ಕೆಎಸ್ಆರ್ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗಿನ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗಿನ ಸಂಧಾನ ಸಭೆ ವಿಫಲವಾಗಿದ್ದು ನಾಳೆ ಸಾರಿಗೆ ಮುಷ್ಕರ ನಡೆಯಲಿದೆ.
1.15 ಲಕ್ಷ ಸರ್ಕಾರಿ ಸಾರಿಗೆ ನೌಕರು ಬಂದ್ನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದು ರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆಯಿದೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಅಧಿವೇಶನದ ನಂತರ ವೇತನ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಆದರೆ, ಈ ಆಫರ್ ಅನ್ನು ತಿರಸ್ಕರಿಸಿದ ಜಂಟಿ ಕ್ರಿಯಾ ಸಮಿತಿ ನಾಯಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಸಭೆಯ ಬಳಿಕ ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್ ಮಾತನಾಡಿ, 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯಲ್ಲಿ 24 ತಿಂಗಳು ಬಿಡಿ ಎಂದು ಸಿಎಂ ಕೇಳಿದ್ದಾರೆ.
ಆದರೆ, ನಾವು 24 ತಿಂಗಳ ಹಿಂಬಾಕಿ ನೀಡಲು ಸಾಧ್ಯವಿಲ್ಲ. 14 ತಿಂಗಳು ಆರಿಯರ್ಸ್ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ನಾವು 38 ತಿಂಗಳ ಹಿಂಬಾಕಿಯನ್ನು ಕೊಡಲೇ ಬೇಕು ಎಂದು ಕೇಳಿರುವುದಾಗಿ ತಿಳಿಸಿದ್ದಾರೆ.
ಇನ್ನು 2024ರ ಜನವರಿ 1ರಿಂದ ಆಗಿಬೇಕಿರುವ ವೇತನ ಪರಿಷ್ಕರಣೆ ಬಗ್ಗೆಯೂ ನಮಗೆ ಭರವಸೆ ಸಿಕ್ಕಿಲ್ಲ. ಹೀಗಾಗಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.

Related
