NEWSನಮ್ಮಜಿಲ್ಲೆನಮ್ಮರಾಜ್ಯ

ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ
  • ಫ್ರೀಡಂಪಾರ್ಕ್‌ನಲ್ಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅನುಮತಿದಲು ಮತ್ತೊಂದು ಅರ್ಜಿ ಕೊಡಿ: ಪೊಲೀಸ್‌ ಅಧಿಕಾರಿಗಳು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸುವಂತ ಒತ್ತಾಯಿಸಿ ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನೌಕರರನ್ನು ಪೊಲೀಸರು ಬಂಧಿಸಿ ಮೈಸೂರು ರಸ್ತೆಯಲ್ಲಿರುವ ಸಿಆರ್‌ಪಿಎಫ್‌ ಮೈದಾನದಲ್ಲಿ ಬಿಟ್ಟಿದ್ದರು.

ಇಂದು ಸಂಜೆ 4ಗಂಟೆ ಸುಮಾರಿಗೆ ಸಿಆರ್‌ಪಿಎಫ್‌ ಮೈದಾನದಲ್ಲಿ ಬಿಟ್ಟಿದ್ದರು. ಆ ವೇಳೆ ನಾವು ಇಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ನೌಕರರು ಹೇಳಿ ಮುಂದುವರಿಸುತ್ತಿದ್ದರು. ಈಗ ಸಿಆರ್‌ಪಿಎಫ್‌ ಮೈದಾನದಿಂದ ಹೊರಕಳಿಸಲು ಪೊಲೀಸರು ಯತ್ನಿಸಿದ್ದಾರೆ. ಆದರೆ, ಒಕ್ಕೂಟದ ಪದಾಧಿಕಾರಿಗಳು ಇಲ್ಲ ನಾವು ಇಲ್ಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಪಟ್ಟುಹಿಡಿದ್ದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳನ್ನು ಸಮಾಧಾನಪಡಿಸಿರುವ ಪೊಲೀಸರು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಬಂದು ಮತ್ತೊಂದು ಅರ್ಜಿಕೊಡಿ ನಾವು ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅವಕಾಶ ಮಾಡಿಕೊಡುತ್ತೇವೆ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಮಾತನಾಡುತ್ತೇವೆ ಎಂದು ಹೇಳಿ ಸಿಆರ್‌ಪಿಎಫ್‌ ಮೈದಾನದಿಂದ ಉಪ್ಪಾರುಪೇಟೆ ಪೊಲೀಸ್‌ ಠಾಣೆಗೆ ಮುಖಂಡರನ್ನು ಕರೆಸಿಕೊಂಡಿದ್ದಾರೆ.

ಒಂದು ವೇಳೆ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅನುಮತಿಸದಿದ್ದರೆ ನಾವು ಪೊಲೀಸ್‌ ಠಾಣೆ ಮುಂದೆಯೇ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಒಕ್ಕೂಟ ಪದಾಧಿಕಾರಿಗಳು ವಿಜಯಪಥಕ್ಕೆ ತಿಳಿಸಿದ್ದಾರೆ.

ಇನ್ನು ನೌಕರರು ಕೂಡ ಇದೆಲ್ಲವನ್ನು ಗಮನಿಸುತ್ತಿದ್ದು, ಸರ್ಕಾರ ಹಾಗೂ ಪೊಲೀಸರು ಇದೇ ರೀತಿ ನೌಕರರ ಬಗ್ಗೆ ಕೀಳಾಗಿ ಕಾಣುವುದನ್ನು ಮುಂದುವರಿಸಿದರೆ ಬಸ್‌ಗಳನ್ನೇ ನಿಲ್ಲಿಸಿ ಹೋರಾಟ ಮಾಡುವುದಕ್ಕೂ ಈಗಾಗಲೇ ತರೆಮರೆಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ನಾವು ಕೂಡ ಕಳೆದ 2021ರಿಂದ ಇಲ್ಲಿಯವರೆಗೂ ಕಾದು ನೋಡಿದ್ದು ಆಯಿತು ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ತಾಳ್ಮೆಯನ್ನೇ ಅಶಕ್ತಿಯಂದು ಅಂದುಕೊಳ್ಳುತ್ತಿರುವ ಸರ್ಕಾರಕ್ಕೆ ಹಾಗೂ ಸಾರಿಗೆ ಸಚಿವರಿಗೆ ಬುದ್ಧಿ ಕಲಿಸುವ ಕಾಲ ಬಂದಂತೆ ಕಾಣುತ್ತಿದೆ. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಬಸ್‌ ನಿಲ್ಲಿಸಿ ಹೋರಾಟ ಮಾಡಬೇಕಾಗುತ್ತದೆ ಎಂಬ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಕೂಡ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.

ನೌಕರರು ಕೂಡ ಸಂಘಟನೆಗಳ ಮುಖಂಡರ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡುತ್ತಿದ್ದು, ಸರ್ಕಾರ ಇದೇ ರೀತಿ ಮೊಂಡುತನ ಪ್ರದರ್ಶಿಸುವುದನ್ನು ಮುಂದುವರಿಸಿದರೆ ಇನ್ನೊದೆರಡು ದಿನದಲ್ಲಿ ರಾಜ್ಯದಲ್ಲಿ ನಾಲ್ಕೂ ಸಾರಿಗೆ ಬಸ್‌ಗಳು ಸ್ತಬ್ದವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಪ್ರಮುಖವಾಗಿ ಈ ಹೋರಾಟಕ್ಕೆ ಈ ಬಾರಿ ಸಾರಿಗೆ ನೌಕರರ ಜತೆಗೆ ಪರೋಕ್ಷವಾಗಿ ಅಧಿಕಾರಿಗಳು ಕೂಡ ಸಾಥ್‌ ನೀಡುವುದಕ್ಕೆ ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು ಸರ್ಕಾರವನ್ನು ಸಮಸ್ತ ಸಾರಿಗೆ ಅಧಿಕಾರಿಗಳು ಹಾಗೂ ನೌಕರರ ಕಟ್ಟಿಹಾಕುವುದಕ್ಕೆ ಸಜ್ಜಾಗಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಒಂದು ದೃಢನಿರ್ಧಾರಕ್ಕೆ ಬಂದು ಸಮಾನ ವೇತನ ಜಾರಿ ಮಾಡುವುದಕ್ಕೆ ಮುಂದಾಗಬೇಕಿದೆ. ಅದು ತಡವಾದರೆ ಮಧ್ಯಂತರ ಪರಿಹಾರ ಘೋಷಣೆ ಮಾಡಬೇಕು ಎಂದು ನೌಕರರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಒಟ್ಟಾರೆ ಸಾರಿಗೆ ನೌಕರರ ಒಕ್ಕೂಟ ಏನು ಇಂದಿನಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ನಾಔಉ ಎಲ್ಲಿ ಇರುತ್ತೇವೋ ಅಲ್ಲೇ ಮುಂದುವರಿಸುತ್ತೇವೆ ಎಂದು ಪಟ್ಟುಹಿಡಿದ್ದಾರೆ. ಸಮಸ್ತ ನೌಕರರು ಕೂಡ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದು, ಇದು ನಮ್ಮ ಭವಿಷ್ಯದ ಹೋರಾಟ ಎಂದು ಕರೆ ನೀಡಿದ್ದಾರೆ.

ಇನ್ನು ನೌಕರರು ಕೂಡ ಈ ಬಗ್ಗೆ ಭಾರಿ ಚರ್ಚೆಯಲ್ಲಿ ತೊಡಗಿದ್ದು ಸರ್ಕಾರ ಇನ್ನೇರಡು ದಿನದೊಳಗೆ ತನ್ನ ತೀರ್ಮಾನವನ್ನು ತಿಳಿಸದಿದ್ದರೆ ಬಸ್‌ ನಿಲ್ಲಿಸುವುದು ಪಕ್ಕ ಎಂದು ಹೇಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು ಮೈಸೂರು: ಹೆಚ್ಚುವರಿ ಹಣ 100 ರೂ. ಪಾವತಿಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ... KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು KSRTC ನೆಲಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನತ್ತ ಹೊರಟ ಪಾದಯಾತ್ರೆ: ಆಮರಣಾಂತ ಉಪವಾಸ ಸತ್ಯಾಗ್ರಹ ! KSRTC: ಸರ್ಕಾರದ ವಿಳಂಬ ನೀತಿ ಖಂಡಿಸಿ ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಆಮರಣಾಂತ ಉಪವಾಸ ಸತ್ಯಾಗ್ರಹ NWKRTC: ಜಾತಿರಹಿತ ಲಿಂಗ ತಾರತಮ್ಯ ಇಲ್ಲದ ಸಮಾಜ ಕಟ್ಟಲು ಶ್ರಮಿಸಿದವರು ಬಸವಣ್ಣ: ಸಾರಿಗೆ ಅಧಿಕಾರಿ ಅಶೋಕ ಪಾಟೀಲ