ ಅಧಿಕಾರಿಗಳು ನಾವು ಯಾವುದೇ ಕಾರಣಕ್ಕೂ ಬಸ್ ನಿಲ್ಲಿಸಿ ಮುಷ್ಕರ ಮಾಡುವುದನ್ನು ಬೆಂಬಲಿಸುವುದಿಲ್ಲ ಬದಲಿಗೆ ಶಾಂತಿಯುತ ಧರಣಿ ಮಾಡಿದರೆ ಬಾಹ್ಯ ಬೆಂಬಲ ನೀಡುತ್ತೇವೆ ಎಂದು ಅಧಿಕಾರಿಗಳ ಸಂಘದ ಮುಖಂಡರು ತಿಳಿಸಿದ್ದಾರೆ.
Related

You Might Also Like
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...
ಕೊಪ್ಪಳ: ಭಾರೀ ಮಳೆಗೆ ಕುಸಿದ ಮನೆ ಒಂದೂವರೆ ವರ್ಷದ ಮಗು ಸಾವು, 6 ಮಂದಿಗೆ ಗಾಯ
ಕೊಪ್ಪಳ: ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗುವೊಂದು ಮೃಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮನೆ...
ದ.ಕ.ದಲ್ಲಿ ವರುಣನ ಅಬ್ಬರ- ಮಣ್ಣಗುಂಡಿ ಬಳಿ ಗುಡ್ಡಕುಸಿತ: BM ಹೆದ್ದಾರಿ ಬಂದ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ,...
ಅತ್ತಹಳ್ಳಿಯ ಎ.ಸಿ.ಲಿಂಗೇಗೌಡರ ಪುತ್ರ ರಾಘವ ಲಿಂಗೇಗೌಡ ನಿಧನ
ಮೈಸೂರು: ನಗರದ ತಿ.ನರಸೀಪುರ ರಸ್ತೆಯ ಜಿ.ಎಲ್.ಗಾರ್ಡನ್ ನಿವಾಸಿ ಲಂಡನ್ನಲ್ಲಿ ಕೆಲಸದಲ್ಲಿದ್ದ ರಾಘವ ಲಿಂಗೇಗೌಡ (49) ಬುಧವಾರ ಸಂಜೆ ನಿಧನರಾದರು. ಮೂಲತಃ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಅತ್ತಹಳ್ಳಿ...
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...