Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿರುವುದು ದುರದೃಷ್ಟಕರ. ಅದು ಹೋಗಲಿ 7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಸಾರಿಗೆ ಸಚಿವರೊಂದಿಗೆ ನಾವು ಕೂಡ ಸಿಎಂ ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ ತಿಳಿಸಿದರು.

ಇತ್ತೀಚೆಗೆ ನಗರದಲ್ಲಿ ನಡೆದ ಕಾಠ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಿಗೆ ಸಚಿವರು, ನಾವೇ ನಮ್ಮ ಸಿಬ್ಬಂದಿ ಹಿತ ಕಾಪಾಡುವ ಕೆಲಸ ಮಾಡ ಬೇಕು. ನೌಕರರಿಗೆ ಆರ್ಥಿಕ ಹೊರೆಯಾಗದಂತೆ ನ್ಯಾಯಯುತ ಸೌಲಭ್ಯಗಳನ್ನು ಕೊಡದಿದ್ದರೆ ಬದುಕಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರಿಗೆ ಸಂಸ್ಥೆ ನೌಕರರು ಪರಿಶ್ರಮದಿಂದ ಕೆಲಸ ಮಾಡುತ್ತಾರೆ. ಅವರ ಶ್ರಮಕ್ಕೆ ತಕ್ಕ ವೇತನ ದೊರೆಯುತ್ತಿಲ್ಲ. ನಾನು ಹಾಗೂ ಸಾರಿಗೆ ಸಚಿವರು ಸೇರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಜ.6ರಿಂದ ಜಾರಿಗೆ ಬಂದಿರುವ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ನಮ್ಮಲ್ಲೂ ಶೀಘ್ರದಲ್ಲೇ ಕಲ್ಪಿಸಲಾಗುವುದು ಈ ನಿಟ್ಟಿನಲ್ಲಿ ನಾವು ಕೂಡ ಯೋಜನೆ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದರು.

ಇನ್ನು ನೌಕರರು ಎಸಗುವ ಸಣ್ಣಪುಟ್ಟ ತಪ್ಪಿಗೆ ದೊಡ್ಡ ಶಿಕ್ಷೆ ಆಗುತ್ತಿದ್ದು, ವಾಸ್ತವ ಅರಿತು ಕ್ರಮ ಕೈಗೊಳ್ಳುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ನೌಕರರು ಕೂಡ ಯಾವುದೆ ತಪ್ಪಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಹೇಳಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...